ಬ್ರೇಕಿಂಗ್ ನ್ಯೂಸ್
05-02-23 02:16 pm HK News Desk ದೇಶ - ವಿದೇಶ
ನವದೆಹಲಿ, ಫೆ.5 : ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪಾಕಿಸ್ತಾನದ ಮಾಜಿ ಅಧ್ಯಕ್ಷ ಫರ್ವೇಜ್ ಮುಷರಫ್ (70) ದುಬೈನ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ನಿಧನರಾಗಿದ್ದಾರೆ.
ಅನಾರೋಗ್ಯದಲ್ಲಿದ್ದ ಮುಷರಫ್ ಅವರನ್ನು ಯುಎಇಯ ಅಮೆರಿಕನ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.

ಗಂಭೀರ ಅನಾರೋಗ್ಯದ ಸಮಸ್ಯೆಯಿಂದಾಗಿ ಅವರನ್ನು ಒಂದೆರಡು ವಾರಗಳ ಕಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಸ್ಥಳೀಯ ಮಾಧ್ಯಮದ ವರದಿಗಳು ತಿಳಿಸಿವೆ. 1999ರಲ್ಲಿ ಮಿಲಿಟರಿ ದಂಗೆಯ ನಂತರ ಮುಷರಫ್ ಪಾಕಿಸ್ತಾನದ ಹತ್ತನೇ ಅಧ್ಯಕ್ಷರಾಗಿದ್ದರು. 1998 ರಿಂದ 2001ರ ವರೆಗೆ 10ನೇ ಅಧ್ಯಕ್ಷರಾಗಿ ಮತ್ತು 2008ರ ವರೆಗೂ ಆಡಳಿತ ನಡೆಸಿದ್ದರು.
ಆನಂತರ, ಮುಷರಫ್ ದೇಶದಲ್ಲಿ ತುರ್ತು ಸ್ಥಿತಿ ಹೇರಿದ್ದರು. ಇದನ್ನು ಖಂಡಿಸಿ ಅವರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಲಾಗಿತ್ತು. 2014ರಲ್ಲಿ ಮುಷರಫ್ ವಿರುದ್ಧ ದೋಷಾರೋಪ ಸಲ್ಲಿಸಿದ್ದು ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ಅವರಿಗೆ 2019ರಲ್ಲಿಮರಣದಂಡನೆ ಶಿಕ್ಷೆ ವಿಧಿಸಿತ್ತು. ಈ ನಡುವೆ, 2016ರಲ್ಲಿ ಮುಷರಫ್ ಅನಾರೋಗ್ಯಕ್ಕೆ ತುತ್ತಾಗಿದ್ದು ಮತ್ತು ದೇಶದ ಜನ ದಂಗೆ ಎದ್ದಿದ್ದರಿಂದ ಕುಟುಂಬ ಸಹಿತ ದುಬೈಗೆ ಹಾರಿದ್ದರು. ಅಲ್ಲಿನ ಆಸ್ಪತ್ರೆಯಲ್ಲಿದ್ದ ಮುಷರಫ್ ಸುದೀರ್ಘ ಕಾಲದ ಅನಾರೋಗ್ಯ ಮತ್ತು ಬಹು ಅಂಗಾಂಗ ವೈಫಲ್ಯದಿಂದ ಸಾವು ಕಂಡಿದ್ದಾರೆ.
Former President of Pakistan, General Pervez Musharraf (Retd), died at a Dubai hospital after suffering from a prolonged illness, Pakistan's Geo News reported on Sunday. The former military ruler was undergoing treatment for an ailment at American Hospital Dubai, the report said.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm