ಬ್ರೇಕಿಂಗ್ ನ್ಯೂಸ್
09-01-23 10:27 pm HK News Desk ದೇಶ - ವಿದೇಶ
ಲಖನೌ, ಜ 09: ತೀವ್ರ ಚಳಿ ವಾತಾವರಣದ ಪರಿಣಾಮವಾಗಿ ಉತ್ತರ ಪ್ರದೇಶದ ಲಖನೌನಲ್ಲಿ ಹೃದಯಾಘಾತ ಮತ್ತು ಮೆದುಳು ನಿಷ್ಕ್ರೀಯದಿಂದ ಕಳೆದ ಐದೇ ದಿನದಲ್ಲಿ ಒಟ್ಟು 98 ಮಂದಿ ಮೃತಪಟ್ಟಿದ್ದಾರೆ.
ಉತ್ತರ ಭಾರತದಾದ್ಯಂತ ಕಳೆದ ಕೆಲವು ವಾರಗಳಿಂದ ತೀವ್ರವಾಗಿ ಚಳಿ ಗಾಳಿ ಬೀಸುತ್ತಿದೆ. ನಿತ್ಯ ಬೆಳಗ್ಗೆ ದಟ್ಟ ಮಂಜು ಕವಿದ ವಾತಾವರಣ ದಾಖಲಾಗುತ್ತಿದೆ. ಈ ಕಾರಣದಿಂದ ಯಾರೂ ಮನೆಯಿಂದ ಹೊರ ಬರುತ್ತಿಲ್ಲ. ಎದುರಿಗಿನ ಹತ್ತಿರದ ವ್ಯಕ್ತಿಗಳೇ ಕಾಣದಷ್ಟು ಮಂಜು ಕವಿಯುತ್ತಿದೆ. ಈ ತೀವ್ರ ಶೀತದಿಂದ ಅನಾರೋಗ್ಯಕ್ಕೆ ಒಳಗಾಗುವುದು ಸಾಮಾನ್ಯವಾಗಿತ್ತು. ಆದರೆ ಇದೇ ಕಾರಣದಿಂದ ಇದೀಗ ಕಾನ್ಪುರದಲ್ಲಿ ಸರಣಿ ಸಾವುಗಳು ಸಂಭವಿಸಿವೆ.
ಒಟ್ಟು 98 ಸಾವುಗಳ ಪೈಕಿ 44 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರೆ, 54 ಮಂದಿ ಆಸ್ಪತ್ರೆಗೆ ಬರುವ ದಾರಿ ಮಧ್ಯದಲ್ಲೇ ಉಸಿರು ಚೆಲ್ಲಿದ್ದಾರೆ. ಈ ಬಗ್ಗೆ ಅಧಿಕೃತ ಕಾರಣ ತಿಳಿಸಿದ ಕಾನ್ಪುರದ ಎಲ್ಪಿಎಸ್ ಹೃದ್ರೋಗ ಸಂಸ್ಥೆಯ ಹೃದ್ರೋಗ ತಜ್ಞರ ಮತ್ತು ಕಾರ್ಡಿಯಾಕ್ ಸರ್ಜನ್ ಲಕ್ಷ್ಮೀಪಥ್ ಸಿಂಗಾನಿಯ ಅವರು ಅಂಕಿ ಅಂಶಗಳನ್ನು ಬಹಿರಂಗಪಡಿಸಿದ್ದಾರೆ.
ಕಳೆದ ಒಂದು ವಾರದಲ್ಲಿ ನಮ್ಮ ಹೃದ್ರೋಗ ಸಂಸ್ಥೆಗೆ 723 ಮಂದಿ ಹೃದಯ ಸಂಬಂಧಿ ತೀವ್ರ ಅನಾರೋಗ್ಯಕ್ಕೆ ಒಳಗಾದವರು ಆಗಮಿಸಿದ್ದರು. ಅದರಲ್ಲಿ 14 ಮಂದಿ ತೀವ್ರ ಶೀತದಿಂದ ಬಳಲುತ್ತಿದ್ದರು. ಅದರಲ್ಲಿ ಆರು ಮಂದಿ ಹೃದಯಾಘಾತದಿಂದ ಮೃತಪಟ್ಟಿದ್ದು, ಅವರು ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದರು ಎಂಬುದು ತಪಾಸಣೆ ವೇಳೆ ತಿಳಿದು ಬಂದಿದೆ. ಬಾಕಿ ಎಂಟು ಮಂದಿ ಆಸ್ಪತ್ರೆ ಬರುವ ಮುನ್ನವೇ ಮೃತಪಟ್ಟಿದ್ದರು ಎಂದು ಅವರು ತಿಳಿಸಿದರು.
ಒಟ್ಟು 14 ಮಂದಿ 24 ಗಂಟೆಯಲ್ಲಿ ಮೃತಪಟ್ಟಿದ್ದಾರೆ. ಅಲ್ಲದೇ ಒಟ್ಟು 604 ಮಂದಿ ರೋಗಿಗಳು ಹೃದ್ರೋಗ ಸಂಸ್ಥೆಗೆ ದಾಖಲಾಗಿದ್ದಾರೆ. ಅದರಲ್ಲಿ 54 ಮಂದಿ ಹೊಸ ರೋಗಿಗಳಿದ್ದು, 27ಮಂದಿ ಈಗಾಗಲೇ ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗಿ ಚಿಕಿತ್ಸೆ ಪಡೆದ ಹಳೆ ರೋಗಿಗಳು ಇದ್ದಾರೆ.
ಹೃದ್ರೋಗ ಸಂಸ್ಥೆಯ ನಿರ್ದೇಶಕ ವಿನಯ ಕೃಷ್ಣ ಅವರು, ಜನರು ತೀವ್ರ ಶೀತದಿಂದ ರಕ್ಷಿಸಿಕೊಳ್ಳಬೇಕು. ಸದಾ ಬೆಚ್ಚಿನ ವಾತಾವರಣದಲ್ಲಿ ಇರುವ ಮೂಲಕ ಆರೋಗ್ಯವಾಗಿರಬೇಕು ಎಂದರು.
ಲಕ್ನೋದ ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದ (ಕೆಜಿಎಂಯು) ಅಧ್ಯಾಪಕರೊಬ್ಬರು,ಈ ಶೀತ ವಾತಾವರಣದಲ್ಲಿ ಹೃದಯಾಘಾತವು ಕೇವಲ ವಯಸ್ಸಾದವರಿಗೆ ಸೀಮಿತವಾಗದೇ ಹದಿ ಹರೆಯದವರೂ ಸಹ ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ. ಇದರಿಂದ ತಪ್ಪಿಸಿಕೊಳ್ಳಲು ಶೀತಕ್ಕೆ ಮೈಯೊಡ್ಡದೇ ಸದಾ ಬೆಚ್ಚಗಿದ್ದು, ಆರೋಗ್ಯವಾಗಿರಬೇಕು ಎಂದು ಅವರು ಸಲಹೆ ನೀಡಿದರು.
The figures are scary enough to give a shock. In the past five days, 98 persons have died due to heart and brain strokes in Uttar Pradesh's Kanpur. Of the 98 deaths, 44 died in the hospital while 54 patients died before treatment. These statistics have been given by the L.P.S Institute of Cardiology.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm