ಬ್ರೇಕಿಂಗ್ ನ್ಯೂಸ್
27-11-22 05:30 pm HK News Desk ದೇಶ - ವಿದೇಶ
ನವದೆಹಲಿ, ನ.27: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಜಯ ಸಾಧಿಸಲಿದ್ದು, ಸರಕಾರ ರಚಿಸುವುದು ನಿಶ್ಚಿತ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ಮುಂದಿನ ವರ್ಷ ಜನವರಿ 31ರೊಳಗೆ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಲಿದ್ದು, ಅದಕ್ಕಾಗಿ ರಾಜ್ಯ ಸರಕಾರಿ ನೌಕರರು ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸಬೇಕು ಎಂದು ಕರೆ ನೀಡಿದ್ದಾರೆ. ಸೂರತ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಜ್ರಿವಾಲ್, 27 ವರ್ಷಗಳ ಬಿಜೆಪಿ ಸರಕಾರದಿಂದ ಗುಜರಾತ್ ಜನರು ಬೇಸತ್ತಿದ್ದಾರೆ. ಪರ್ಯಾಯ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಹೇಳಿದ್ದಾರೆ.
ದೆಹಲಿ ಮತ್ತು ಪಂಜಾಬ್ ನಲ್ಲಿ ನನ್ನ ಭವಿಷ್ಯವಾಣಿ ನಿಜವಾಗಿತ್ತು. ಹಾಗೆಯೇ ದೆಹಲಿಯಲ್ಲೂ ನನ್ನ ಭವಿಷ್ಯ ನಿಜವಾಗಲಿದೆ. ನನ್ನ ಹೇಳಿಕೆಯನ್ನು ಬರೆದಿಟ್ಟುಕೊಳ್ಳಿ. ನಿಶ್ಚಿತವಾಗಿ ಆಪ್ ಗುಜರಾತ್ ನಲ್ಲಿ ಸರಕಾರ ರಚಿಸುತ್ತದೆ ಎಂದು ಹಾಳೆಯಲ್ಲಿ ಬರೆದು ಕೇಜ್ರಿವಾಲ್ ಅದನ್ನು ಮಾಧ್ಯಮಕ್ಕೆ ತೋರಿಸಿದರು. ಬಿಜೆಪಿ ಸರಕಾರದಿಂದ ಗುಜರಾತ್ ಜನರು ಭಯಗೊಂಡಿದ್ದು ಆಮ್ ಆದ್ಮಿ ಬೆಂಬಲ ನೀಡುತ್ತಿದ್ದಾರೆ. 27 ವರ್ಷಗಳ ದುರಾಡಳಿತದಿಂದ ಮುಕ್ತಿ ಹೊಂದಲು ಬಯಸುತ್ತಿದ್ದಾರೆ ಎಂದು ಹೇಳಿದರು.
ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್, ಬಿಜೆಪಿ ದುರಾಡಳಿತದ ಬಗ್ಗೆ ಟೀಕಿಸುತ್ತಲೇ ಹೊಸ ಪರ್ಯಾಯವಾಗಿ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸುವಂತೆ ಕರೆ ನೀಡಿದ್ದಾರೆ. ಬಿಜೆಪಿಯು 2005ರ ಎಪ್ರಿಲ್ ಬಳಿಕ ನೇಮಕಗೊಂಡಿರುವ ಸರಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆ ಜಾರಿಗೊಳಿಸುವುದಾಗಿ ಹೇಳಿದೆ. 185 ಸದಸ್ಯ ಬಲದ ಗುಜರಾತ್ ವಿಧಾನಸಭೆಗೆ ಡಿಸೆಂಬರ್ 1 ಮತ್ತು 5ರಂದು ಚುನಾವಣೆ ನಡೆಯಲಿದ್ದು, 8ರಂದು ಮತ ಎಣಿಕೆ ನಡೆಯಲಿದೆ.
Delhi Chief Minister Arvind Kejriwal on Sunday made a written assertion that the Aam Aadmi Party (AAP) will form government in Gujarat after the upcoming Assembly polls. He also urged government employees in Gujarat to back the AAP while promising implementation of the old pension scheme for them by January 31 next year. Addressing a press conference in Surat, AAP national convener and Delhi Chief Minister Kejriwal said his predictions for the Delhi and Punjab Assembly elections came true, and the same will happen in Gujarat as well.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 10:24 pm
Mangalore Correspondent
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm