ಬ್ರೇಕಿಂಗ್ ನ್ಯೂಸ್
09-01-23 06:46 pm HK News Desk ದೇಶ - ವಿದೇಶ
ಮುಂಬೈ, ಜ.9: ವೀಡಿಯೋಕಾನ್ ಸಮೂಹಕ್ಕೆ ಸಾಲ ಮಂಜೂರಾತಿಯಲ್ಲಿ ಅಕ್ರಮ, ವಂಚನೆ ಆರೋಪದಡಿ ಬಂಧಿತರಾಗಿದ್ದ ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್, ಪತಿ ದೀಪಕ್ ಕೊಚ್ಚರ್ ಅವರ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಸೋಮವಾರ ಆದೇಶಿಸಿದೆ.
ಸಿಬಿಐ ಈ ಪ್ರಕರಣದಲ್ಲಿ ನಮ್ಮನ್ನು ಅಕ್ರಮವಾಗಿ ಬಂಧಿಸಿದೆ ಎಂದು ಆರೋಪಿಸಿ ಚಂದಾ ಕೊಚ್ಚರ್, ಪತಿ ದೀಪಕ್ ಕೊಚ್ಚರ್ ಅವರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದೇಶವನ್ನು ಬಾಂಬೆ ಹೈಕೋರ್ಟ್ ಶುಕ್ರವಾರ ಕಾಯ್ದಿರಿಸಿತ್ತು.

ಸೋಮವಾರ ಬಾಂಬೆ ಹೈಕೋರ್ಟ್ “ಕಾನೂನಿಗೆ ಅನುಗುಣವಾಗಿ ಬಂಧಿಸಲಾಗಿಲ್ಲ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದ್ದು, 1 ಲಕ್ಷ ರೂಪಾಯಿ ಬಾಂಡ್ ಮೇಲೆ ದಂಪತಿಯನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡಲು ಆದೇಶ ನೀಡಿದೆ. ಡಿ.23 ರಂದು ಐಸಿಐಸಿಐ ಬ್ಯಾಂಕ್ - ವಿಡಿಯೋಕಾನ್ ಸಾಲ ವಂಚನೆ ಪ್ರಕರಣದಲ್ಲಿ ಐಸಿಐಸಿಐ ಬ್ಯಾಂಕ್ನ ಮಾಜಿ ಎಂಡಿ ಮತ್ತು ಸಿಇಒ ಚಂದಾ ಕೊಚ್ಚಾರ್, ಅವರ ಪತಿ ದೀಪಕ್ ಕೊಚ್ಚಾರ್ ಅವರನ್ನು ಸಿಬಿಐ ಬಂಧಿಸಿ, ನ್ಯಾಯಾಂಗ ಬಂಧನದಲ್ಲಿ ಇರಿಸಿತ್ತು.

ಐಸಿಐಸಿಐ ಬ್ಯಾಂಕ್ನಿಂದ 3,250 ಕೋಟಿ ರೂ. ಸಾಲ ಪಡೆದ ಕೆಲವು ತಿಂಗಳಲ್ಲೇ ವಿಡಿಯೊಕಾನ್ ಗ್ರೂಪ್ನ ವೇಣುಗೋಪಾಲ್, ನ್ಯೂಪವರ್ ರಿನ್ಯೂವಬಲ್ಸ್ ಕಂಪೆನಿಯಲ್ಲಿ ಕೋಟ್ಯಂತರ ರೂ. ಹೂಡಿಕೆ ಮಾಡಿದ್ದರು. ಐಸಿಐಸಿಐ ಬ್ಯಾಂಕ್ಗೆ ವಂಚನೆ ಮಾಡಲೆಂದೇ ಇತರೆ ಆರೋಪಿಗಳ ಜತೆ ಸೇರಿಕೊಂಡು ಚಂದಾ ಕೊಚ್ಚರ್ ಖಾಸಗಿ ಕಂಪೆನಿಗೆ ಸಾಲ ಮಂಜೂರು ಮಾಡಿದ್ದಾರೆ ಎಂದು ಸಿಬಿಐ ಆರೋಪಿಸಿತ್ತು.
The Bombay High Court on Monday granted interim relief to former ICICI Bank MD & CEO Chanda Kochhar and her husband Deepak Kochhar in the ICICI Bank-Videocon case, observing that their arrests were not in accordance with the law.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 07:33 pm
Mangalore Correspondent
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm