ಬ್ರೇಕಿಂಗ್ ನ್ಯೂಸ್
17-10-20 07:29 am Headline Karnataka News Network ದೇಶ - ವಿದೇಶ
ಜಮ್ಮು-ಕಾಶ್ಮೀರ, ಅಕ್ಟೋಬರ್ .17 : ಜಮ್ಮು ಕಾಶ್ಮೀರದಲ್ಲಿ ಜನರು ಉಗ್ರರ ಸಖ್ಯ ಬಿಟ್ಟು ಮುಖ್ಯವಾಹಿನಿಗೆ ಬರಬೇಕು. ಅದಕ್ಕಾಗಿ ಸರಕಾರದ ಜೊತೆ ಕೈಜೋಡಿಸಬೇಕೆಂದು ಅಲ್ಲಿ ಅಭಿಯಾನಗಳು ನಡೆಯುತ್ತಿವೆ. ಇಂಥ ಸಂದರ್ಭದಲ್ಲಿಯೇ ಸೇನಾ ಕಾರ್ಯಾಚರಣೆಯಲ್ಲಿ ಮೃತಪಟ್ಟಿದ್ದ ಭಯೋತ್ಪಾದಕನ ಮಗನೊಬ್ಬ ಮುಖ್ಯ ವಾಹಿನಿಗೆ ಬಂದು ಕೆಎಎಸ್ ಅಧಿಕಾರಿಯಾಗುವ ಮೂಲಕ ದೇಶದ ಗಮನ ಸೆಳೆದಿದ್ದಾನೆ.
ಜಮ್ಮ-ಕಾಶ್ಮೀರದ ದೋಡಾ ಜಿಲ್ಲೆಯ ಗುಂಡ್ನಾ ಗ್ರಾಮ ಎಂದರೆ ಹಿಂದೆ ಭಯೋತ್ಪಾದಕರೇ ತುಂಬಿಕೊಂಡಿದ್ದ ಪ್ರದೇಶವಾಗಿತ್ತು. ಇದೇ ಏರಿಯಾದಲ್ಲಿ ಭಾರತೀಯ ಸೇನೆ ನಡೆಸಿದ ದಾಳಿಯಲ್ಲಿ ಹಲವು ಉಗ್ರರು ಸಾವಿಗೀಡಾಗಿದ್ದರು. ಈ ಪೈಕಿ ಒಬ್ಬ ಉಗ್ರನ ಪುತ್ರ ಅಬ್ದುಲ್ಲಾ ಎಂಬಾತನನ್ನು ಶ್ರೀನಗರದ ಅನಾಥಾಶ್ರಮದಲ್ಲಿ ಬೆಳಸಲಾಗಿತ್ತು. ಸಾಕಷ್ಟು ಸವಾಲುಗಳನ್ನು ಮೆಟ್ಟಿ ನಿಂತು ಸೇನಾಧಿಕಾರಿಗಳ ಪ್ರೋತ್ಸಾಹ ಪಡೆದ ಯುವಕ ಈಗ ಸರಕಾರದ ಕೆಎಎಸ್ ಎಕ್ಸಾಂ ಬರೆದು ಅಧಿಕಾರಿಯಾಗಿದ್ದಾನೆ.
ಆಲಿಗಢ ಮುಸ್ಲಿಂ ವಿವಿಯಲ್ಲಿ ಪದವಿ ಪಡೆದಿದ್ದ ಅಬ್ದುಲ್ಲಾ ಕೆಎಎಸ್ ಪಾಸ್ ಮಾಡಿದ್ದು ಜಮ್ಮು ಕಾಶ್ಮೀರದಲ್ಲಿ ಇತರೇ ಮಂದಿಗೆ ದೊಡ್ಡ ಪ್ರೇರಣೆಯಾಗಲಿದೆ ಎನ್ನಲಾಗುತ್ತಿದೆ. ಈತನ ಸಾಧನೆಯಿಂದ ಉತ್ತೇಜಿತರಾದ ಭಾರತೀಯ ಸೇನೆ ಕಾರ್ಯಕ್ರಮ ಹಮ್ಮಿಕೊಂಡು ಅಬ್ದುಲ್ಲಾ ಅವರನ್ನು ವಿಶೇಷವಾಗಿ ಸನ್ಮಾನಿಸಿ, ಕಾಶ್ಮೀರದ ಯುವಜನರು ಸರಕಾರಿ ಅಧಿಕಾರಿಯಾಗಲು ಮುಂದೆ ಬರುವಂತೆ ಕರೆ ನೀಡಿದೆ.
ಇದೆ ವೇಳೆ ಮಾತನಾಡಿದ ಅಬ್ದುಲ್ಲಾ, ಬಾಲ್ಯದಿಂದಲೂ ತುಂಬ ಸವಾಲುಗಳನ್ನು ಮೆಟ್ಟಿಕೊಂಡು ಮುಂದೆ ಬಂದಿದ್ದೇನೆ. ಕಷ್ಟಗಳು ಎದುರಾದರೂ, ಅಧಿಕಾರಿ ಆಗಬೇಕೆಂಬ ಗುರಿಯನ್ನು ಬಿಟ್ಟು ಕೊಡಲಿಲ್ಲ. ಉಗ್ರವಾದದಿಂದ ಮುಕ್ತವಾದ ಪ್ರದೇಶಗಳಲ್ಲಿ ಯುವ ಜನಾಂಗಕ್ಕೆ ಸಾಕಷ್ಟು ಅವಕಾಶಗಳಿದ್ದು ಬಳಸಿಕೊಳ್ಳಬಹುದು ಎಂದು ಹೇಳಿದ್ದಾರೆ.
ಕಠಿಣ ಪರಿಶ್ರಮ ಹೇಗೆ ವ್ಯಕ್ತಿಯ ಜೀವನವನ್ನು ಬದಲಿಸಬಹುದು ಎಂಬುದಕ್ಕೆ ಘಾಜಿ ಅಬ್ದುಲ್ಲಾ ಉತ್ತಮ ಉದಾಹರಣೆ ಎಂದು ಸೇನಾ ವಕ್ತಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm