ಬ್ರೇಕಿಂಗ್ ನ್ಯೂಸ್
23-12-22 07:33 pm HK News Desk ದೇಶ - ವಿದೇಶ
ನವದೆಹಲಿ, ಡಿ 23: ಚೀನಾ, ಅಮೆರಿಕ ಮತ್ತು ಬ್ರಿಟನ್ ನಲ್ಲಿ ಕೋವಿಡ್ ರೂಪಾಂತರಿ ವೈರಸ್ ಓಮಿಕ್ರಾನ್ BF.7 ಅಬ್ಬರದ ನಡುವೆಯೇ ಇಂದು ದೇಶಾದ್ಯಂತ 163 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದೆ.
ಶುಕ್ರವಾರ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 163 ಹೊಸ ಕೊರೋನವೈರಸ್ ಸೋಂಕು ಪ್ರಕರಣಗಳು ವರದಿಯಾಗಿದೆ. ಆದರೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,380 ಕ್ಕೆ ಇಳಿದಿದೆ.
ಕೋವಿಡ್ ಪ್ರಕರಣಗಳ ಸಂಖ್ಯೆ 4.46 ಕೋಟಿ (4,46,76,678) ದಾಖಲಾಗಿದ್ದು, 24 ಗಂಟೆಗಳ ಅವಧಿಯಲ್ಲಿ ಒಂಬತ್ತು ಸೋಂಕಿತರು ಸಾವನ್ನಪ್ಪಿದ್ದಾರೆ. ಆ ಮೂಲಕ ಮಹಾಮಾರಿಗೆ ಬಲಿಯಾದವರ ಸಂಖ್ಯೆ 5,30,690ಕ್ಕೆ ಏರಿಕೆಯಾಗಿದೆ. ಈ 9 ಪ್ರಕರಣಗಳ ಪೈಕಿ ಕೇರಳ ರಾಜ್ಯವೊಂದರಲ್ಲೇ 6 ಸಾವುಗಳು ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಿಂದ ಎರಡು ಮತ್ತು ದೆಹಲಿಯಿಂದ ಒಂದು ಸಾವು ವರದಿಯಾಗಿದೆ ಎಂದು ಬೆಳಿಗ್ಗೆ 8 ಗಂಟೆಗೆ ನವೀಕರಿಸಿದ ಡೇಟಾ ತಿಳಿಸಿದೆ.
ಇನ್ನು ಒಟ್ಟು ಸೋಂಕುಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ 0.01 ಪ್ರತಿಶತವನ್ನು ಒಳಗೊಂಡಿವೆ, ಆದರೆ ರಾಷ್ಟ್ರೀಯ COVID-19 ಚೇತರಿಕೆ ದರವು 98.80 ಪ್ರತಿಶತಕ್ಕೆ ಹೆಚ್ಚಾಗಿದೆ ಎಂದು ಸಚಿವಾಲಯ ತಿಳಿಸಿದೆ.
24 ಗಂಟೆಗಳ ಅವಧಿಯಲ್ಲಿ ಸಕ್ರಿಯ COVID-19 ಪ್ರಕರಣಗಳ ಸಂಖ್ಯೆಯಲ್ಲಿ 22 ಪ್ರಕರಣಗಳ ಇಳಿಕೆ ದಾಖಲಾಗಿದೆ. ಅಂತೆಯೇ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,41,42,608 ಕ್ಕೆ ಏರಿದೆ. ಆದರೆ ಪ್ರಕರಣದ ಸಾವಿನ ಪ್ರಮಾಣವು ಶೇಕಡಾ 1.19 ರಷ್ಟಿದೆ. ಸಚಿವಾಲಯದ ವೆಬ್ಸೈಟ್ ಪ್ರಕಾರ, ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಅಡಿಯಲ್ಲಿ ಇದುವರೆಗೆ ದೇಶದಲ್ಲಿ ಈ ವರೆಗೂ 220.03 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.
India logged 163 new coronavirus infections, while the active cases declined to 3,380, according to the Union Health Ministry data updated on Friday.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm