ಬ್ರೇಕಿಂಗ್ ನ್ಯೂಸ್
02-01-23 01:00 pm HK News Desk ದೇಶ - ವಿದೇಶ
ನವದೆಹಲಿ, ಜ.2: ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರಕಾರ 2016ರಲ್ಲಿ ಕೈಗೊಂಡಿದ್ದ ನೋಟು ಅಮಾನ್ಯೀಕರಣ ಕ್ರಮವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ನ್ಯಾಯಮೂರ್ತಿ ಎಸ್.ಎ. ನಜೀರ್ ನೇತೃತ್ವದ ಐವರು ಸದಸ್ಯರ ಸಾಂವಿಧಾನಿಕ ಪೀಠದಲ್ಲಿ ನಾಲ್ಕು ಮಂದಿ ಕೇಂದ್ರ ಸರಕಾರದ ಪರ ತೀರ್ಪು ನೀಡಿದರೆ, ಜಸ್ಟಿಸ್ ಬಿವಿ ನಾಗರತ್ನ ವಿರುದ್ಧ ತೀರ್ಪು ನೀಡಿದ್ದಾರೆ.
500 ರೂ. ಮತ್ತು ಒಂದು ಸಾವಿರದ ನೋಟುಗಳನ್ನು ಅಮಾನ್ಯಗೊಳಿಸಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟಿನಲ್ಲಿ 58 ಅರ್ಜಿಗಳು ಸಲ್ಲಿಕೆಯಾಗಿದ್ದವು. ಕಳೆದ 2-3 ವರ್ಷಗಳಲ್ಲಿ ಕೋರ್ಟಿನಲ್ಲಿ ಭಾರೀ ಜಟಾಪಟಿಯೂ ನಡೆದಿತ್ತು. ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅರ್ಜಿದಾರರ ಪರವಾಗಿ ಕೋರ್ಟಿನಲ್ಲಿ ವಾದ ಮಂಡಿಸಿದ್ದರು. ಆರ್ ಬಿಐ 1934ರ ಕಾಯ್ದೆಯ 26(2)ರ ಪ್ರಕಾರ ಅಸಾಂವಿಧಾನಿಕ ಎಂದು ವಕೀಲರು ವಾದಿಸಿದ್ದರು. ಈ ಬಗ್ಗೆ ಕೇಂದ್ರ ಸರಕಾರದ ಪರವಾಗಿಯೂ ವಾದ ಮಂಡನೆಯಾಗಿದ್ದು, ಸರಕಾರದ ನಿರ್ಧಾರವನ್ನು ಕೋರ್ಟಿನಲ್ಲಿ ಪ್ರಶ್ನೆ ಮಾಡಲಾಗದು ಎಂದು ವಾದಿಸಲಾಗಿತ್ತು.


ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್ ಇಂದು ಬೆಳಗ್ಗೆ 10.30ಕ್ಕೆ ತೀರ್ಪು ಪ್ರಕಟಿಸಿದ್ದು, ಐದು ಸದಸ್ಯರ ಪೀಠದಲ್ಲಿ ನಾಲ್ವರು ಒಂದೇ ರೀತಿಯ ತೀರ್ಪು ನೀಡಿದ್ದಾರೆ. ಬಿವಿ ನಾಗರತ್ನ ತಮ್ಮ ತೀರ್ಪಿನಲ್ಲಿ ಕೇಂದ್ರ ಸರಕಾರದ ಪೂರ್ವ ನಿಯೋಜಿತವಾಗಿ ಈ ನಿರ್ಧಾರ ತೆಗೆದುಕೊಂಡಿತ್ತು. ಆದರೆ ದಿಢೀರ್ ಕ್ರಮದಿಂದ ಯಾವ ಸಾಧನೆ ಆಗಿದೆ ಎಂಬುದನ್ನು ನಿರೂಪಿಸಲು ಸೋತಿದೆ. ಕಪ್ಪು ಹಣ, ಟೆರರ್ ಫಂಡಿಂಗ್ ವಿಚಾರದಲ್ಲಿ ಈ ಕ್ರಮ ತೆಗೆದುಕೊಂಡಿದ್ದರೂ, ಕಾನೂನು ರೀತ್ಯ ಈ ರೀತಿಯ ನಡೆ ಅಸಾಂವಿಧಾನಿಕ ಎಂದು ಹೇಳಿದ್ದಾರೆ. ಸಂಸತ್ತಿನಲ್ಲಿ ಚರ್ಚಿಸಿಯೇ ಇಂತಹ ನಿರ್ಧಾರ ತೆಗೆದುಕೊಳ್ಳಬೇಕಿತ್ತು. ಈ ನಿರ್ಧಾರದಿಂದಾಗಿ ಅಸಂಖ್ಯಾತ ಸಾಮಾನ್ಯ ಜನರು ಕಷ್ಟ ಪಡುವಂತಾಗಿತ್ತು ಎಂದು ಹೇಳಿದ್ದಾರೆ.

ಇದರೊಂದಿಗೆ ನೋಟು ಅಮಾನ್ಯ ವಿರುದ್ಧ ಸಲ್ಲಿಸಿದ್ದ ಅರ್ಜಿಗಳನ್ನು ಕೋರ್ಟ್ ವಜಾ ಮಾಡಿದೆ. ನೋಟು ಅಮಾನ್ಯದ ಬಗ್ಗೆ ನಿರ್ಧಾರ ಕೈಗೊಳ್ಳಲು ಸಂಸತ್ತಿಗೆ ಅಧಿಕಾರ ಇದೆ ಎಂದು ನಾಲ್ವರು ನ್ಯಾಯಮೂರ್ತಿಗಳು ತೀರ್ಪು ನೀಡಿದ್ದಾರೆ. ಆದರೆ ಆರ್ ಬಿಐ ಕಾಯ್ದೆ ಪ್ರಕಾರ, ನೋಟು ಅಮಾನ್ಯೀಕರಣದ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂಕ್ ಮಂಡಳಿಯಿಂದಲೇ ಶಿಫಾರಸು ಆಗಬೇಕು ವಿನಾ ಸಂಸತ್ತು ನಿರ್ಧಾರ ಮಾಡುವುದಲ್ಲ. ಈ ಪ್ರಕರಣದಲ್ಲಿ ನವೆಂಬರ್ 7ರಂದು ಕೇಂದ್ರವು ಆರ್ ಬಿಐಗೆ ಪತ್ರ ಬರೆದು ನೋಟು ಅಮಾನ್ಯದ ಬಗ್ಗೆ ಸಲಹೆಯನ್ನು ಕೇಳಿತ್ತು ಎಂದು ಅರ್ಜಿದಾರರು ವಾದಿಸಿದ್ದರು.
A Constitution Bench of the Supreme Court Monday upheld by a 4:1 majority the decision taken by the central government six years ago in 2016 to demonetise currency notes of Rs 500 and Rs 1,000 denominations. The majority, comprising Justices S Abdul Nazeer, B R Gavai, A S Bopanna, V Ramasubramanian, held that the Centre’s notification dated November 8, 2016, was valid and satisfied the test of proportionality.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm