ಬ್ರೇಕಿಂಗ್ ನ್ಯೂಸ್
03-01-23 11:11 am HK News Desk ದೇಶ - ವಿದೇಶ
ನವದೆಹಲಿ, ಜ.3: ರಾಜಧಾನಿ ದೆಹಲಿಯಲ್ಲಿ ಹೊಸ ವರ್ಷದ ದಿನವೇ ಯುವತಿಯನ್ನು ಕಾರು ಎಳೆದೊಯ್ದ ಭೀಕರ ಅಪಘಾತ ಪ್ರಕರಣ ರಾಜಕೀಯ ಸ್ವರೂಪಕ್ಕೆ ತಿರುಗಿದೆ. ಸುಲ್ತಾನ್ಪುರಿಯಲ್ಲಿ ಹೊಸವರ್ಷದ ದಿನವೇ ಸ್ಕೂಟರ್ ಚಲಾಯಿಸುತ್ತಿದ್ದ 20 ವರ್ಷದ ಯುವತಿಯನ್ನು ಕಾರು ಚಾಲಕ ಡಿಕ್ಕಿಯಾದರೂ ಹತ್ತು ಕಿಮೀ ಉದ್ದಕ್ಕೂ ಎಳ್ಕೊಂಡು ಹೋಗಿದ್ದು ಇಡೀ ದೇಶದ ಜನರ ಮನ ಕಲಕುವಂತೆ ಮಾಡಿದೆ.
ಯುವತಿ ಕಾರಿನಡಿಗೆ ಸಿಲುಕಿ ಸುಮಾರು ಹತ್ತು ಕಿಮೀ ದೂರ ಎಳೆಯಲ್ಪಟ್ಟಿದ್ದಳು. ಬಳಿಕ ಯುವತಿ ನಗ್ನ ಸ್ಥಿತಿಯಲ್ಲಿ ರಸ್ತೆ ನಡುವೆ ಬಿದ್ದಿದ್ದಳು ಎನ್ನಲಾಗಿದೆ. ಈ ಅಮಾನುಷ ಕೃತ್ಯಕ್ಕೆ ಸಂಬಂಧಪಟ್ಟಂತೆ ಕಾರಿನಲ್ಲಿದ್ದ ಬಿಜೆಪಿ ನಾಯಕ ಅಮಿತ್ ಮಿತ್ತಲ್ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಾರಿನಲ್ಲಿ ಇದ್ದ ಐವರಲ್ಲಿ ಇವರೂ ಒಬ್ಬರು. ಇತರ ನಾಲ್ವರೂ ಬಂಧಿತರಾಗಿದ್ದಾರೆ. ಇದರ ಬೆನ್ನಲ್ಲೇ ಆಮ್ ಆದ್ಮಿ ಪಕ್ಷ ಕಿಡಿ ಕಾರಿದೆ. ಅರೆಸ್ಟ್ ಆದವನು ಬಿಜೆಪಿ ಸದಸ್ಯ ಆಗಿದ್ದರಿಂದ ಪೊಲೀಸರು ಪ್ರಕರಣ ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ಆಪ್ ವಕ್ತಾರ ಸೌರಭ್ ಭಾರದ್ವಾಜ್ ಆರೋಪಿಸಿದ್ದಾರೆ.

ಸ್ಥಳೀಯ ಪೊಲೀಸ್ ಠಾಣೆ ಹೊರಭಾಗದಲ್ಲಿ ದೊಡ್ಡ ಬ್ಯಾನರ್ ಇರುವ ಫೋಟೋವೀಗ ವೈರಲ್ ಆಗುತ್ತಿದೆ. ಆ ಬ್ಯಾನರ್ನಲ್ಲಿ ಬಿಜೆಪಿ ನಾಯಕ ಅಮಿತ್ ಮಿತ್ತಲ್ ಫೋಟೋವನ್ನು ನೋಡಬಹುದು. ಬ್ಯಾನರ್ ಹಾಕಿದ್ದ ಬಳಿಯ ಪೊಲೀಸ್ ಠಾಣೆಯಲ್ಲೇ ಈಗ ಮಿತ್ತಲ್ ಮತ್ತು ಅವರ ಸ್ನೇಹಿತರನ್ನು ಬಂಧಿಸಿಡಲಾಗಿದೆ. ಅಂದಮೇಲೆ ಅವರಿಗೆ ಅದೆಷ್ಟು ಪಾರದರ್ಶಕವಾಗಿ ಶಿಕ್ಷೆ ವಿಧಿಸಬಹುದು?' ಎಂದು ಸೌರಭ್ ಪ್ರಶ್ನಿಸಿದ್ದಾರೆ.
'ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಆಗಿರಬಹುದು. ಅತ್ಯಾಚಾರವೂ ಆಗಿರಬಹುದು. ಇಲ್ಲದೆ ಇದ್ದರೆ ಯುವತಿ ಅದು ಹೇಗೆ ಸಂಪೂರ್ಣ ನಗ್ನಳಾಗಿ ಪತ್ತೆಯಾಗುತ್ತಾಳೆ? ಆದರೆ ಪೊಲೀಸರು ಇದ್ಯಾವುದೇ ಆಯಾಮದಲ್ಲಿ ತನಿಖೆ ಕೈಗೆತ್ತಿಕೊಳ್ಳುತ್ತಿಲ್ಲ. ಆರೋಪಿಗಳ ವಿರುದ್ಧ ಯಾವುದೇ ಕಠಿಣ ಕ್ರಮಗಳಿರುವ ಕಾಯ್ದೆಯಡಿ ಪ್ರಕರಣ ದಾಖಲಿಸಿಲ್ಲ. ಅವರ ನಡವಳಿಕೆ ವಿಚಿತ್ರ ಎನ್ನಿಸುತ್ತಿದೆ. ಪೊಲೀಸರು ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ಮಾಡುತ್ತಿದ್ದಾರೆ' ಎಂದು ಸೌರಭ್ ಭಾರದ್ವಾಜ್ ಹೇಳಿದ್ದಾರೆ.
The 20-year-old woman, killed in the early hours of New Year after her scooter was hit by a car, was dragged for 12 kilometres under the vehicle on the city's roads, police said and added culpable homicide among other stringent sections on Monday in the case following protests over alleged "shoddy investigation".
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am