ಬ್ರೇಕಿಂಗ್ ನ್ಯೂಸ್
21-12-22 03:44 pm HK News Desk ದೇಶ - ವಿದೇಶ
ನವದೆಹಲಿ, ಡಿ.21: ಶಾರುಖ್ ಖಾನ್- ದೀಪಿಕಾ ಪಡುಕೋಣೆ ಪಠಾಣ್ ಚಿತ್ರದಲ್ಲಿ ಕೇಸರಿ ಬಿಕಿನಿ ಧರಿಸಿ ಅಭಿನಯಿಸಿದ್ದಕ್ಕೆ ಭಾರೀ ವಿರೋಧ ಕೇಳಿಬರುತ್ತಿರುವ ನಡುವೆಯೇ ಅಯೋಧ್ಯೆಯ ಸ್ವಾಮೀಜಿ ಪರಮಹಂಸ ಆಚಾರ್ಯ, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶಾರುಖ್ ಖಾನ್ ಎದುರಿಗೆ ಸಿಕ್ಕರೆ ಜೀವಂತ ಸುಟ್ಟು ಹಾಕುತ್ತೇನೆ ಎಂದು ಹೇಳಿದ್ದಾರೆ.
ಇತ್ತೀಚೆಗೆ ಚಿತ್ರದ ಬೇಷಾರಮ್ ರಂಗ್ ಎನ್ನುವ ಹಾಡನ್ನು ರಿಲೀಸ್ ಮಾಡಲಾಗಿತ್ತು. ಅದರಲ್ಲಿ ದೀಪಿಕಾ ಕೇಸರಿ ಬಿಕಿನಿ ತೊಟ್ಟು ಅಶ್ಲೀಲವಾಗಿ ನರ್ತಿಸಿದ್ದರೆ, ಶಾರುಖ್ ಖಾನ್ ಹಸಿರು ಬಟ್ಟೆ ತೊಟ್ಟು ಸಾಥ್ ಕೊಟ್ಟಿದ್ದರು. ಈ ಬಗ್ಗೆ ಭಾರೀ ವಿರೋಧ ವ್ಯಕ್ತವಾಗಿದ್ದು ಹಲವು ಕಡೆಗಳಲ್ಲಿ ಪ್ರತಿಭಟನೆ ವ್ಯಕ್ತವಾಗಿದೆ. ಮಧ್ಯಪ್ರದೇಶ, ಉತ್ತರ ಪ್ರದೇಶದಲ್ಲಿ ಕೆಲವು ಸಚಿವರು ಕೂಡ ವಿರೋಧ ವ್ಯಕ್ತಪಡಿಸಿದ್ದರು.
ಇದೀಗ ಅಯೋಧ್ಯೆ ಸ್ವಾಮೀಜಿ ಪರಮಹಂಸ ಆಚಾರ್ಯ ಮಾತನಾಡಿ, ಬೇಷಾರಮ್ ರಂಗ್ ಹಾಡಿನಲ್ಲಿ ಕೇಸರಿ ಬಣ್ಣವನ್ನು ಅಶ್ಲೀಲವಾಗಿ ಚಿತ್ರಿಸಿ ಅಣಕಿಸಲಾಗಿದೆ. ಸನಾತನ ಧರ್ಮದ ಮಂದಿ ಇದಕ್ಕೆ ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ. ಇವತ್ತು ಶಾರುಖ್ ಖಾನ್ ಪೋಸ್ಟರನ್ನು ಸುಟ್ಟು ಹಾಕಲಾಗುತ್ತಿದೆ. ಆದರೆ ಜಿಹಾದಿ ಶಾರುಖ್ ಖಾನ್ ನನ್ನ ಎದುರಿಗೆ ಬಂದಲ್ಲಿ ಆತನನ್ನು ಜೀವಂತವಾಗಿಯೇ ಸುಟ್ಟು ಹಾಕುತ್ತೇನೆ ಎಂದು ಹೇಳಿದ್ದಾರೆ. ಸ್ವಾಮೀಜಿ ಹೀಗೆ ಹೇಳಿದ್ದಾಗಿ ಐಎಎನ್ಎಸ್ ಸುದ್ದಿಸಂಸ್ಥೆ ಪ್ರಕಟಿಸಿದೆ. ಅಲ್ಲದೆ, ಪಠಾಣ್ ಚಿತ್ರ ಥಿಯೇಟರ್ ನಲ್ಲಿ ಬಿಡುಗಡೆಯಾದರೆ, ಅದನ್ನು ಪ್ರದರ್ಶನ ಮಾಡುವ ಥಿಯೇಟರನ್ನೂ ಸುಟ್ಟು ಹಾಕುತ್ತೇನೆ ಎಂದು ಸ್ವಾಮೀಜಿ ಹೇಳಿದ್ದಾಗಿ ಸುದ್ದಿಸಂಸ್ಥೆ ಹೇಳಿದೆ.
ಇದೇ ಚಿತ್ರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಮಧ್ಯಪ್ರದೇಶ ಸ್ವೀಕರ್ ಗಿರೀಶ್ ಗೌತಮ್, ಶಾರುಖ್ ಖಾನ್ ತನ್ನ ಪುತ್ರಿಯ ಜೊತೆಗೆ ಕುಳಿತು ಈ ಚಿತ್ರವನ್ನು ನೋಡಬೇಕು. ಅದರ ಚಿತ್ರವನ್ನು ಪೋಸ್ಟ್ ಮಾಡಬೇಕು. ಅಲ್ಲದೆ, ಆತ ಪ್ರವಾದಿ ಪೈಗಂಬರ್ ಕುರಿತು ಇದೇ ರೀತಿಯ ಚಿತ್ರವನ್ನು ಮಾಡಲಿ, ನಾನು ಸವಾಲು ಹಾಕುತ್ತೇನೆ ಎಂದಿದ್ದಾರೆ.
The controversy over Bollywood superstar Shah Rukh Khan's upcoming film ‘Pathaan’ refuses to die down and now a prominent seer from the holy city Ayodhya has waded into the controversy over the song 'Besharam Rang' in the movie also starring actress Deepika Padukone. According to media reports, Mahant Paramhans Acharya of Tapasvi Chhavni has said that he would burn Shah Rukh Khan alive if he ever met him.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm