ಬ್ರೇಕಿಂಗ್ ನ್ಯೂಸ್
14-10-20 12:40 pm Headline Karnataka News Network ದೇಶ - ವಿದೇಶ
ಚೆನ್ನೈ , ಅಕ್ಟೋಬರ್ .14: ತಮಿಳು ಸ್ಟಾರ್ ನಟ ಧನುಷ್ ಹಾಗೂ ಹಿರಿಯ ನಟ, ರಾಜಕಾರಣಿ ವಿಜಯಕಾಂತ್ ನಿವಾಸಕ್ಕೆ ಕಿಡಿಗೇಡಿಗಳು ಬಾಂಬ್ ಹಾಕುವ ಬೆದರಿಕೆ ಒಡ್ಡಿದ್ದಾರೆ.
ಬೆದರಿಕೆ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಇಬ್ಬರ ಮನೆಗಳಿಗೂ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪರಿಶೀಲನೆ ವೇಳೆ ಮನೆಯಲ್ಲಿ ಸಂಶಯಿತ ವಸ್ತು ಯಾವುದೂ ಸಿಗಲಿಲ್ಲ. ಹೀಗಾಗಿ ಇದೊಂದು ಸುಳ್ಳು ಬೆದರಿಕೆ ಆಗಿರಬಹುದು ಎನ್ನಲಾಗುತ್ತಿದೆ.
ನಟ ಧನುಷ್ ಅವರ ಚೆನ್ನೈನಲ್ಲಿರುವ ಅಭಿರಾಮಪುರಂ ನಿವಾಸ ಹಾಗೂ ವಿಜಯಕಾಂತ್ ಅವರ ವಿರುಗಂಬಕ್ಕಂನ ಮನೆಯಲ್ಲಿ ಬಾಂಬ್ ಇಡಲಾಗಿದೆ ಎಂದು ಎರಡು ಬಾರಿ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಬಂದಿತ್ತು. ಕೂಡಲೇ ಎಚ್ಚೆತ್ತ ಪೊಲೀಸರು, ಇಬ್ಬರ ನಿವಾಸಗಳಿಗೂ ತೆರಳಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಈ ಕರೆ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.
ಕಾರ್ಯಾಚರಣೆ ನಡೆಸಿದ ಬಳಿಕ ಎರಡೂ ಕರೆಗಳನ್ನು ಒಬ್ಬನೇ ಮಾಡಿರುವುದಾಗಿ ತಿಳಿದುಬಂದಿದೆ. ಘಟನೆಯ ಬಳಿಕ ವ್ಯಕ್ತಿಯ ಬಗ್ಗೆ ಪೊಲೀಸರು ತಪಾಸಣೆ ನಡೆಸಿದ್ದಾರೆ. ಆತನ ಬಗ್ಗೆ ಮಾಹಿತಿ ಗೊತ್ತಾಗಿದ್ದು ತಲೆಮರೆಸಿಕೊಂಡಿದ್ದಾನೆ. ಶೀಘ್ರದಲ್ಲೇ ಆತನನ್ನು ಬಂಧಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಳೆದ ಎರಡು ತಿಂಗಳಿಂದ ಕಾಲಿವುಡ್ ನಟರಿಗೆ ಬಾಂಬ್ ಬೆದರಿಕೆಗಳು ಹೆಚ್ಚಾಗುತ್ತಿದೆ. ಈ ಮೊದಲು ರಜನಿಕಾಂತ್, ವಿಜಯ್ ಮತ್ತು ಸೂರ್ಯ ಅವರಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿದ್ದವು. ಆದರೆ ಈ ಕರೆಗಳನ್ನು ಮಾನಸಿಕ ಅಸ್ವಸ್ಥ ವ್ಯಕ್ತಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.
ಜುಲೈ 18ರಂದು ನಟ ಅಜಿತ್ ಮನೆಯಲ್ಲಿ ಬಾಂಬ್ ಇರುವ ಬಗ್ಗೆ ಕರೆ ಬಂದಿತ್ತು. ಬಳಿಕ ಬಾಂಬ್ ಸ್ಕ್ವಾಡ್ ಅಧಿಕಾರಿಗಳು ಇಡೀ ಮನೆಯನ್ನು ಜಾಲಾಡಿದ್ದರೂ ಸುಳಿವು ಸಿಕ್ಕಿರಲಿಲ್ಲ. ಹೀಗಾಗಿ ಇದು ಸುಳ್ಳು ಕರೆ ಎಂದಿದ್ದರು.
Bomb threats were issued to Tamil stars Dhanush and Vijayakanth's residences in Chennai. The police officials immediately searched their houses and found it be a hoax.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm