ಬ್ರೇಕಿಂಗ್ ನ್ಯೂಸ್
27-12-22 06:01 pm HK News Desk ದೇಶ - ವಿದೇಶ
ಮುಂಬೈ, ಡಿ.28: ಬಾಲಿವುಡ್ ಸ್ಟಾರ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವನ್ನಪ್ಪಿ 2 ವರ್ಷ ಕಳೆದಿದ್ದು, ಪ್ರಕರಣದ ಬಗ್ಗೆ ಇನ್ನೂ ತನಿಖೆ ನಡೆಯುತ್ತಿದೆ. ಈ ಹಿಂದೆ ಸುಶಾಂತ್ ಸಿಂಗ್ ಅವರನ್ನ ಕೊಲೆ ಮಾಡಲಾಗಿದೆ ಅನ್ನೋ ಆರೋಪ ಸಹ ಕೇಳಿಬಂದಿತ್ತು.
ಈ ಆರೋಪಕ್ಕೆ ಪುಷ್ಠಿ ಎಂಬಂತೆ ಸುಶಾಂತ್ ಸಿಂಗ್ ಮರಣೋತ್ತರ ಪರೀಕ್ಷೆ ನಡೆಸಿದ್ದ ಆಸ್ಪತ್ರೆ ಸಿಬ್ಬಂದಿ ಸ್ಫೋಟಕ ಹೇಳಿಕೆಯೊಂದನ್ನ ನೀಡಿದ್ದಾರೆ.
ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಆತನನ್ನ ಕೊಲೆ ಮಾಡಲಾಗಿದೆ ಎಂದು ಕೂಪರ್ ಆಸ್ಪತ್ರೆಯ ಶವಾಗಾರದ ನಿವೃತ್ತ ಸಿಬ್ಬಂದಿ ರೂಪ್ಕುಮಾರ್ ಶಾ ಆರೋಪಿಸಿದ್ದಾರೆ. ಸುಶಾಂತ್ ಸಿಂಗ್ ಶವ ಪತ್ತೆ ಆದಾಗ ಆತನ ದೇಹದ ಮೇಲೆ ಗಾಯಗಳಿದ್ದವು ಎಂದು ರೂಪ್ ಕುಮಾರ್ ಮಾಹಿತಿ ನೀಡಿದ್ದಾರೆ.
ಇತ್ತೀಚೆಗೆ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ರೂಪ್ಕುಮಾರ್ ಶಾ.. ಸುಶಾಂತ್ ಸಾವನ್ನಪ್ಪಿದ ದಿನ 5 ಶವಗಳನ್ನ ಕಪೂರ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಬಂದಿದ್ದವು. ಈ ಪೈಕಿ ಒಂದು ವಿಐಪಿಯದ್ದು ಎಂಬ ಸುದ್ದಿ ಇತ್ತು. ನಂತರ ಅದು ಸುಶಾಂತ್ ಸಿಂಗ್ರದ್ದು ಅಂತಾ ಗೊತ್ತಾಯಿತು. ಪರೀಕ್ಷೆ ವೇಳೆ ದೇಹದ ಮೇಲೆ ಹಾಗೂ ಕತ್ತಿನ ಭಾಗದಲ್ಲಿ ಸಾಕಷ್ಟು ಗುರುತುಗಳಿದ್ದವು. ಮರಣೋತ್ತರ ಪರೀಕ್ಷೆ ನಡೆಸೋದನ್ನ ರೆಕಾರ್ಡ್ ಮಾಡಬೇಕಿತ್ತು. ಆದರೆ ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ಫೋಟೋ ಮಾತ್ರ ತೆಗೆಯಲಾಗಿತ್ತು.
ಮರಣೋತ್ತರ ಪರೀಕ್ಷೆ ಬಳಿಕ ಸುಶಾಂತ್ ಹತ್ಯೆ ಆಗಿರಬಹುದು ಎಂಬ ವಿಚಾರವನ್ನ ನಾನು ಹಿರಿಯ ಅಧಿಕಾರಿಗಳಿಗೆ ತಿಳಿಸಿದರೂ ಅವರು ನಿಯಮಗಳ ಪ್ರಕಾರವೇ ಮಾಡು ಎಂದು ನನಗೆ ಸೂಚಿಸಿದ್ದರು. ನನ್ನ ಹಿರಿಯ ಅಧಿಕಾರಿ, ಆದಷ್ಟು ಬೇಗ ಮೃತದೇಹದ ಚಿತ್ರವನ್ನ ತೆಗೆದುಕೊಂಡು ಪೊಲೀಸರಿಗೆ ನೀಡುವಂತೆ ಹೇಳಿದ್ದರು. 2020, ಜೂನ್ನಲ್ಲಿ ಸುಶಾಂತ್ ಸಿಂಗ್ ದೇಹವು ಮುಂಬೈನ ಅಪಾರ್ಟ್ಮೆಂಟ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
Over the past two years, late Bollywood actor Sushant Singh Rajput has been in and out of the news, with no end to the conspiracy theories surrounding his suicide. In a fresh turn of events, a mortuary staff member, Roopkumar Shah has made a shocking claim about the actor’s death in an interview with TV9 Marathi. He said the actors death was not suicide, but that he was murdered. He also claimed to have seen injuries on his body and around the neck.
11-03-26 11:48 am
HK News Staffer
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 11:54 am
HK News Staffer
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am