ಬ್ರೇಕಿಂಗ್ ನ್ಯೂಸ್
14-10-20 11:16 am Headline Karnataka News Network ದೇಶ - ವಿದೇಶ
ಶ್ರೀನಗರ, ಅಕ್ಟೋಬರ್. 14 : ಒಂದು ವರ್ಷಕ್ಕೂ ಹೆಚ್ಚು ಕಾಲ ಬಂಧನದಲ್ಲಿದ್ದ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರನ್ನು ರಾಜ್ಯ ಸರ್ಕಾರ ಮಂಗಳವಾರ ಬಿಡುಗಡೆ ಮಾಡಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ ಬಳಿಕ, ಗೃಹ ಬಂಧನಕ್ಕೆ ಗುರಿಯಾಗಿದ್ದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಬರೊಬ್ಬರಿ 14 ತಿಂಗಳ ಬಳಿಕ ಬಿಡುಗಡೆಯಾಗಿದ್ದಾರೆ. ಈ ಮೂಲಕ ಕಣಿವೆಯ ಮತ್ತೋರ್ವ ಮಾಜಿ ಮುಖ್ಯಮಂತ್ರಿ ಗೃಹ ಬಂಧನದಿಂದ ಮುಕ್ತಿ ಪಡೆದಂತಾಗಿದೆ.
2019ರ ಆಗಸ್ಟ್ 5ರಂದು ಕೇಂದ್ರ ಸರ್ಕಾರ ಆರ್ಟಿಕಲ್ 370 ತೆಗೆಯುವ ನಿರ್ಧಾರ ಕೈಗೊಂಡ ಸಂದರ್ಭದಲ್ಲಿ ಮುಫ್ತಿ ಅವರನ್ನ ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ತೆಗೆದುಕೊಳ್ಳಲಾಗಿತ್ತು. ಈ ವರ್ಷದ ಫೆಬ್ರವರಿ 5ರಂದು ಸಾರ್ವಜನಿಕ ಸುರಕ್ಷತೆ ಕಾಯ್ದೆ ಪಿಎಸ್ಎ ಅಡಿಯಲ್ಲಿ ಅವರ ಬಂಧನದ ಅವಧಿಯನ್ನು ಮುಂದುವರಿಸಲಾಗಿತ್ತು. ಅವರ ಬಂಧನ ಅವಧಿಯನ್ನು ಇದುವರೆಗೂ ವಿಸ್ತರಿಸುತ್ತಾ ಬರಲಾಗಿತ್ತು. ಮೆಹಬೂಬ ಅವರ ಮಗಳು ಇಲ್ತಿಜಾ ಮುಫ್ತಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ಮೆಹಬೂಬ ಮುಫ್ತಿ ಬಿಡುಗಡೆಗೆ ಗಡುವು ನಿಗದಿಪಡಿಸಿತ್ತು.
ಇನ್ನು ಬಿಡುಗಡೆಯಾಗುತ್ತಿದ್ದಂತೆ ಕಪ್ಪು ಆಡಿಯೋ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಮೆಹಬೂಬಾ ಕಿಡಿ ಕಾರಿದ್ದು, ಟ್ವಿಟರ್ನಲ್ಲಿಯೂ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿ, ಒಂದೂ ವರ್ಷಕ್ಕೂ ಹೆಚ್ಚು ಕಾಲ ಅಂದರೆ 14 ತಿಂಗಳ ಬಳಿಕ ಬಿಡುಗಡೆ ಹೊಂದಿದ್ದೇನೆ. 370ನೇ ವಿಧಿ ರದ್ದುಗೊಳಿಸಿದ ಕೇಂದ್ರದ ಕ್ರೂರ ನಿರ್ಧಾರದ ಬಗ್ಗೆ ನಾನು ಯಾವಾಗಲೂ ಯೋಚಿಸುತ್ತಿದ್ದೇನೆ. ಸರ್ಕಾರ ವಿಶೇಷ ಸ್ಥಾನಮಾನವನ್ನು ಮರಳಿಸಬೇಕು ಹಾಗೂ ದೇಶದ ಹಲವು ಭಾಗಗಳಲ್ಲಿ ಜೈಲಿನಲ್ಲಿ ಬಳಲುತ್ತಿರುವವರನ್ನು ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು. ಇದು ಸುಲಭವಲ್ಲ ಎಂದು ನನಗೆ ತಿಳಿದಿದೆ. ಆದರೆ ನಾವೆಲ್ಲರೂ ಹೋರಾಡಬೇಕಿದೆ ಎಂದಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm