ಬ್ರೇಕಿಂಗ್ ನ್ಯೂಸ್
20-12-22 09:48 pm HK News Desk ದೇಶ - ವಿದೇಶ
ಪಾಟ್ನಾ, ಡಿ.20 : ಕೋಟ್ಯಧಿಪತಿಗಳ ಮನೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಐಟಿ ನೋಟಿಸ್ ನೀಡುವುದು ಹೊಸದೇನಲ್ಲ. ಆದರೆ ಇಲ್ಲೊಂದು ಕಡೆ ದಿನಗೂಲಿ ಕೆಲಸ ಮಾಡುವಾತನ ಮನೆಗೆ ಐಟಿ ಅಧಿಕಾರಿಗಳು ತೆರಳಿದ್ದಲ್ಲದೆ, 14 ಕೋಟಿ ರೂ. ಆದಾಯ ತೆರಿಗೆ ಬಾಕಿಯಿದೆ ಎಂದು ನೋಟಿಸ್ ನೀಡಿದ್ದಾರೆ.
ಬಿಹಾರದ ರೋಹ್ಟಸ್ ಜಿಲ್ಲೆಯ ಕರ್ಗರ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ, ದಿನಗೂಲಿ ಕೆಲಸ ಮಾಡುತ್ತಿರುವ ಮನೋಜ್ ಯಾದವ್ ಮನೆಗೆ ಸೋಮವಾರ ಬಂದಿದ್ದ ಆದಾಯ ತೆರಿಗೆ ಅಧಿಕಾರಿಗಳು, 14 ಕೋಟಿ ರೂ. ರಿಟರ್ನ್ಸ್ ಬಾಕಿ ಇದೆ ಎಂದು ನೋಟಿಸ್ ನೀಡಿದ್ದಾರೆ. ಅಧಿಕಾರಿಗಳ ನೋಟಿಸ್ ನೋಡಿ, ಮನೋಜ್ ಯಾದವ್ ಕುಟುಂಬಸ್ಥರು ಅಚ್ಚರಿಗೊಂಡಿದ್ದಾರೆ. ನಮ್ಮಲ್ಲಿರುವ ಎಲ್ಲ ಆಸ್ತಿ ಮಾರಿದರೂ 14 ಕೋಟಿ ರೂ. ಆಗುವುದಿಲ್ಲ ಎಂದು ಮನೋಜ್ ಯಾದವ್ ಬೇಡಿಕೊಂಡರೂ ಐಟಿ ಅಧಿಕಾರಿಗಳು ನಂಬಲಿಲ್ಲ. ಬ್ಯಾಂಕ್ ದಾಖಲೆಗಳ ಪ್ರಕಾರ ಮನೋಜ್ ಹೆಸರಲ್ಲಿ ಕಂಪನಿಗಳು ನಡೆಯುತ್ತಿದ್ದು, ಅದರ ಪ್ರಕಾರ 14 ಕೋಟಿ ರೂ. ತೆರಿಗೆ ಬಾಕಿ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮನೋಜ್ ಈ ಮೊದಲು ದೆಹಲಿ, ಹರಿಯಾಣ ಹಾಗೂ ಪಂಜಾಬ್ ನಲ್ಲಿ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡಿದ್ದು, ಕೋವಿಡ್ ಲಾಕ್ಡೌನ್ ನಂತರ 2020ರಲ್ಲಿ ಬಿಹಾರಕ್ಕೆ ಮರಳಿ ದಿನಗೂಲಿ ನಡೆಸಿ ಜೀವನ ನಡೆಸುತ್ತಿದ್ದಾನೆ. ತಾನು ಹಿಂದೆ ಕೆಲಸ ಮಾಡಿದ್ದ ಕಂಪನಿಗಳವರು ನನ್ನ ದಾಖಲೆಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ, ಕೆಲಸಕ್ಕೆ ಸೇರುವ ಸಮಯದಲ್ಲಿ ಅವರು ನನ್ನ ಪಾನ್ ಮತ್ತು ಆಧಾರ್ ಕಾರ್ಡ್ ಪ್ರತಿಗಳನ್ನು ಪಡೆದಿದ್ದರು ಎಂಬುದಾಗಿ ಮನೋಜ್ ಹೇಳಿದ್ದಾರೆ.
A daily wage labourer living in Bihar’s Rohtas district has received a notice from the Income-Tax department asking him to pay Rs 14 crore in returns. One Manoj Yadav, a labourer and resident of Kargahar village, has been served a notice seeking payment of Rs14 crore in income tax. According to the officials, his bank records showed transactions of crores of rupees being done which makes him liable for paying the income tax.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am