ಬ್ರೇಕಿಂಗ್ ನ್ಯೂಸ್
14-10-20 11:16 am Headline Karnataka News Network ದೇಶ - ವಿದೇಶ
ಶ್ರೀನಗರ, ಅಕ್ಟೋಬರ್. 14 : ಒಂದು ವರ್ಷಕ್ಕೂ ಹೆಚ್ಚು ಕಾಲ ಬಂಧನದಲ್ಲಿದ್ದ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರನ್ನು ರಾಜ್ಯ ಸರ್ಕಾರ ಮಂಗಳವಾರ ಬಿಡುಗಡೆ ಮಾಡಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ ಬಳಿಕ, ಗೃಹ ಬಂಧನಕ್ಕೆ ಗುರಿಯಾಗಿದ್ದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಬರೊಬ್ಬರಿ 14 ತಿಂಗಳ ಬಳಿಕ ಬಿಡುಗಡೆಯಾಗಿದ್ದಾರೆ. ಈ ಮೂಲಕ ಕಣಿವೆಯ ಮತ್ತೋರ್ವ ಮಾಜಿ ಮುಖ್ಯಮಂತ್ರಿ ಗೃಹ ಬಂಧನದಿಂದ ಮುಕ್ತಿ ಪಡೆದಂತಾಗಿದೆ.
2019ರ ಆಗಸ್ಟ್ 5ರಂದು ಕೇಂದ್ರ ಸರ್ಕಾರ ಆರ್ಟಿಕಲ್ 370 ತೆಗೆಯುವ ನಿರ್ಧಾರ ಕೈಗೊಂಡ ಸಂದರ್ಭದಲ್ಲಿ ಮುಫ್ತಿ ಅವರನ್ನ ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ತೆಗೆದುಕೊಳ್ಳಲಾಗಿತ್ತು. ಈ ವರ್ಷದ ಫೆಬ್ರವರಿ 5ರಂದು ಸಾರ್ವಜನಿಕ ಸುರಕ್ಷತೆ ಕಾಯ್ದೆ ಪಿಎಸ್ಎ ಅಡಿಯಲ್ಲಿ ಅವರ ಬಂಧನದ ಅವಧಿಯನ್ನು ಮುಂದುವರಿಸಲಾಗಿತ್ತು. ಅವರ ಬಂಧನ ಅವಧಿಯನ್ನು ಇದುವರೆಗೂ ವಿಸ್ತರಿಸುತ್ತಾ ಬರಲಾಗಿತ್ತು. ಮೆಹಬೂಬ ಅವರ ಮಗಳು ಇಲ್ತಿಜಾ ಮುಫ್ತಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ಮೆಹಬೂಬ ಮುಫ್ತಿ ಬಿಡುಗಡೆಗೆ ಗಡುವು ನಿಗದಿಪಡಿಸಿತ್ತು.
ಇನ್ನು ಬಿಡುಗಡೆಯಾಗುತ್ತಿದ್ದಂತೆ ಕಪ್ಪು ಆಡಿಯೋ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಮೆಹಬೂಬಾ ಕಿಡಿ ಕಾರಿದ್ದು, ಟ್ವಿಟರ್ನಲ್ಲಿಯೂ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿ, ಒಂದೂ ವರ್ಷಕ್ಕೂ ಹೆಚ್ಚು ಕಾಲ ಅಂದರೆ 14 ತಿಂಗಳ ಬಳಿಕ ಬಿಡುಗಡೆ ಹೊಂದಿದ್ದೇನೆ. 370ನೇ ವಿಧಿ ರದ್ದುಗೊಳಿಸಿದ ಕೇಂದ್ರದ ಕ್ರೂರ ನಿರ್ಧಾರದ ಬಗ್ಗೆ ನಾನು ಯಾವಾಗಲೂ ಯೋಚಿಸುತ್ತಿದ್ದೇನೆ. ಸರ್ಕಾರ ವಿಶೇಷ ಸ್ಥಾನಮಾನವನ್ನು ಮರಳಿಸಬೇಕು ಹಾಗೂ ದೇಶದ ಹಲವು ಭಾಗಗಳಲ್ಲಿ ಜೈಲಿನಲ್ಲಿ ಬಳಲುತ್ತಿರುವವರನ್ನು ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು. ಇದು ಸುಲಭವಲ್ಲ ಎಂದು ನನಗೆ ತಿಳಿದಿದೆ. ಆದರೆ ನಾವೆಲ್ಲರೂ ಹೋರಾಡಬೇಕಿದೆ ಎಂದಿದ್ದಾರೆ.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm