ಬ್ರೇಕಿಂಗ್ ನ್ಯೂಸ್
27-12-22 06:01 pm HK News Desk ದೇಶ - ವಿದೇಶ
ಮುಂಬೈ, ಡಿ.28: ಬಾಲಿವುಡ್ ಸ್ಟಾರ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವನ್ನಪ್ಪಿ 2 ವರ್ಷ ಕಳೆದಿದ್ದು, ಪ್ರಕರಣದ ಬಗ್ಗೆ ಇನ್ನೂ ತನಿಖೆ ನಡೆಯುತ್ತಿದೆ. ಈ ಹಿಂದೆ ಸುಶಾಂತ್ ಸಿಂಗ್ ಅವರನ್ನ ಕೊಲೆ ಮಾಡಲಾಗಿದೆ ಅನ್ನೋ ಆರೋಪ ಸಹ ಕೇಳಿಬಂದಿತ್ತು.
ಈ ಆರೋಪಕ್ಕೆ ಪುಷ್ಠಿ ಎಂಬಂತೆ ಸುಶಾಂತ್ ಸಿಂಗ್ ಮರಣೋತ್ತರ ಪರೀಕ್ಷೆ ನಡೆಸಿದ್ದ ಆಸ್ಪತ್ರೆ ಸಿಬ್ಬಂದಿ ಸ್ಫೋಟಕ ಹೇಳಿಕೆಯೊಂದನ್ನ ನೀಡಿದ್ದಾರೆ.
ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಆತನನ್ನ ಕೊಲೆ ಮಾಡಲಾಗಿದೆ ಎಂದು ಕೂಪರ್ ಆಸ್ಪತ್ರೆಯ ಶವಾಗಾರದ ನಿವೃತ್ತ ಸಿಬ್ಬಂದಿ ರೂಪ್ಕುಮಾರ್ ಶಾ ಆರೋಪಿಸಿದ್ದಾರೆ. ಸುಶಾಂತ್ ಸಿಂಗ್ ಶವ ಪತ್ತೆ ಆದಾಗ ಆತನ ದೇಹದ ಮೇಲೆ ಗಾಯಗಳಿದ್ದವು ಎಂದು ರೂಪ್ ಕುಮಾರ್ ಮಾಹಿತಿ ನೀಡಿದ್ದಾರೆ.
ಇತ್ತೀಚೆಗೆ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ರೂಪ್ಕುಮಾರ್ ಶಾ.. ಸುಶಾಂತ್ ಸಾವನ್ನಪ್ಪಿದ ದಿನ 5 ಶವಗಳನ್ನ ಕಪೂರ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಬಂದಿದ್ದವು. ಈ ಪೈಕಿ ಒಂದು ವಿಐಪಿಯದ್ದು ಎಂಬ ಸುದ್ದಿ ಇತ್ತು. ನಂತರ ಅದು ಸುಶಾಂತ್ ಸಿಂಗ್ರದ್ದು ಅಂತಾ ಗೊತ್ತಾಯಿತು. ಪರೀಕ್ಷೆ ವೇಳೆ ದೇಹದ ಮೇಲೆ ಹಾಗೂ ಕತ್ತಿನ ಭಾಗದಲ್ಲಿ ಸಾಕಷ್ಟು ಗುರುತುಗಳಿದ್ದವು. ಮರಣೋತ್ತರ ಪರೀಕ್ಷೆ ನಡೆಸೋದನ್ನ ರೆಕಾರ್ಡ್ ಮಾಡಬೇಕಿತ್ತು. ಆದರೆ ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ಫೋಟೋ ಮಾತ್ರ ತೆಗೆಯಲಾಗಿತ್ತು.
ಮರಣೋತ್ತರ ಪರೀಕ್ಷೆ ಬಳಿಕ ಸುಶಾಂತ್ ಹತ್ಯೆ ಆಗಿರಬಹುದು ಎಂಬ ವಿಚಾರವನ್ನ ನಾನು ಹಿರಿಯ ಅಧಿಕಾರಿಗಳಿಗೆ ತಿಳಿಸಿದರೂ ಅವರು ನಿಯಮಗಳ ಪ್ರಕಾರವೇ ಮಾಡು ಎಂದು ನನಗೆ ಸೂಚಿಸಿದ್ದರು. ನನ್ನ ಹಿರಿಯ ಅಧಿಕಾರಿ, ಆದಷ್ಟು ಬೇಗ ಮೃತದೇಹದ ಚಿತ್ರವನ್ನ ತೆಗೆದುಕೊಂಡು ಪೊಲೀಸರಿಗೆ ನೀಡುವಂತೆ ಹೇಳಿದ್ದರು. 2020, ಜೂನ್ನಲ್ಲಿ ಸುಶಾಂತ್ ಸಿಂಗ್ ದೇಹವು ಮುಂಬೈನ ಅಪಾರ್ಟ್ಮೆಂಟ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
Over the past two years, late Bollywood actor Sushant Singh Rajput has been in and out of the news, with no end to the conspiracy theories surrounding his suicide. In a fresh turn of events, a mortuary staff member, Roopkumar Shah has made a shocking claim about the actor’s death in an interview with TV9 Marathi. He said the actors death was not suicide, but that he was murdered. He also claimed to have seen injuries on his body and around the neck.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm