ಬ್ರೇಕಿಂಗ್ ನ್ಯೂಸ್
02-02-23 04:52 pm HK News Desk ದೇಶ - ವಿದೇಶ
ಕೇರಳ, ಫೆ.2: ಸಂಚರಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿ ಗರ್ಭಿಣಿ ಸೇರಿ ಇಬ್ಬರು ಸಜೀವ ದಹನವಾಗಿರುವ ಘಟನೆ ಕಣ್ಣೂರಿನಲ್ಲಿ ಗುರುವಾರ ನಡೆದಿದೆ.
ಕಾರಿನಲ್ಲಿದ್ದ 6 ಜನರ ಪೈಕಿ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡೋರ್ ಜಾಮ್ ಆಗಿ ಮುಂದೆ ಇದ್ದವರು ಹೊರಬರಲಾರದೇ ಸಾವನ್ನಪ್ಪಿದ್ದಾರೆ.
ಕಣ್ಣೂರು ಕುಟ್ಯಾಟೂರ್ ಕಾರರಂಬ್ ನಿವಾಸಿಗಳಾದ ಪ್ರಜಿತ್ ಮತ್ತು ಅವರ ಪತ್ನಿ ರಿಷಾ ಮೃತಪಟ್ಟವರು. ಗರ್ಭಿಣಿಯಾದ ಪತ್ನಿಯನ್ನು ಆಸ್ಪತ್ರೆಗೆ ಕೊಂಡೊಯ್ಯುವ ನಡುವೆ ಈ ಘಟನೆಯು ಕಣ್ಣೂರು ನಗರದ ಜಿಲ್ಲಾ ಆಸ್ಪತ್ರೆ ಬಳಿ ನಡೆದಿದೆ. ಕಾರಿನಲ್ಲಿ ಆರು ಮಂದಿ ಇದ್ದರು. ಕಾರು ಚಲಾಯಿಸುತ್ತಿದ್ದ ಗರ್ಭಿಣಿ ಹಾಗೂ ಆಕೆಯ ಪತಿ ಮುಂದಿನ ಸೀಟಿನಲ್ಲಿ ಹಾಗೂ ನಾಲ್ವರು ಹಿಂದಿನ ಸೀಟಿನಲ್ಲಿದ್ದರು.

ಬೆಂಕಿ ಕಾಣಿಸಿಕೊಂಡಾಗ ಹಿಂದಿನ ಬಾಗಿಲು ತೆಗೆದ ಬಳಿಕ ಮುಂದಿನ ಬಾಗಿಲಿನಿಂದ ಇಳಿಯುವ ಮೊದಲೇ ಬೆಂಕಿ ಆವರಿಸಿಕೊಂಡು ಸಿಲುಕಿದ್ದರು, ಇದರಿಂದ ಇಬ್ಬರಿಗೂ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ವಾಹನ ಚಲಾಯಿಸುತ್ತಿದ್ದ ಪತಿಯೊಂದಿಗೆ ಪತ್ನಿ ಮುಂಭಾಗದಲ್ಲಿದ್ದರು. ಹಿಂದೆ ಒಂದು ಮಗು ಸೇರಿ ನಾಲ್ವರು ಇದ್ದರು. ಮತ್ತೊಂದು ವಾಹನದಲ್ಲಿ ಬಂದವರಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಮಾಹಿತಿ ನೀಡಿದ್ದರು. ಆದರೆ ಡೋರ್ ಜಾಮ್ ಆಗಿದ್ದರಿಂದ ವಾಹನದಲ್ಲಿದ್ದವರು ಹೊರಬರಲು ಸಾಧ್ಯವಾಗಲಿಲ್ಲ.

ಬೆಂಕಿ ಹರಡುತ್ತಿದ್ದಂತೆ ಚಾಲಕ ಪ್ರಜಿತ್ ಹಿಂಬಾಗಿಲನ್ನು ತೆರೆದಿದ್ದಾನೆ. ಹಿಂಬದಿ ಸೀಟಿನಲ್ಲಿದ್ದ ಮಗು ಸೇರಿ ನಾಲ್ವರು ಪಾರಾಗಿದ್ದಾರೆ. ಆದರೆ ಮುಂಬಾಗಿಲು ತೆರೆಯಲಾಗಲಿಲ್ಲ. ಅಷ್ಟರೊಳಗೆ ಬೆಂಕಿ ಮತ್ತಷ್ಟು ವ್ಯಾಪಿಸಿದೆ. ಬದುಕುಳಿದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡಲೇ ಅಗ್ನಿಶಾಮಕದಳ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆ ನಡೆದ ಸ್ಥಳದಿಂದ ಸುಮಾರು ನೂರು ಮೀಟರ್ ದೂರದಲ್ಲಿ ಅಗ್ನಿಶಾಮಕ ಠಾಣೆ ಇದ್ದರೂ ಇಬ್ಬರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಅಷ್ಟು ವೇಗದಲ್ಲಿ ಕಾರಿಗೆ ಬೆಂಕಿ ಆವರಿಸಿಕೊಂಡಿತ್ತು.
In a tragic incident two people, including a pregnant woman, were burned to death when the car in which they were travelling suddenly caught fire in Kannur on Thursday morning. The deceased have been identified as Prajith (32) and his wife Reesha (26), both natives of Karam in Kuttiattoor.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm