ಬ್ರೇಕಿಂಗ್ ನ್ಯೂಸ್
29-11-22 07:52 pm HK News Desk ದೇಶ - ವಿದೇಶ
ಅಹ್ಮದಾಬಾದ್, ನ.29: ಗುಜರಾತ್ ವಿಧಾನಸಭಾ ಚುನಾವಣೆಗೆ ಎರಡು ದಿನ ಇರುವಾಗ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಿಮಗೆ ರಾವಣನಂತೆ 100 ತಲೆಗಳಿವೆಯೇ? ಎಂದು ಪ್ರಶ್ನಿಸಿದ್ದಾರೆ.
ಅಹಮದಾಬಾದ್ನಲ್ಲಿ ಕಾಂಗ್ರೆಸ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಪ್ರಧಾನಿ ಮೋದಿ ತಮ್ಮ ಕೆಲಸವನ್ನು ಮರೆತು, ಕಾರ್ಪೊರೇಷನ್ ಚುನಾವಣೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲೂ ಪ್ರಚಾರ ಮಾಡುತ್ತಾರೆ ಮತ್ತು ತಮ್ಮ ಮುಖ ನೋಡಿ ಮತ ಹಾಕಿ ಎಂದು ಹೇಳುತ್ತಾರೆ. ಆದರೆ ನಾವು ನಿಮ್ಮ ಮುಖವನ್ನು ಎಷ್ಟು ಬಾರಿ ನೋಡಬೇಕು? ನಿಮಗೆ ಎಷ್ಟು ರೂಪಗಳಿವೆ? ನಿಮಗೆ ರಾವಣನಂತೆ 100 ತಲೆಗಳಿವೆಯೇ? ಎಂದು ಪ್ರಶ್ನಿಸಿದ್ದಾರೆ.
![]()
ನೀವು ಮೋದಿ ಹೆಸರಿನಲ್ಲಿ ಮತ ಕೇಳುವುದನ್ನು ನಾನು ನೋಡಿದ್ದೇನೆ, ಕಾರ್ಪೊರೇಷನ್ ಅಥವಾ ವಿಧಾನಸಭೆ ಚುನಾವಣೆಗಳಲ್ಲಿ ನಿಮ್ಮ ಅಭ್ಯರ್ಥಿಯ ಹೆಸರಿನಲ್ಲಿ ಮತ ಕೇಳಿ. ಮೋದಿ ಅವರು ಪುರಸಭೆಗೆ ಬಂದು ಕೆಲಸ ಮಾಡುತ್ತಾರೆಯೇ? ನಿಮ್ಮ ಕಷ್ಟದ ಸಮಯದಲ್ಲಿ ಅವರು ನಿಮಗೆ ಸಹಾಯ ಮಾಡುತ್ತಾರೆಯೇ? ಎಂದು ಖರ್ಗೆ ಪ್ರಶ್ನೆ ಮಾಡಿದ್ದಾರೆ.
ಖರ್ಗೆ ಅವರ "ರಾವಣ" ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು, ಯಾವುದೇ ಅಭಿವೃದ್ಧಿ ಅಜೆಂಡಾ ಮತ್ತು ಜನರ ಬೆಂಬಲವಿಲ್ಲದೆ, ಕಾಂಗ್ರೆಸ್ ಗುಜರಾತ್ ಮತ್ತು ಗುಜರಾತಿಗಳನ್ನು ನಿಂದಿಸಲು ಹೊರಟಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಜಿ ವಿರುದ್ಧ ಖರ್ಗೆ ಅವರು ನೀಡಿದ ಹೇಳಿಕೆ ಸಾಕ್ಷಿಯಾಗಿದೆ. ಗುಜರಾತಿಗಳ ಮೇಲಿನ ಅವರ ದ್ವೇಷಕ್ಕೆ ಇದು ಸಾಕ್ಷಿ. ಗುಜರಾತ್ ಜನರು ಈ ಬಾರಿಯೂ ಕಾಂಗ್ರೆಸ್ ಅನ್ನು ತಿರಸ್ಕರಿಸುತ್ತಾರೆ ಎಂದು ಹೇಳಿದ್ದಾರೆ.
ಭಾರತೀಯ ಜನತಾ ಪಕ್ಷ (ಬಿಜೆಪಿ) ಆಡಳಿತವಿರುವ ಗುಜರಾತ್ನಲ್ಲಿ 182 ಸದಸ್ಯ ಬಲದ ವಿಧಾನಸಭೆಗೆ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಡಿ.1 ರ ಚುನಾವಣೆ ನಡೆಯುವ ಪ್ರದೇಶದಲ್ಲಿ ಕೊನೆಯ ದಿನದ ಪ್ರಚಾರ ಇಂದಿಗೆ ಕೊನೆಯಾಗಿದೆ.
A fresh political row has erupted after Congress president Mallikarjun Kharge's 'Ravan' remark about prime minister Narendra Modi. The Congress veteran made the remarks during a campaign rally in Ahmedabad on Monday, days before the Gujarat Assembly election.
11-03-26 12:57 pm
HK News Staffer
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 03:25 pm
HK News Staffer
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am