ಬ್ರೇಕಿಂಗ್ ನ್ಯೂಸ್
17-10-20 07:29 am Headline Karnataka News Network ದೇಶ - ವಿದೇಶ
ಜಮ್ಮು-ಕಾಶ್ಮೀರ, ಅಕ್ಟೋಬರ್ .17 : ಜಮ್ಮು ಕಾಶ್ಮೀರದಲ್ಲಿ ಜನರು ಉಗ್ರರ ಸಖ್ಯ ಬಿಟ್ಟು ಮುಖ್ಯವಾಹಿನಿಗೆ ಬರಬೇಕು. ಅದಕ್ಕಾಗಿ ಸರಕಾರದ ಜೊತೆ ಕೈಜೋಡಿಸಬೇಕೆಂದು ಅಲ್ಲಿ ಅಭಿಯಾನಗಳು ನಡೆಯುತ್ತಿವೆ. ಇಂಥ ಸಂದರ್ಭದಲ್ಲಿಯೇ ಸೇನಾ ಕಾರ್ಯಾಚರಣೆಯಲ್ಲಿ ಮೃತಪಟ್ಟಿದ್ದ ಭಯೋತ್ಪಾದಕನ ಮಗನೊಬ್ಬ ಮುಖ್ಯ ವಾಹಿನಿಗೆ ಬಂದು ಕೆಎಎಸ್ ಅಧಿಕಾರಿಯಾಗುವ ಮೂಲಕ ದೇಶದ ಗಮನ ಸೆಳೆದಿದ್ದಾನೆ.
ಜಮ್ಮ-ಕಾಶ್ಮೀರದ ದೋಡಾ ಜಿಲ್ಲೆಯ ಗುಂಡ್ನಾ ಗ್ರಾಮ ಎಂದರೆ ಹಿಂದೆ ಭಯೋತ್ಪಾದಕರೇ ತುಂಬಿಕೊಂಡಿದ್ದ ಪ್ರದೇಶವಾಗಿತ್ತು. ಇದೇ ಏರಿಯಾದಲ್ಲಿ ಭಾರತೀಯ ಸೇನೆ ನಡೆಸಿದ ದಾಳಿಯಲ್ಲಿ ಹಲವು ಉಗ್ರರು ಸಾವಿಗೀಡಾಗಿದ್ದರು. ಈ ಪೈಕಿ ಒಬ್ಬ ಉಗ್ರನ ಪುತ್ರ ಅಬ್ದುಲ್ಲಾ ಎಂಬಾತನನ್ನು ಶ್ರೀನಗರದ ಅನಾಥಾಶ್ರಮದಲ್ಲಿ ಬೆಳಸಲಾಗಿತ್ತು. ಸಾಕಷ್ಟು ಸವಾಲುಗಳನ್ನು ಮೆಟ್ಟಿ ನಿಂತು ಸೇನಾಧಿಕಾರಿಗಳ ಪ್ರೋತ್ಸಾಹ ಪಡೆದ ಯುವಕ ಈಗ ಸರಕಾರದ ಕೆಎಎಸ್ ಎಕ್ಸಾಂ ಬರೆದು ಅಧಿಕಾರಿಯಾಗಿದ್ದಾನೆ.
ಆಲಿಗಢ ಮುಸ್ಲಿಂ ವಿವಿಯಲ್ಲಿ ಪದವಿ ಪಡೆದಿದ್ದ ಅಬ್ದುಲ್ಲಾ ಕೆಎಎಸ್ ಪಾಸ್ ಮಾಡಿದ್ದು ಜಮ್ಮು ಕಾಶ್ಮೀರದಲ್ಲಿ ಇತರೇ ಮಂದಿಗೆ ದೊಡ್ಡ ಪ್ರೇರಣೆಯಾಗಲಿದೆ ಎನ್ನಲಾಗುತ್ತಿದೆ. ಈತನ ಸಾಧನೆಯಿಂದ ಉತ್ತೇಜಿತರಾದ ಭಾರತೀಯ ಸೇನೆ ಕಾರ್ಯಕ್ರಮ ಹಮ್ಮಿಕೊಂಡು ಅಬ್ದುಲ್ಲಾ ಅವರನ್ನು ವಿಶೇಷವಾಗಿ ಸನ್ಮಾನಿಸಿ, ಕಾಶ್ಮೀರದ ಯುವಜನರು ಸರಕಾರಿ ಅಧಿಕಾರಿಯಾಗಲು ಮುಂದೆ ಬರುವಂತೆ ಕರೆ ನೀಡಿದೆ.
ಇದೆ ವೇಳೆ ಮಾತನಾಡಿದ ಅಬ್ದುಲ್ಲಾ, ಬಾಲ್ಯದಿಂದಲೂ ತುಂಬ ಸವಾಲುಗಳನ್ನು ಮೆಟ್ಟಿಕೊಂಡು ಮುಂದೆ ಬಂದಿದ್ದೇನೆ. ಕಷ್ಟಗಳು ಎದುರಾದರೂ, ಅಧಿಕಾರಿ ಆಗಬೇಕೆಂಬ ಗುರಿಯನ್ನು ಬಿಟ್ಟು ಕೊಡಲಿಲ್ಲ. ಉಗ್ರವಾದದಿಂದ ಮುಕ್ತವಾದ ಪ್ರದೇಶಗಳಲ್ಲಿ ಯುವ ಜನಾಂಗಕ್ಕೆ ಸಾಕಷ್ಟು ಅವಕಾಶಗಳಿದ್ದು ಬಳಸಿಕೊಳ್ಳಬಹುದು ಎಂದು ಹೇಳಿದ್ದಾರೆ.
ಕಠಿಣ ಪರಿಶ್ರಮ ಹೇಗೆ ವ್ಯಕ್ತಿಯ ಜೀವನವನ್ನು ಬದಲಿಸಬಹುದು ಎಂಬುದಕ್ಕೆ ಘಾಜಿ ಅಬ್ದುಲ್ಲಾ ಉತ್ತಮ ಉದಾಹರಣೆ ಎಂದು ಸೇನಾ ವಕ್ತಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm