ಬ್ರೇಕಿಂಗ್ ನ್ಯೂಸ್
08-01-23 06:00 pm HK News Desk ದೇಶ - ವಿದೇಶ
ಕಾಸರಗೋಡು, ಜ.8 : ಬಿರಿಯಾನಿ ತಿಂದು 19 ವರ್ಷದ ಯುವತಿ ಸಾವನ್ನಪ್ಪಿದ ಪ್ರಕರಣ ಕೇರಳದಲ್ಲಿ ಸಂಚಲನ ಸೃಷ್ಟಿಸಿದೆ. ಕುಜಿಮಂತಿ ಎನ್ನುವ ಕೇರಳದ ವಿಶೇಷ ಮಾದರಿಯ ಬಿರಿಯಾನಿ ತಿಂದ ಬಳಿಕ ಅಂಜುಶ್ರೀ ಸೇರಿದಂತೆ ಕುಟುಂಬದ ನಾಲ್ವರು ಅಸ್ವಸ್ಥರಾಗಿದ್ದರು. ಆದರೆ ಅಂಜುಶ್ರೀ ಮಾತ್ರ ದುರಂತ ಸಾವು ಕಂಡಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಅಂಜುಶ್ರೀ ಮತ್ತು ಆಕೆಯ ಸ್ನೇಹಿತರು ಡಿಸೆಂಬರ್ 31 ರಂದು ಉದುಮದ ಅಲ್ ರೊಮ್ಯಾನ್ಸಿಯಾ ಹೋಟೆಲ್ನಿಂದ ಕೇರಳದ ವಿಶೇಷ ಬಿರಿಯಾನಿ ಕುಜಿಮಂತಿಯನ್ನು ಆರ್ಡರ್ ಮಾಡಿದ್ದರು. ಆಕೆಯ ಸೋದರಿ ಅನುಶ್ರೀ ಪ್ರಕಾರ, ಅಂಜು ಸೇರಿ ನಾಲ್ಕು ಜನ ಬಿರಿಯಾನಿ ಸೇವಿಸಿದ್ದಾರೆ ಮತ್ತು ಅವರಲ್ಲಿ ಇಬ್ಬರಿಗೆ ತಕ್ಷಣ ವಾಂತಿ ಮತ್ತು ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಅಂಜುಶ್ರೀ ಅಸ್ವಸ್ಥಗೊಂಡಿದ್ದರಿಂದ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಾಥಮಿಕ ಚಿಕಿತ್ಸೆ ಬಳಿಕ ಆಕೆ ಮನೆಗೆ ಮರಳಿದ್ದಳು. ಆದರೆ, ಶುಕ್ರವಾರ ಬೆಳಗ್ಗೆ ಮತ್ತೆ ಪ್ರಜ್ಞಾಹೀನಳಾಗಿದ್ದು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಶನಿವಾರ ಚಿಕಿತ್ಸೆ ಫಲಿಸದೇ ಅಂಜು ಕೊನೆಯುಸಿರೆಳೆದಳು.
ಘಟನೆಗೆ ಸಂಬಂಧಿಸಿದಂತೆ ಅಲ್ ರೊಮ್ಯಾನ್ಸಿಯಾ ಹೋಟೆಲ್ ಮಾಲೀಕ ಸೇರಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಆಹಾರ ಸುರಕ್ಷತಾ ಇಲಾಖೆ ಹೊಟೇಲ್ಗೆ ಬೀಗ ಹಾಕಿ ಸೀಲ್ ಮಾಡಿದೆ. ಅಂಜು ಕುಟುಂಬ ನೀಡಿದ ದೂರಿನ ಮೇರೆಗೆ ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ಬಗ್ಗೆ ಕುತೂಹಲ ಮೂಡಿದ್ದು ಬಿರಿಯಾನಿಯಲ್ಲಿ ಏನಿದ್ದಿರಬಹುದು ಎಂಬ ಬಗ್ಗೆ ಕುತೂಹಲ ಇದೆ. ವರದಿ ಆಧರಿಸಿ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ.
Kerala Woman dies after eating Biryani, three including restaurant owner taken to custody.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am