ಬ್ರೇಕಿಂಗ್ ನ್ಯೂಸ್
12-01-23 01:28 pm HK News Desk ದೇಶ - ವಿದೇಶ
ತಿರುವನಂತಪುರಂ, ಜ.12: ಶಬರಿಮಲೆ ಅಯ್ಯಪ್ಪ ಸನ್ನಿಧಾನದಲ್ಲಿ ಏಲಕ್ಕಿ ಹಾಕದ ʻಅರವಣ ಪಾಯಸಂʼ ತಯಾರಿಸಲು ತಿರುವಾಂಕೂರು ದೇವಸ್ವಂ ಬೋರ್ಡ್ ತೀರ್ಮಾನಿಸಿದೆ. ಏಲಕ್ಕಿಯಲ್ಲಿ ಮಿತಿಮೀರಿದ ಕೀಟನಾಶಕ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
ಶಬರಿಮಲೆ ದೇವಸ್ಥಾನದಲ್ಲಿ ಸಿಗುವ ಪ್ರಸಾದ ಅರವಣ ಪಾಯಸಕ್ಕೆ ವಿಶೇಷ ಮಹತ್ವ. ಆದರೆ ಇತ್ತೀಚೆಗೆ ಅರವಣ ಪಾಯಸದಲ್ಲಿ ಕೀಟನಾಶಕ ಬಳಸಿದ ಏಲಕ್ಕಿ ಬಳಸಿರುವುದು ಪತ್ತೆಯಾಗಿತ್ತು. ಹಾಗಾಗಿ ಆ ಸರದಿಯಲ್ಲಿ ತಯಾರಿಸಲ್ಪಟ್ಟ ಪ್ರಸಾದವನ್ನು ವಿತರಿಸದೇ ಇರುವಂತೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ದೇವಸ್ವಂ ಬೋರ್ಡ್ ಏಲಕ್ಕಿ ಹಾಕದೇ ಪಾಯಸ ತಯಾರಿಸಲು ತೀರ್ಮಾನ ತೆಗೆದುಕೊಂಡಿದೆ.
ಅಲ್ಲದೆ, ಪ್ರಸಾದ ತಯಾರಿಸುವುದಕ್ಕು ಮುನ್ನ ಎಲ್ಲ ಯಂತ್ರಗಳನ್ನು ಸ್ವಚ್ಛಗೊಳಿಸಲಾಗುತ್ತದೆ. ಬಳಿಕ ತಾತ್ಕಾಲಿಕವಾಗಿ ಏಲಕ್ಕಿ ಹಾಕದೇ ಅರವಣ ಪಾಯಸಂ ತಯಾರಿಸಲಾಗುವುದು. ಗುರುವಾರದಿಂದ ಈ ಏಲಕ್ಕಿ ರಹಿತ ಅರವಣ ಪಾಯಸಂ ವಿತರಣೆ ಆಗಲಿದೆ. ಸಾವಯವ ಏಲಕ್ಕಿ ಖರೀದಿ ಪ್ರಕ್ರಿಯ ಚಾಲ್ತಿಯಲ್ಲಿದೆ ಎಂದು ದೇವಸ್ವಂ ಬೋರ್ಡ್ ಅಧ್ಯಕ್ಷ ಕೆ.ಅನಂತಗೋಪನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ತಿರುವನಂತಪುರದ ಆಹಾರ ಸುರಕ್ಷತಾ ಪ್ರಾಧಿಕಾರದ ಲ್ಯಾಬ್ ಮತ್ತು ಕೊಚ್ಚಿಯಲ್ಲಿರುವ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಲ್ಯಾಬ್ಗಳಲ್ಲಿ ಅರವಣ ಪ್ರಸಾದವನ್ನು ಪರೀಕ್ಷೆಗೆ ಒಳಪಡಿಸಿದಾಗ ಅದರಲ್ಲಿ ಮಿತಿ ಮೀರಿದ ಕೀಟನಾಶಕದ ಅಂಶ ಪತ್ತೆಯಾಗಿತ್ತು. ಭಕ್ತರು ಅರವಣ ಪಾಯಸಂ ಗುಣಮಟ್ಟದ ಬಗ್ಗೆ ದೂರುಗಳನ್ನು ನೀಡಿದ್ದರಿಂದ ಕೇರಳ ಹೈಕೋರ್ಟ್ ನಿರ್ದೇಶನದ ಮೇರೆಗೆ ಈ ಪರೀಕ್ಷೆಗಳನ್ನು ನಡೆಸಲಾಗಿತ್ತು. ಎರಡೂ ಲ್ಯಾಬ್ಗಳ ಪರೀಕ್ಷಾ ಫಲಿತಾಂಶವನ್ನು ಕೋರ್ಟ್ಗೆ ಸಲ್ಲಿಸಲಾಗಿತ್ತು. ಅದರಂತೆ ಪರೀಕ್ಷೆಗೆ ಒಡ್ಡಲಾದ ಪ್ರಸಾದವನ್ನು ವಿತರಣೆ ಮಾಡಬಾರದು ಎಂದು ಹೈಕೋರ್ಟ್ ದೇವಸ್ವಂ ಬೋರ್ಡ್ಗೆ ಸೂಚಿಸಿತ್ತು.
In view of a High Court order to stop immediately the distribution of aravana at Sabarimala temple, the Travancore Devaswom Board (TDB) is all set to commence the distribution of cardamom-less Aravana for sale at Sabarimala from Thursday onwards.
11-10-25 10:05 am
Bangalore Correspondent
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 05:52 pm
Giridhar Shetty, Mangaluru
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
ನಿಷೇಧಿತ ಪಿಎಫ್ಐ ಸಂಘಟನೆ ಪರವಾಗಿ ಪೋಸ್ಟ್ ; ಮುಸ್ಲಿಂ...
10-10-25 04:18 pm
Bharath Kumdel Arrest, Abdul Rahiman Murder:...
10-10-25 02:02 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm