ಬ್ರೇಕಿಂಗ್ ನ್ಯೂಸ್
07-12-22 06:17 pm HK News Desk ದೇಶ - ವಿದೇಶ
ನವದೆಹಲಿ, ಡಿ.7: ರಾಷ್ಟ್ರ ರಾಜಧಾನಿಯಲ್ಲಿ ಆಮ್ ಆದ್ಮಿ ಪಕ್ಷದ ಪೊರಕೆ ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಪೂರ್ತಿ ಗುಡಿಸಿ ಹಾಕಿದೆ. ದೆಹಲಿ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಪೂರ್ಣ ಬಹುಮತ ಪಡೆದಿದ್ದು, ಹಾಲಿ ಆಡಳಿತಾರೂಢ ಬಿಜೆಪಿಗೆ ಮುಖಭಂಗ ಆಗುವಂತಾಗಿದೆ. 250 ಸದಸ್ಯ ಬಲದ ಪಾಲಿಕೆಯಲ್ಲಿ ಆಪ್ 134 ಸೀಟುಗಳನ್ನು ಗೆದ್ದು ಜಯಭೇರಿ ಬಾರಿಸಿದೆ.
ಬಿಜೆಪಿ 103 ಸೀಟು ಗೆದ್ದುಕೊಂಡರೆ, ಕಾಂಗ್ರೆಸ್ ಕೇವಲ ಹತ್ತು ಸೀಟುಗಳನ್ನಷ್ಟೇ ಪಡೆದಿದೆ. 2017ರ ಚುನಾವಣೆಯಲ್ಲಿ ಬಿಜೆಪಿ 181 ಸೀಟು ಗೆದ್ದಿದ್ದರೆ, ಆಪ್ 40 ಸೀಟು ಮತ್ತು ಕಾಂಗ್ರೆಸ್ 30 ಸೀಟು ಗಳಿಸಿತ್ತು. ಆದರೆ ಈ ಬಾರಿಯ ಚುನಾವಣೆಯಲ್ಲಿ ಆಪ್ ದೆಹಲಿಯನ್ನು ಪೂರ್ತಿ ಆವರಿಸಿದಂತಾಗಿದ್ದು, ನಗರ ಪ್ರದೇಶದ ಜನರು ಪೊರಕೆ ಹಿಡಿದು ಉಳಿದ ಪಕ್ಷಗಳನ್ನು ಗುಡಿಸಿ ಹಾಕಿದ್ದಾರೆ. ದೆಹಲಿಯ ಆಪ್ ಆಡಳಿತಕ್ಕೆ ಜೈಕಾರ ಹಾಕಿದ್ದಾರೆ.

![]()


ದೆಹಲಿಯಲ್ಲಿ ಜಯ ಗಳಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಕ್ಷದ ಸಂಚಾಲಕ ಅರವಿಂದ ಕೇಜ್ರಿವಾಲ್, ರಾಜಧಾನಿಯ ಜನರು ಇಡೀ ದೇಶಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಮಹಾನಗರ ಪಾಲಿಕೆಯನ್ನು ಭ್ರಷ್ಟಾಚಾರ ಮುಕ್ತ ಮಾಡುವುದು ನಮ್ಮ ಗುರಿ. ಇದಕ್ಕಾಗಿ ಕೇಂದ್ರ ಸರಕಾರ ಮತ್ತು ಪ್ರಧಾನಿ ಮೋದಿಯವರ ಆಶೀರ್ವಾದ ಕೋರುತ್ತೇನೆ. ಅಲ್ಲದೆ, ದೆಹಲಿಯನ್ನು ಇನ್ನಷ್ಟು ಉತ್ತಮ ಪಡಿಸಲು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಸಹಕಾರ ಕೋರುತ್ತೇನೆ ಎಂದಿದ್ದಾರೆ.


ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಪ್ರತಿಕ್ರಿಯಿಸಿ, ಇವತ್ತು ನಾವು ರಾಜಧಾನಿಯನ್ನು ಗೆದ್ದಿದ್ದೇವೆ. ನಾಳೆ ಗುಜರಾತನ್ನು ಗೆಲ್ಲುತ್ತೇವೆ ಎಂದಿದ್ದಾರೆ. ಇದು ನಮ್ಮ ಜಯವಲ್ಲ. ನಮಗೆ ದೊರೆತ ಹೊಸ ಜವಾಬ್ದಾರಿ. ದೆಹಲಿಯನ್ನು ಸ್ವಚ್ಛಗೊಳಿಸುವುದು ಮತ್ತು ಶೈನ್ ಆಗಿಸುವುದಕ್ಕೆ ದೊರೆತ ಅವಕಾಶ ಎಂದು ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಹೇಳಿದ್ದಾರೆ.
After the Aam Aadmi Party (AAP) Wednesday crossed the halfway mark with 134 seats in the Municipal Corporation of Delhi elections, Chief Minister Arvind Kejriwal thanked the people for AAP’s victory and sought the cooperation of the BJP and the Congress as well as the “blessings” of the Centre and Prime Minister Narendra Modi to improve civic amenities here. Addressing party workers at the headquarters, Kejriwal said, “Will try to live up to expectations of people, urge parties to come together to improve Delhi.”
11-03-26 12:57 pm
HK News Staffer
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 11:54 am
HK News Staffer
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am