ಬ್ರೇಕಿಂಗ್ ನ್ಯೂಸ್
01-02-23 05:45 pm HK News Desk ದೇಶ - ವಿದೇಶ
ನವದೆಹಲಿ, ಫೆ.1: ಈ ವರ್ಷದ ವಿಧಾನಸಭೆ ಚುನಾವಣೆ ಸಿದ್ಧತೆಯಲ್ಲಿರುವ ಕರ್ನಾಟಕಕ್ಕೆ ಪ್ರಸಕ್ತ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ಮಂಡನೆಯಲ್ಲಿ ನೀರಾವರಿಗೆ ಭರ್ಜರಿ ಕೊಡುಗೆ ಘೋಷಿಸಿದೆ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಲೋಕಸಭೆಯಲ್ಲಿ ಮಂಡಿಸಿರುವ ಬಜೆಟ್ ನಲ್ಲಿ "ಕರ್ನಾಟಕದ ಮಹತ್ವದ ಭದ್ರಾ ಮೇಲ್ಡಂಡೆ ಯೋಜನೆಗೆ" 5,300 ಕೋಟಿ ರೂಪಾಯಿ ನೆರವು ನೀಡುವುದಾಗಿ ಘೋಷಿಸಿದೆ.

ಭದ್ರಾ ಮೇಲ್ದಂಡೆ ಯೋಜನೆಯಲ್ಲಿ 29.90 ಟಿಎಂಸಿ ಅಡಿ ನೀರಿನ ಬಳಕೆಯೊಂದಿಗೆ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳ 5,57,022 ಎಕರೆ ಭೂಪ್ರದೇಶಕ್ಕೆ ನೀರಾವರಿ ಕಲ್ಪಿಸಲು ಮತ್ತು ಇದೇ ಜಿಲ್ಲೆಗಳ 367 ಸಣ್ಣ ನೀರಾವರಿ ಕೆರೆಗಳನ್ನು ಅವುಗಳ ಸಾಮರ್ಥ್ಯದ ಶೇ.50ರಷ್ಟು ತುಂಬಿಸಲು ಉದ್ದೇಶಿಸಲಾಗಿತ್ತು.
ಈ ಯೋಜನೆಗೆ ಒಟ್ಟು 21,473.67 ಕೋಟಿ ರೂಪಾಯಿ ವೆಚ್ಚವಾಗಲಿದ್ದು, ಎರಡು ಹಂತದಲ್ಲಿ ಈ ಯೋಜನೆಯನ್ನು ಕೈಗೊಳ್ಳಲು ನಿರ್ಧರಿಸಲಾಗಿತ್ತು. ಇದೀಗ ಭದ್ರಾ ಮೇಲ್ಡಂಡೆ ಯೋಜನೆ ರಾಷ್ಟ್ರೀಯ ಯೋಜನೆಯಾಗಿ ಪರಿಗಣಿಸಲ್ಪಟ್ಟಿದ್ದರಿಂದ ಕೇಂದ್ರ ಸರ್ಕಾರ 5,300 ಕೋಟಿ ರೂ. ಅನುದಾನ ನೀಡುವುದಾಗಿ ಘೋಷಿಸಿದೆ.

ಕೇಂದ್ರದ ಅನುದಾನಕ್ಕೆ ಸಿಎಂ ಬೊಮ್ಮಾಯಿ ಸಂತಸ:
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ 5,300 ಕೋಟಿ ರೂಪಾಯಿ ಅನುದಾನ ನೀಡಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೃತಜ್ಞತೆ ಸಲ್ಲಿಸಿದ್ದಾರೆ. ಅನುದಾನದ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಈ ಸಾಲಿನ ಕೇಂದ್ರ ಬಜೆಟ್ ನಲ್ಲಿ ರಾಜ್ಯದ ಪ್ರಮುಖ ಯೋಜನೆಯಾದ ಭದ್ರಾ ಮೇಲ್ಡಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ ಘೋಷಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸಮಸ್ತ ಕರ್ನಾಟಕದ ಪರವಾಗಿ ಧನ್ಯವಾದಗಳು ಎಂದು ತಿಳಿಸಿದ್ದಾರೆ.
Union finance minister Nirmala Sitharaman announced that the centre will provide ₹5,300 crore assistance to the drought-prone regions of Karnataka for irrigation purposes.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm