ಬ್ರೇಕಿಂಗ್ ನ್ಯೂಸ್
08-01-23 06:00 pm HK News Desk ದೇಶ - ವಿದೇಶ
ಕಾಸರಗೋಡು, ಜ.8 : ಬಿರಿಯಾನಿ ತಿಂದು 19 ವರ್ಷದ ಯುವತಿ ಸಾವನ್ನಪ್ಪಿದ ಪ್ರಕರಣ ಕೇರಳದಲ್ಲಿ ಸಂಚಲನ ಸೃಷ್ಟಿಸಿದೆ. ಕುಜಿಮಂತಿ ಎನ್ನುವ ಕೇರಳದ ವಿಶೇಷ ಮಾದರಿಯ ಬಿರಿಯಾನಿ ತಿಂದ ಬಳಿಕ ಅಂಜುಶ್ರೀ ಸೇರಿದಂತೆ ಕುಟುಂಬದ ನಾಲ್ವರು ಅಸ್ವಸ್ಥರಾಗಿದ್ದರು. ಆದರೆ ಅಂಜುಶ್ರೀ ಮಾತ್ರ ದುರಂತ ಸಾವು ಕಂಡಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಅಂಜುಶ್ರೀ ಮತ್ತು ಆಕೆಯ ಸ್ನೇಹಿತರು ಡಿಸೆಂಬರ್ 31 ರಂದು ಉದುಮದ ಅಲ್ ರೊಮ್ಯಾನ್ಸಿಯಾ ಹೋಟೆಲ್ನಿಂದ ಕೇರಳದ ವಿಶೇಷ ಬಿರಿಯಾನಿ ಕುಜಿಮಂತಿಯನ್ನು ಆರ್ಡರ್ ಮಾಡಿದ್ದರು. ಆಕೆಯ ಸೋದರಿ ಅನುಶ್ರೀ ಪ್ರಕಾರ, ಅಂಜು ಸೇರಿ ನಾಲ್ಕು ಜನ ಬಿರಿಯಾನಿ ಸೇವಿಸಿದ್ದಾರೆ ಮತ್ತು ಅವರಲ್ಲಿ ಇಬ್ಬರಿಗೆ ತಕ್ಷಣ ವಾಂತಿ ಮತ್ತು ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಅಂಜುಶ್ರೀ ಅಸ್ವಸ್ಥಗೊಂಡಿದ್ದರಿಂದ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಾಥಮಿಕ ಚಿಕಿತ್ಸೆ ಬಳಿಕ ಆಕೆ ಮನೆಗೆ ಮರಳಿದ್ದಳು. ಆದರೆ, ಶುಕ್ರವಾರ ಬೆಳಗ್ಗೆ ಮತ್ತೆ ಪ್ರಜ್ಞಾಹೀನಳಾಗಿದ್ದು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಶನಿವಾರ ಚಿಕಿತ್ಸೆ ಫಲಿಸದೇ ಅಂಜು ಕೊನೆಯುಸಿರೆಳೆದಳು.
ಘಟನೆಗೆ ಸಂಬಂಧಿಸಿದಂತೆ ಅಲ್ ರೊಮ್ಯಾನ್ಸಿಯಾ ಹೋಟೆಲ್ ಮಾಲೀಕ ಸೇರಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಆಹಾರ ಸುರಕ್ಷತಾ ಇಲಾಖೆ ಹೊಟೇಲ್ಗೆ ಬೀಗ ಹಾಕಿ ಸೀಲ್ ಮಾಡಿದೆ. ಅಂಜು ಕುಟುಂಬ ನೀಡಿದ ದೂರಿನ ಮೇರೆಗೆ ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ಬಗ್ಗೆ ಕುತೂಹಲ ಮೂಡಿದ್ದು ಬಿರಿಯಾನಿಯಲ್ಲಿ ಏನಿದ್ದಿರಬಹುದು ಎಂಬ ಬಗ್ಗೆ ಕುತೂಹಲ ಇದೆ. ವರದಿ ಆಧರಿಸಿ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ.
Kerala Woman dies after eating Biryani, three including restaurant owner taken to custody.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 07:33 pm
Mangalore Correspondent
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm