ಬ್ರೇಕಿಂಗ್ ನ್ಯೂಸ್
14-12-22 03:36 pm HK News Desk ದೇಶ - ವಿದೇಶ
ಭೋಪಾಲ್, ಡಿ.14: ಐದು ವರ್ಷಗಳ ಹಿಂದೆ ಹಿಂದು ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ ಮುಸ್ಲಿಂ ಯುವಕನೊಬ್ಬ ಹಿಂದು ಧರ್ಮಕ್ಕೆ ಮತಾಂತರಗೊಂಡಿದ್ದಾನೆ. ಮಧ್ಯಪ್ರದೇಶದ ಮಂಡ್ ಸೌರ್ ಜಿಲ್ಲೆಯ ಕಚ್ ನಾರಾ ಗ್ರಾಮದ ನಿವಾಸಿ ಅಫ್ಸರ್ ಮನ್ಸೂರಿ ಎಂಬಾತ ಹಿಂದುವಾಗಿ ಬದಲಾಗಿದ್ದಲ್ಲದೆ, ತನ್ನ ಹೆಸರನ್ನು ಕೃಷ್ಣ ಸನಾತನಿ ಎಂದು ಬದಲಿಸಿಕೊಂಡಿದ್ದಾನೆ.
ಐದು ವರ್ಷಗಳ ಹಿಂದೆ ರಾಧಾ ಎಂಬವಳನ್ನು ದೇವಸ್ಥಾನದಲ್ಲಿ ಮದುವೆಯಾಗಿದ್ದ ಅಫ್ಸರ್, ಆನಂತರ ತನ್ನ ಕುಟುಂಬದಿಂದ ದೂರವಿದ್ದು ಪ್ರತ್ಯೇಕವಾಗಿ ವಾಸವಿದ್ದರು. ಹಿಂದು ಸಂಪ್ರದಾಯಗಳನ್ನು ಪಾಲನೆ ಮಾಡುತ್ತಿದ್ದರು. ಇದೀಗ ಹಿಂದು ಹೆಸರಿನೊಂದಿಗೆ ಧರ್ಮವನ್ನು ಬದಲಿಸಿಕೊಂಡಿದ್ದಾರೆ. ಹಿಂದು ಧರ್ಮಕ್ಕೆ ಮತಾಂತರಗೊಂಡ ಪ್ರಕ್ರಿಯೆಯನ್ನು ಗಾಯತ್ರಿ ಪರಿವಾರದ ಅರ್ಚಕರೊಬ್ಬರು ನೆರವೇರಿಸಿದ್ದಾರೆ. ಗೋವಿನ ಮೂತ್ರ, ಸೆಗಣಿ, ಮೊಸರು, ಹಾಲು, ಜೇನಿನ ಅಭಿಷೇಕ ಮಾಡಿ ಮಂತ್ರ ಪಠಣಗೈದು ಹಿಂದು ಧರ್ಮಕ್ಕೆ ಸೇರಿಸಿಕೊಂಡಿದ್ದಾರೆ.
ರಾಜಸ್ಥಾನದ ಉದಯಪುರದಲ್ಲಿ ರೋಗಿಗಳ ಕೇರ್ ಟೇಕರ್ ಆಗಿ ರಾಧಾ ಕೆಲಸ ಮಾಡುತ್ತಿದ್ದರು. ಅಲ್ಲಿಗೆ ಅಫ್ಸರ್ ಮನ್ಸೂರಿ ಬೇರೆ ಬೇರೆ ಕಡೆಯಿಂದ ರೋಗಿಗಳನ್ನು ಒಯ್ದು ತಲುಪಿಸುತ್ತಿದ್ದರು. ಈ ವೇಳೆ, ರಾಧಾ ಪರಿಚಯವಾಗಿ ಪ್ರೀತಿ ಬೆಳೆದು ಮದುವೆಯಾಗಿದ್ದರು. ಆನಂತರ, ರಾಧಾಳನ್ನು ಜೊತೆಗೆ ಕರೆದುಕೊಂಡು ಬಂದು ಮಧ್ಯಪ್ರದೇಶದ ಮಂಡ್ ಸೌರ್ ನಲ್ಲಿಯೇ ವಾಸ ಮಾಡಿಕೊಂಡಿದ್ದರು. ಹಿಂದು ಯುವತಿಯನ್ನು ಪ್ರೀತಿಸಿ ಮದುವೆಯಾಗಿ ಬಳಿಕ ಮುಸ್ಲಿಂ ಆಗಿ ಮತಾಂತರಿಸುವ ಬಗ್ಗೆ ದೇಶದ ಎಲ್ಲೆಡೆ ಆರೋಪ ಕೇಳಿಬರುತ್ತಿರುವ ಸಂದರ್ಭದಲ್ಲೇ ಇಲ್ಲೊಬ್ಬ ತನ್ನ ಪ್ರೀತಿಗಾಗಿ ಪತ್ನಿಯ ಧರ್ಮಕ್ಕೇ ಮತಾಂತರಗೊಂಡಿದ್ದಾನೆ.
A Muslim man, who married a Hindu woman five years ago, has converted to Hindusim an changed his name to 'Krishna Sanatani'. The incident was reported from Madhya Pradesh's Mandsaur district. The Muslim man had married the woman from the Hindu community at a temple after falling in love with her.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm