ಬ್ರೇಕಿಂಗ್ ನ್ಯೂಸ್
17-10-20 01:47 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 12: ರಾಷ್ಟ್ರ ರಾಜಧಾನಿ ನವದೆಹಲಿ ವಾಸಕ್ಕೆ ಯೋಗ್ಯ ನಗರವಲ್ಲ ಎಂಬ ಮತ್ತೆ ಸಾಬೀತಾಗಿದೆ. ದಿನೇ ದಿನೇ ರಾಜಧಾನಿಯ ವಾಯುಮಾಲಿನ್ಯ ಮಿತಿ ಮೀರುತ್ತಿದ್ದು, ಲಾಕ್ ಡೌನ್ ಸಮಯದಲ್ಲಿ ನಿಯಂತ್ರಣದಲ್ಲಿದ್ದ ಮಾಲಿನ್ಯ ಇದೀಗ ಅಕ್ಟೋಬರ್ ನಲ್ಲಿ ಕಳೆದೆರಡು ವರ್ಷಕ್ಕಿಂತ ದುಪ್ಪಟ್ಟಾಗಿದೆ.
ದೆಹಲಿಯ ಸುತ್ತ ಮುತ್ತಲಿನ ರಾಜ್ಯಗಳಲ್ಲಿ ರೈತರು ತಮ್ಮ ಬೆಳೆ ಕಟಾವು ಮಾಡಿದ ಬಳಿಕ ಕಳೆ ಹಾಗೂ ಪೈರಿನ ಹುಲ್ಲು ಕಡ್ಡಿಗೆ ಬೆಂಕಿ ಹಚ್ಚುತ್ತಾರೆ, ಇದು ದೆಹಲಿಯ ವಾಯುಮಾಲಿನ್ಯಕ್ಕೆ ಪ್ರಮುಖ ಕೊಡುಗೆಯಾಗಿದೆ.
ನಗರದಲ್ಲಿ ಹದಗೆಡುತ್ತಿರುವ ಗಾಳಿಯ ಗುಣಮಟ್ಟ ಕೊರೊನಾ ಸೋಂಕು ಹರಡಲು ಕಾರಣವಾಗುತ್ತದೆ ಎಂಬ ಭಯದಿಂದ ಅಸ್ತಮಾ ರೀತಿಯ ಉಸಿರಾಟದ ಸಮಸ್ಯೆ ಇರುವ ಜನರು ಆಮ್ಲಜನಕ ಸಿಲಿಂಡರ್ ಗಳನ್ನೂ ಹಾಗೂ ನಾಡಿ ಒಕ್ಸಿಮೀಟರ್ಸ್ ಗಳನ್ನೂ ಮುಂಜಾಗ್ರತಾ ಕ್ರಮವಾಗಿ ಮನೆಯಲ್ಲಿ ಸಂಗ್ರಹಿಸುತ್ತಿದ್ದಾರೆ. ಶುಕ್ರವಾರ ದೆಹಲಿ ಅತ್ಯಂತ ಕಳಪೆ ಅಂದ್ರೆ, 235 (ಎಕ್ಯೂಐ) ಸೂಚ್ಯಂಕವನ್ನು ದಾಖಲಿಸಿದೆ.
ಇತ್ತೀಚೆಗಷ್ಟೇ ಕೊರೊನಾದಿಂದ ಗುಣಮುಖರಾದ ದೆಹಲಿಯ ನಿವಾಸಿ ರಾಕೇಶ್ ಗುಪ್ತ(45 ) ಮಾಲಿನ್ಯದ ಕಾರಣಕ್ಕೆ ಕೊರೊನಾ ರೋಗಿಗಳು ಸಂಕಷ್ಟ ಪಡುತ್ತಿದ್ದಾರೆ ಎಂದಿದ್ದಾರೆ. ಅಸ್ತಮಾ ಹಾಗೂ ಮಾಲಿನ್ಯ ಆರೋಗ್ಯ ಸ್ಥಿತಿಯನ್ನು ಮತ್ತಷ್ಟು ಬಿಗಡಾಯಿಸುತ್ತಿದೆ. ನನಗೆ ನಡೆಯಲು ಅಥವಾ ಮನೆಯಿಂದ ಹೊರಬಲು ಸಾಧ್ಯವಾಗುತ್ತಿಲ್ಲ. ಮನೆಯಿಂದ ಹೊರಬಂದರೂ ಉಸಿರಾಡಲು ಹರಸಾಹಸ ಕಷ್ಟ ಪಡ ಬೇಕಾಗುತ್ತದೆ ಎಂದಿದ್ದಾರೆ.
ಈ ಕುಟುಂಬವು ತುರ್ತು ಬಳಕೆಗಾಗಿ 15 ಕೆಜಿ ಆಮ್ಲಜನಕ ಸಿಲಿಂಡರ್ ಮತ್ತು ಪ್ರತಿದಿನ ರಕ್ತದಲ್ಲಿನ ಆಮ್ಲಜನಕವನ್ನು ಅಳೆಯಲು ಪೋರ್ಟಬಲ್ ಪಲ್ಸ್ ಒಕ್ಸಿಮೀಟರ್ ಅನ್ನು ಖರೀದಿಸಿದ್ದಾರೆ. ಜೊತೆಗೆ ಏರ್ ಪ್ಯೂರಿಫೈರ್ ಗಳನ್ನೂ ಖರೀದಿಸಲು ಕೂಡ ಉತ್ಸುಕರಾಗಿದ್ದಾರೆ ಎಂದು ತಿಳಿಸಿದ್ದಾರೆ.
After months of comparatively clean air and blue skies in the lockdown, pollution levels have nailed to their worst in two years in October in the national capital Delhi.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm