ಬ್ರೇಕಿಂಗ್ ನ್ಯೂಸ್
25-11-22 07:43 pm HK News Desk ದೇಶ - ವಿದೇಶ
ನವದೆಹಲಿ, ನ.25: ಪ್ರೇಯಸಿಯನ್ನು 35 ಪೀಸ್ ಗಳನ್ನಾಗಿ ತುಂಡರಿಸಿ ಕಾಡಿಗೆಸೆದು ಸಾಕ್ಷ್ಯ ನಾಶ ಮಾಡಿದ್ದ ಹಂತಕ ಅಫ್ತಾಬ್ ಪೂನಾವಾಲನನ್ನು ಪೊಲೀಸರು ಮಂಪರು ಪರೀಕ್ಷೆಗೆ ಒಳಪಡಿಸಿದ್ದಾರೆ. ಗುರುವಾರ ಎಂಟು ಗಂಟೆಗಳ ಕಾಲ ಮಂಪರು ಪರೀಕ್ಷೆ ನಡೆಸಿದ್ದು, 50ಕ್ಕಿಂತಲೂ ಹೆಚ್ಚು ಪ್ರಶ್ನೆಗಳನ್ನು ಕೇಳಿ ಉತ್ತರಗಳನ್ನು ಪಡೆದಿದ್ದಾರೆ.
ದೆಹಲಿಯ ರೋಹಿಣಿಯಲ್ಲಿರುವ ಫಾರೆನ್ಸಿಕ್ ಸೈನ್ಸ್ ಲ್ಯಾಬ್ ನಲ್ಲಿ ಮಂಪರು ಪರೀಕ್ಷೆ ನಡೆದಿದ್ದು, ಬಾಲ್ಯ, ಆತನ ಕುಟುಂಬಸ್ಥರು, ಶ್ರದ್ಧಾ, ಆಕೆಯ ಕೊಲೆ, ಯಾಕಾಗಿ ಕೊಲೆ ನಡೆಸಿದ್ದು ಇತ್ಯಾದಿ ಪ್ರಶ್ನೆಗಳನ್ನು ಕೇಳಿದ್ದಾರೆ. ಅಧಿಕಾರಿಗಳು ಹಿಂದಿಯಲ್ಲಿ ಪ್ರಶ್ನೆ ಕೇಳಿದ್ದು, ಅಫ್ತಾಬ್ ಎಲ್ಲದಕ್ಕೂ ಇಂಗ್ಲಿಷಿನಲ್ಲಿ ಉತ್ತರ ನೀಡಿದ್ದಾನೆ. ಪ್ರಮುಖವಾಗಿ ಶ್ರದ್ಧಾ ಕೊಲೆ ಮಾಡಲು ಏನು ಕಾರಣ, ಆಕೆಯ ದೇಹದ ತುಂಡುಗಳನ್ನು ಯಾವೆಲ್ಲ ಭಾಗದಲ್ಲಿ ಹಾಕಿದ್ದೀಯ ಎಂಬ ಬಗ್ಗೆ ಪ್ರಶ್ನೆ ಕೇಳಿದ್ದಾರೆ. ಅಲ್ಲದೆ, ಆಕೆಯ ಫೋನನ್ನು ಎಲ್ಲಿ ಬಚ್ಚಿಟ್ಟಿದ್ದೀಯಾ ಎಂಬ ಬಗ್ಗೆಯೂ ಪ್ರಶ್ನೆ ಕೇಳಿ ಉತ್ತರ ಪಡೆದಿದ್ದಾರೆ. ಶ್ರದ್ಧಾ ಬಳಸುತ್ತಿದ್ದ ಫೋನ್ ಸಿಗದೇ ಇರುವುದರಿಂದ ಸಾಕ್ಷ್ಯಗಳನ್ನು ಕಲೆಹಾಕುವುದು ಪೊಲೀಸರಿಗೆ ಸವಾಲಾಗಿದೆ. ಬುಧವಾರ ಜ್ವರ, ಶೀತ ಇದ್ದುದರಿಂದ ಮಂಪರು ಪರೀಕ್ಷೆ ನಡೆಸಿರಲಿಲ್ಲ. ಗುರುವಾರ ಬಿಪಿ ಚೆಕ್ ಮಾಡಿ, ಅರೆ ಪ್ರಜ್ಞೆಗೆ ಗುರಿಪಡಿಸಿ ಪರೀಕ್ಷೆಗೆ ಒಡ್ಡಲಾಗಿದೆ. ಶ್ರದ್ಧಾಳ ಶವವನ್ನು ಕತ್ತರಿಸಲು ಬಳಸಿದ ಆಯುಧವೂ ಸಿಕ್ಕಿಲ್ಲ. ಅದರ ಬಗ್ಗೆಯೂ ಪ್ರಶ್ನೆಗಳನ್ನು ಕೇಳಿದ್ದಾರೆ.
ಇದೇ ವೇಳೆ, ಶ್ರದ್ಧಾ ಮತ್ತು ಅಫ್ತಾಬ್ ಗೆಳೆಯರಿಂದಲೂ ಪೊಲೀಸರು ಹೇಳಿಕೆ ದಾಖಲು ಮಾಡಿದ್ದಾರೆ. ಶ್ರದ್ಧಾಳನ್ನು ಕೊಲ್ಲುವುದಾಗಿ ಬೆದರಿಕೆ ಒಡ್ಡುತ್ತಿದ್ದ ಬಗ್ಗೆ ಆಕೆಯ ಗೆಳೆತಿಯರು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಇದಲ್ಲದೆ, ಶ್ರದ್ಧಾ ಮತ್ತು ಅಫ್ತಾಬ್ ಗೆ ಕಾಮನ್ ಫ್ರೆಂಡ್ ಆಗಿರುವ ಬೆಂಗಳೂರಿನಲ್ಲಿ ನೆಲೆಸಿರುವ ಕೆಲವರ ಹೇಳಿಕೆ ಪಡೆಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಕೆಲವು ಸ್ನೇಹಿತರು ಅಫ್ತಾಬ್ ಡ್ರಗ್ಸ್ ಸೇವಿಸುತ್ತಿದ್ದ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ನನ್ನನ್ನು ಕೊಲ್ಲುತ್ತಾನೆಂದು ದೂರು ನೀಡಿದ್ದ ಶ್ರದ್ಧಾ
ಈ ನಡುವೆ, 2020ರಲ್ಲಿ ಶ್ರದ್ಧಾ ವಾಲ್ಕರ್ ತನ್ನ ಪ್ರಿಯಕರ ಅಫ್ತಾಬ್ ವಿರುದ್ಧ ಮಹಾರಾಷ್ಟ್ರದ ಪಾಲ್ಘಾರ್ ಜಿಲ್ಲೆಯ ತುಲಿಂಜ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ಪತ್ರ ವೈರಲ್ ಆಗಿದೆ. ತನಗೆ ಅಫ್ತಾಬ್ ಹಲ್ಲೆ ನಡೆಸುತ್ತಿದ್ದಾನೆ, ತನ್ನನ್ನು ತುಂಡು ತುಂಡಾಗಿಸಿ ಕತ್ತರಿಸಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆಂದು ತನ್ನ ಹುಟ್ಟೂರು ಪಾಲ್ಘಾರ್ ಜಿಲ್ಲೆಯ ತುಲಿಂಜ್ ಪೊಲೀಸರಿಗೆ ದೂರು ಅರ್ಜಿ ಬರೆದಿದ್ದ. ದೂರು ಅರ್ಜಿ ಬರೆದಿರುವುದನ್ನು ತುಲಿಂಜ್ ಪೊಲೀಸರು ದೃಢಪಡಿಸಿದ್ದಾರೆ. ಹಳೆಯ ದೂರಿನ ಪ್ರತಿ ಈಗ ವೈರಲ್ ಆಗುತ್ತಿದ್ದು, ಎರಡು ವರ್ಷಗಳ ಹಿಂದೆಯೇ ಶ್ರದ್ಧಾಳನ್ನು ಕೊಲ್ಲಲು ಯೋಜನೆ ಹಾಕಿದ್ದನೇ ಎಂಬ ಬಗ್ಗೆ ಸಂಶಯ ಉಂಟಾಗಿದೆ.
ತನ್ನ ಮೇಲೆ ದಿನವೂ ಹಲ್ಲೆ ನಡೆಸುತ್ತಿದ್ದಾನೆ, ಕುತ್ತಿಗೆ ಹಿಸುಕಿ ಉಸಿರುಗಟ್ಟಿಸಿದ್ದಾನೆ. ಕಳೆದ ಆರು ತಿಂಗಳಿಂದ ನಾನು ಆತನ ಜೊತೆಗೆ ಒಟ್ಟಿಗಿದ್ದೇನೆ. ಇದು ಆತನ ಕುಟುಂಬಸ್ಥರಿಗೂ ಗೊತ್ತಿದೆ. ಅವರು ವೀಕೆಂಡಲ್ಲಿ ನಮ್ಮ ಮನೆಗೆ ಬರುತ್ತಾರೆ. ನನಗೆ ಹಲ್ಲೆ ನಡೆಸುವ ವಿಚಾರ ಅವರಿಗೂ ಗೊತ್ತಿದೆ. ಆದರೆ ಅವರೇನೂ ಮಾಡುವುದಿಲ್ಲ. ಈ ಬಗ್ಗೆ ಪೊಲೀಸರಿಗೆ ದೂರು ಕೊಟ್ಟರೆ, ಕೊಲ್ಲುವುದಾಗಿ ಬೆದರಿಸಿದ್ದಾನೆ. ಅಲ್ಲದೆ, ನನ್ನನ್ನು ಬ್ಲಾಕ್ಮೇಲ್ ಮಾಡುತ್ತಾನೆ, ನಾವು ಮದುವೆಯಾಗಲು ಬಯಸಿದ್ದೆವು. ಆದರೆ ಆತನ ಈ ರೀತಿಯ ವರ್ತನೆಯಿಂದ ಬೇಸತ್ತಿದ್ದೇನೆ. ಆತನಿಂದ ದೂರವಾಗಲು ಬಯಸಿದ್ದೇನೆ ಎಂದು ಪತ್ರದಲ್ಲಿ ಆಕೆ ಬರೆದಿದ್ದು, ಪೊಲೀಸರು ಅರ್ಜಿ ಸ್ವೀಕರಿಸಿದ್ದೂ ಆಗಿತ್ತು. ಆದರೆ ಆ ಬಗ್ಗೆ ಪೊಲೀಸರು ಯಾವುದೇ ಕ್ರಮ ಜರುಗಿಸಿರಲಿಲ್ಲ.
The polygraph test of Aaftab Ameen Poonwala, the prime accused in the Shraddha Walkar murder case, went on for about eight hours on Thursday at the Forensic Science Laboratory (FSL) in Delhi's Rohini. Poonawala was asked how he committed the crime, his relationship with Shraddha, where he hid the evidence and questions about his childhood and family, among other things.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm