ಬ್ರೇಕಿಂಗ್ ನ್ಯೂಸ್
21-12-22 03:44 pm HK News Desk ದೇಶ - ವಿದೇಶ
ನವದೆಹಲಿ, ಡಿ.21: ಶಾರುಖ್ ಖಾನ್- ದೀಪಿಕಾ ಪಡುಕೋಣೆ ಪಠಾಣ್ ಚಿತ್ರದಲ್ಲಿ ಕೇಸರಿ ಬಿಕಿನಿ ಧರಿಸಿ ಅಭಿನಯಿಸಿದ್ದಕ್ಕೆ ಭಾರೀ ವಿರೋಧ ಕೇಳಿಬರುತ್ತಿರುವ ನಡುವೆಯೇ ಅಯೋಧ್ಯೆಯ ಸ್ವಾಮೀಜಿ ಪರಮಹಂಸ ಆಚಾರ್ಯ, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶಾರುಖ್ ಖಾನ್ ಎದುರಿಗೆ ಸಿಕ್ಕರೆ ಜೀವಂತ ಸುಟ್ಟು ಹಾಕುತ್ತೇನೆ ಎಂದು ಹೇಳಿದ್ದಾರೆ.
ಇತ್ತೀಚೆಗೆ ಚಿತ್ರದ ಬೇಷಾರಮ್ ರಂಗ್ ಎನ್ನುವ ಹಾಡನ್ನು ರಿಲೀಸ್ ಮಾಡಲಾಗಿತ್ತು. ಅದರಲ್ಲಿ ದೀಪಿಕಾ ಕೇಸರಿ ಬಿಕಿನಿ ತೊಟ್ಟು ಅಶ್ಲೀಲವಾಗಿ ನರ್ತಿಸಿದ್ದರೆ, ಶಾರುಖ್ ಖಾನ್ ಹಸಿರು ಬಟ್ಟೆ ತೊಟ್ಟು ಸಾಥ್ ಕೊಟ್ಟಿದ್ದರು. ಈ ಬಗ್ಗೆ ಭಾರೀ ವಿರೋಧ ವ್ಯಕ್ತವಾಗಿದ್ದು ಹಲವು ಕಡೆಗಳಲ್ಲಿ ಪ್ರತಿಭಟನೆ ವ್ಯಕ್ತವಾಗಿದೆ. ಮಧ್ಯಪ್ರದೇಶ, ಉತ್ತರ ಪ್ರದೇಶದಲ್ಲಿ ಕೆಲವು ಸಚಿವರು ಕೂಡ ವಿರೋಧ ವ್ಯಕ್ತಪಡಿಸಿದ್ದರು.
ಇದೀಗ ಅಯೋಧ್ಯೆ ಸ್ವಾಮೀಜಿ ಪರಮಹಂಸ ಆಚಾರ್ಯ ಮಾತನಾಡಿ, ಬೇಷಾರಮ್ ರಂಗ್ ಹಾಡಿನಲ್ಲಿ ಕೇಸರಿ ಬಣ್ಣವನ್ನು ಅಶ್ಲೀಲವಾಗಿ ಚಿತ್ರಿಸಿ ಅಣಕಿಸಲಾಗಿದೆ. ಸನಾತನ ಧರ್ಮದ ಮಂದಿ ಇದಕ್ಕೆ ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ. ಇವತ್ತು ಶಾರುಖ್ ಖಾನ್ ಪೋಸ್ಟರನ್ನು ಸುಟ್ಟು ಹಾಕಲಾಗುತ್ತಿದೆ. ಆದರೆ ಜಿಹಾದಿ ಶಾರುಖ್ ಖಾನ್ ನನ್ನ ಎದುರಿಗೆ ಬಂದಲ್ಲಿ ಆತನನ್ನು ಜೀವಂತವಾಗಿಯೇ ಸುಟ್ಟು ಹಾಕುತ್ತೇನೆ ಎಂದು ಹೇಳಿದ್ದಾರೆ. ಸ್ವಾಮೀಜಿ ಹೀಗೆ ಹೇಳಿದ್ದಾಗಿ ಐಎಎನ್ಎಸ್ ಸುದ್ದಿಸಂಸ್ಥೆ ಪ್ರಕಟಿಸಿದೆ. ಅಲ್ಲದೆ, ಪಠಾಣ್ ಚಿತ್ರ ಥಿಯೇಟರ್ ನಲ್ಲಿ ಬಿಡುಗಡೆಯಾದರೆ, ಅದನ್ನು ಪ್ರದರ್ಶನ ಮಾಡುವ ಥಿಯೇಟರನ್ನೂ ಸುಟ್ಟು ಹಾಕುತ್ತೇನೆ ಎಂದು ಸ್ವಾಮೀಜಿ ಹೇಳಿದ್ದಾಗಿ ಸುದ್ದಿಸಂಸ್ಥೆ ಹೇಳಿದೆ.
ಇದೇ ಚಿತ್ರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಮಧ್ಯಪ್ರದೇಶ ಸ್ವೀಕರ್ ಗಿರೀಶ್ ಗೌತಮ್, ಶಾರುಖ್ ಖಾನ್ ತನ್ನ ಪುತ್ರಿಯ ಜೊತೆಗೆ ಕುಳಿತು ಈ ಚಿತ್ರವನ್ನು ನೋಡಬೇಕು. ಅದರ ಚಿತ್ರವನ್ನು ಪೋಸ್ಟ್ ಮಾಡಬೇಕು. ಅಲ್ಲದೆ, ಆತ ಪ್ರವಾದಿ ಪೈಗಂಬರ್ ಕುರಿತು ಇದೇ ರೀತಿಯ ಚಿತ್ರವನ್ನು ಮಾಡಲಿ, ನಾನು ಸವಾಲು ಹಾಕುತ್ತೇನೆ ಎಂದಿದ್ದಾರೆ.
The controversy over Bollywood superstar Shah Rukh Khan's upcoming film ‘Pathaan’ refuses to die down and now a prominent seer from the holy city Ayodhya has waded into the controversy over the song 'Besharam Rang' in the movie also starring actress Deepika Padukone. According to media reports, Mahant Paramhans Acharya of Tapasvi Chhavni has said that he would burn Shah Rukh Khan alive if he ever met him.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 10:24 pm
Mangalore Correspondent
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm