ಬ್ರೇಕಿಂಗ್ ನ್ಯೂಸ್
15-10-20 02:01 pm Headline Karnataka News Network ದೇಶ - ವಿದೇಶ
ಭುವನೇಶ್ವರ , ಅಕ್ಟೋಬರ್ 15: ಮದುವೆಯ ದಿನ ಸಾವಿರಾರು ಜನರನ್ನು ಕರೆಸಿ ವಧು ವರರಿಗೆ ಆಶೀರ್ವದಿಸುವ ಜೊತೆಗೆ ಆಹ್ವಾನಿತರಿಗೆ ಭೋಜನದ ವ್ಯವಸ್ಥೆ ಮಾಡುವುದು ಭಾರತೀಯ ಸಂಪ್ರದಾಯ.ಆದರೆ ಒಡಿಶಾದ ಈ ಜೋಡಿಯೊಂದು ತಮ್ಮ ಮದುವೆ ದಿನದಂದು 500 ಕ್ಕೂ ಹೆಚ್ಚು ಶ್ವಾನಗಳಿಗೆ ಊಟ ಹಾಕುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.
ಒಡಿಶಾ ಮೂಲದ ಯುರೇಕಾ ಅಪ್ತಾ ಹಾಗೂ ಜೋವಾನ್ನಾ ವಾಂಗ್ ದಂಪತಿ ಸೆಪ್ಟೆಂಬರ್ 25ರಂದು ಭುವನೇಶ್ವರದ ಟ್ಯಾಂಗಿ ಬಳಿಯ ದೇವಸ್ಥಾನವೊಂದರಲ್ಲಿ ವಿವಾಹವಾಗಿದ್ದರು. ಇದೇ ದಿನದಂದು ಪ್ರಾಣಿ ಸಂರಕ್ಷಣಾ ಸಂಸ್ಥೆಯ ಸಹಾಯದಿಂದ ನಗರದ ಸುಮಾರು 500ಕ್ಕೂ ಹೆಚ್ಚು ಶ್ವಾನಗಳಿಗೆ ಆಹಾರ ನೀಡಿದ್ದಾರೆ.

ಸಮಾಜಕ್ಕೆ ಏನಾದರೂ ಒಳ್ಳೆಯ ಕೊಡಗೆಯನ್ನು ನೀಡಬೇಕು ಎಂಬುದು ಇಬ್ಬರ ತೀರ್ಮಾನವಾಗಿತ್ತು, ಹಾಗಾಗಿ ನಾವು ಪ್ರಾಣಿ ಸಂರಕ್ಷಣಾ ಸಂಸ್ಥೆಯ(ಎಡಬ್ಲ್ಯೂಟಿಇ) ಸಂಸ್ಥಾಪಕಿ ಪೂರ್ವಿ ಅವರೊಂದಿಗೆ ಭುವನೇಶ್ವರದಾದ್ಯಂತ ಸುಮಾರು 500ಕ್ಕೂ ಹೆಚ್ಚು ಪ್ರಾಣಿಗಳಿಗೆ ಆಹಾರ ನೀಡಲು ನಿರ್ಧರಿಸಿದೆವು, ಎಂದು ಜೋವಾನ್ನಾ ವಾಂಗ್ ತಿಳಿಸಿದ್ದಾರೆ.
ಎಡಬ್ಲ್ಯೂಟಿಇನಿಂದ ಮಾಡಲ್ಪಟ್ಟ ಕೆಲಸದಿಂದ ಅವರು ಸ್ಫೂರ್ತಿ ಪಡೆದಿದ್ದು, ಹೀಗಾಗಿ ದಂಪತಿ ತಮ್ಮ ಮದುವೆಯನ್ನು ವಿಭಿನ್ನವಾಗಿ ಆಚರಿಸಲು ನಿರ್ಧರಿಸಿದ್ದರು. ಪ್ರತಿಯೊಬ್ಬರೂ ಆಪ್ತಾ ಮತ್ತು ವಾಂಗ್ನಂತೆಯೇ ಯೋಚಿಸಲು ಪ್ರಾರಂಭಿಸಿದರೆ, ಈ ಜಗತ್ತಿನಲ್ಲಿ ಒಂದು ಬದಲಾವಣೆ ಸಂಭವಿಸುತ್ತದೆ. ಅಲ್ಲದೆ ಅದು ಅನೇಕ ಪ್ರಾಣಿಗಳ ಜೀವ ಉಳಿಸುವಂತಹ ಕೆಲಸವಾಗುತ್ತದೆ. ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Newlywed couple from Odisha feeds 500 stray dogs to celebrate their wedding. Eureka Apta and Joanna Wang got married on Sep 25 but their wedding treat was for stray dogs.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm