ಬ್ರೇಕಿಂಗ್ ನ್ಯೂಸ್
02-02-23 12:45 pm HK News Desk ದೇಶ - ವಿದೇಶ
ಲಖನೌ, ಫೆ.2: ಕೇರಳ ಪತ್ರಕರ್ತ ಸಿದ್ದಿಕಿ ಕಪ್ಪನ್ ಜಾಮೀನಿನ ಮೇರೆಗೆ ಉತ್ತರ ಪ್ರದೇಶ ಜೈಲಿನಿಂದ ಹೊರಗೆ ಬಂದಿದ್ದಾರೆ. ನಿಷೇಧಿತ ಸಂಘಟನೆಯೊಂದಿಗೆ ನಂಟು ಮತ್ತು ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆಯಡಿ ಅವರನ್ನು 2020ರಲ್ಲಿ ಬಂಧಿಸಲಾಗಿತ್ತು. ಎರಡು ವರ್ಷಗಳ ನಂತರ ಇದೀಗ ಅವರು ಜೈಲಿನಿಂದ ಹೊರಗೆ ಬಂದಿದ್ದಾರೆ.
ಪಿಎಂಎಲ್ ಎ ಕಾಯ್ದೆಯಡಿ ಬಂಧಿತರಾಗಿದ್ದ ಸಿದ್ದಿಕಿ ಕಪ್ಪನ್ ತಲಾ 1 ಲಕ್ಷ ರೂ. ಗಳ ಎರಡು ಶ್ಯೂರಿಟಿಯನ್ನು ಲಖನೌ ನ್ಯಾಯಾಲಯಕ್ಕೆ ಸಲ್ಲಿಸಿದ ನಂತರ ಬುಧವಾರ ಜಾಮೀನು ಸಿಕ್ಕಿತ್ತು. ಇಂದು ಬೆಳಗ್ಗೆ 9-15ರ ಸುಮಾರಿನಲ್ಲಿ ಅವರು ಜೈಲಿನಿಂದ ಹೊರಗೆ ಬಂದಿರುವುದಾಗಿ ಲಖನೌ ಜಿಲ್ಲಾ ಕಾರಾಗೃಹದ ಅಧಿಕಾರಿ ರಾಜೇಂದ್ರ ಸಿಂಗ್ ತಿಳಿಸಿದ್ದಾರೆ.


ಜೈಲಿನಿಂದ ಬಿಡುಗಡೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದಿಕಿ,. 28 ತಿಂಗಳ ಬಳಿಕ ಜೈಲಿನಿಂದ ಹೊರಗೆ ಬಂದಿದ್ದೇನೆ. ನನ್ನನ್ನು ಬೆಂಬಲಿಸಿದ ಮಾಧ್ಯಮಗಳಿಗೆ ಧನ್ಯವಾದ ಸಲ್ಲಿಸುತ್ತೇನೆ. ನನ್ನ ವಿರುದ್ಧ ಸುಳ್ಳು ಆರೋಪ ಮಾಡಲಾಗಿತ್ತು. ಇದೀಗ ಸಂತೋಷವಾಗಿ ಜೈಲಿನಿಂದ ಹೊರಗೆ ಬಂದಿರುವುದಾಗಿ ಹೇಳಿದರು.

ಪತ್ರಕರ್ತ ಸಿದ್ದಿಕಿ ಕಪ್ಪನ್ ಉತ್ತರಪ್ರದೇಶದ ಹಾಥ್ರಸ್ ಪಟ್ಟಣದಲ್ಲಿ 2020 ಅಕ್ಟೋರ್ 5ರಂದು ದಲಿತ ಮಹಿಳೆ ಮೇಲೆ ಸಂಭವಿಸಿದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸುದ್ದಿಯನ್ನು ಕವರ್ ಮಾಡಲೆಂದು ಹೋಗಿದ್ದಾಗ ಅವರೊಂದಿಗೆ ಇತರ ಮೂವರು ಪತ್ರಕರ್ತರನ್ನು ಉತ್ತರಪ್ರದೇಶ ಪೊಲೀಸರು ಬಂಧಿಸಿದ್ದರು.
ಈ ನಾಲ್ವರು ಪಿಎಫ್ಐ ಸಂಘಟನೆಯ ಸಕ್ರಿಯ ಸದಸ್ಯರಾಗಿದ್ದು, ಕಾನೂನು ವ್ಯವಸ್ಥೆಯನ್ನು ಹಾಳು ಮಾಡುವ ಸಂಚು ರೂಪಿಸಿದ್ದರು ಎಂಬುದು ಪೊಲೀಸರ ಆರೋಪವಾಗಿತ್ತು. ಅದರಂತೆ ಐಟಿ, ಯುಎಪಿಎ ಮತ್ತು ಇಪಿಸಿ ಕಾಯ್ದೆಗಳ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಕಪ್ಪನ್ ವಿರುದ್ಧ ಪ್ರಕರಣಗಳು ದಾಖಲಾದವು. ನಂತರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಜಾರಿ ನಿರ್ದೇಶನಾಲಯ ಸಿದ್ದಿಕಿ ಕಪ್ಪನ್ ಮೇಲೆ ಪ್ರಕರಣ ದಾಖಲಿಸಿತ್ತು.
Lucknow, Uttar Pradesh | Kerala journalist Siddique Kappan who was booked by the UP government under the Unlawful Activities Prevention Act (UAPA) released from jail after he was granted bail. pic.twitter.com/iW02VwqprG
— ANI (@ANI) February 2, 2023
More than two years after he was arrested by the Uttar Pradesh Police while heading to the Hathras home of a young Dalit woman who died after an alleged gangrape, journalist Siddique Kappan was released from a Lucknow jail on Thursday morning. Lucknow Senior Jail Superintendent Ashish Tiwari confirmed to The Indian Express that Kappan was released at 8.30 am on Thursday. “All his paperwork was completed, and then he was released,” said Tiwari.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm