ಬ್ರೇಕಿಂಗ್ ನ್ಯೂಸ್
17-10-20 07:29 am Headline Karnataka News Network ದೇಶ - ವಿದೇಶ
ಜಮ್ಮು-ಕಾಶ್ಮೀರ, ಅಕ್ಟೋಬರ್ .17 : ಜಮ್ಮು ಕಾಶ್ಮೀರದಲ್ಲಿ ಜನರು ಉಗ್ರರ ಸಖ್ಯ ಬಿಟ್ಟು ಮುಖ್ಯವಾಹಿನಿಗೆ ಬರಬೇಕು. ಅದಕ್ಕಾಗಿ ಸರಕಾರದ ಜೊತೆ ಕೈಜೋಡಿಸಬೇಕೆಂದು ಅಲ್ಲಿ ಅಭಿಯಾನಗಳು ನಡೆಯುತ್ತಿವೆ. ಇಂಥ ಸಂದರ್ಭದಲ್ಲಿಯೇ ಸೇನಾ ಕಾರ್ಯಾಚರಣೆಯಲ್ಲಿ ಮೃತಪಟ್ಟಿದ್ದ ಭಯೋತ್ಪಾದಕನ ಮಗನೊಬ್ಬ ಮುಖ್ಯ ವಾಹಿನಿಗೆ ಬಂದು ಕೆಎಎಸ್ ಅಧಿಕಾರಿಯಾಗುವ ಮೂಲಕ ದೇಶದ ಗಮನ ಸೆಳೆದಿದ್ದಾನೆ.
ಜಮ್ಮ-ಕಾಶ್ಮೀರದ ದೋಡಾ ಜಿಲ್ಲೆಯ ಗುಂಡ್ನಾ ಗ್ರಾಮ ಎಂದರೆ ಹಿಂದೆ ಭಯೋತ್ಪಾದಕರೇ ತುಂಬಿಕೊಂಡಿದ್ದ ಪ್ರದೇಶವಾಗಿತ್ತು. ಇದೇ ಏರಿಯಾದಲ್ಲಿ ಭಾರತೀಯ ಸೇನೆ ನಡೆಸಿದ ದಾಳಿಯಲ್ಲಿ ಹಲವು ಉಗ್ರರು ಸಾವಿಗೀಡಾಗಿದ್ದರು. ಈ ಪೈಕಿ ಒಬ್ಬ ಉಗ್ರನ ಪುತ್ರ ಅಬ್ದುಲ್ಲಾ ಎಂಬಾತನನ್ನು ಶ್ರೀನಗರದ ಅನಾಥಾಶ್ರಮದಲ್ಲಿ ಬೆಳಸಲಾಗಿತ್ತು. ಸಾಕಷ್ಟು ಸವಾಲುಗಳನ್ನು ಮೆಟ್ಟಿ ನಿಂತು ಸೇನಾಧಿಕಾರಿಗಳ ಪ್ರೋತ್ಸಾಹ ಪಡೆದ ಯುವಕ ಈಗ ಸರಕಾರದ ಕೆಎಎಸ್ ಎಕ್ಸಾಂ ಬರೆದು ಅಧಿಕಾರಿಯಾಗಿದ್ದಾನೆ.
ಆಲಿಗಢ ಮುಸ್ಲಿಂ ವಿವಿಯಲ್ಲಿ ಪದವಿ ಪಡೆದಿದ್ದ ಅಬ್ದುಲ್ಲಾ ಕೆಎಎಸ್ ಪಾಸ್ ಮಾಡಿದ್ದು ಜಮ್ಮು ಕಾಶ್ಮೀರದಲ್ಲಿ ಇತರೇ ಮಂದಿಗೆ ದೊಡ್ಡ ಪ್ರೇರಣೆಯಾಗಲಿದೆ ಎನ್ನಲಾಗುತ್ತಿದೆ. ಈತನ ಸಾಧನೆಯಿಂದ ಉತ್ತೇಜಿತರಾದ ಭಾರತೀಯ ಸೇನೆ ಕಾರ್ಯಕ್ರಮ ಹಮ್ಮಿಕೊಂಡು ಅಬ್ದುಲ್ಲಾ ಅವರನ್ನು ವಿಶೇಷವಾಗಿ ಸನ್ಮಾನಿಸಿ, ಕಾಶ್ಮೀರದ ಯುವಜನರು ಸರಕಾರಿ ಅಧಿಕಾರಿಯಾಗಲು ಮುಂದೆ ಬರುವಂತೆ ಕರೆ ನೀಡಿದೆ.
ಇದೆ ವೇಳೆ ಮಾತನಾಡಿದ ಅಬ್ದುಲ್ಲಾ, ಬಾಲ್ಯದಿಂದಲೂ ತುಂಬ ಸವಾಲುಗಳನ್ನು ಮೆಟ್ಟಿಕೊಂಡು ಮುಂದೆ ಬಂದಿದ್ದೇನೆ. ಕಷ್ಟಗಳು ಎದುರಾದರೂ, ಅಧಿಕಾರಿ ಆಗಬೇಕೆಂಬ ಗುರಿಯನ್ನು ಬಿಟ್ಟು ಕೊಡಲಿಲ್ಲ. ಉಗ್ರವಾದದಿಂದ ಮುಕ್ತವಾದ ಪ್ರದೇಶಗಳಲ್ಲಿ ಯುವ ಜನಾಂಗಕ್ಕೆ ಸಾಕಷ್ಟು ಅವಕಾಶಗಳಿದ್ದು ಬಳಸಿಕೊಳ್ಳಬಹುದು ಎಂದು ಹೇಳಿದ್ದಾರೆ.
ಕಠಿಣ ಪರಿಶ್ರಮ ಹೇಗೆ ವ್ಯಕ್ತಿಯ ಜೀವನವನ್ನು ಬದಲಿಸಬಹುದು ಎಂಬುದಕ್ಕೆ ಘಾಜಿ ಅಬ್ದುಲ್ಲಾ ಉತ್ತಮ ಉದಾಹರಣೆ ಎಂದು ಸೇನಾ ವಕ್ತಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm