ಬ್ರೇಕಿಂಗ್ ನ್ಯೂಸ್
08-02-23 01:13 pm HK News Desk ದೇಶ - ವಿದೇಶ
ನವದೆಹಲಿ, ಫೆ.8 : ಸತತ ಆರನೇ ಬಾರಿಗೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ತನ್ನ ರೆಪೋ ದರವನ್ನು ಏರಿಕೆ ಮಾಡಿದ್ದು ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ. ಬುಧವಾರ 25 ಅಂಶಗಳ ಏರಿಕೆಯೊಂದಿಗೆ ಶೇ. 6.5ಕ್ಕೆ ರೆಪೋ ದರ ಹೆಚ್ಚಿಸಿದ್ದು ಇದರಿಂದ ಸಾಮಾನ್ಯ ಗ್ರಾಹಕರಿಗೆ ಹೊಡೆತ ಬೀಳಲಿದೆ.
ರೆಪೋ ದರ ಏರಿಕೆಯಿಂದಾಗಿ ನೇರವಾಗಿ ಗೃಹ, ವಾಹನ ಸಾಲಗಳ ಬ್ಯಾಂಕ್ಗಳ ಇಎಂಐ ಮೊತ್ತ ಮತ್ತಷ್ಟು ದುಬಾರಿಯಾಗಲಿದ್ದು, ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳಲಿದೆ. ಆದರೆ, ನಿಶ್ಚಿತ ಠೇವಣಿಗಳಿಗೆ ರೆಪೋ ದರ ಏರಿಕೆಯಿಂದ ತುಸು ಪ್ರಯೋಜನ ಸಿಗಲಿದೆ.
ಆರ್ಬಿಐನ ಹಣಕಾಸು ನೀತಿ ಸಮಿತಿ (ಎಂಪಿಸಿ)ಯ ಮೂರು ದಿನಗಳ ಸಭೆಯ ಬಳಿಕ ರೆಪೋ ದರ ಏರಿಕೆ ನಿರ್ಧಾರವನ್ನು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಬುಧವಾರ ಪ್ರಕಟಿಸಿದ್ದಾರೆ. ಆರು ಸದಸ್ಯರ ಸಮಿತಿಯಲ್ಲಿ ನಾಲ್ವರು ಸದಸ್ಯರು ರೆಪೋ ದರ ಏರಿಕೆ ಪರವಾಗಿ ಮತ ಚಲಾಯಿಸಿದರು ಎಂದು ಶಕ್ತಿಕಾಂತ್ ದಾಸ್ ಮಾಹಿತಿ ನೀಡಿದ್ದಾರೆ.
ಸದ್ಯದ ಆರ್ಥಿಕ ಪರಿಸ್ಥಿತಿ ಮತ್ತು ಹಣದುಬ್ಬರಕ್ಕೆ ಕಡಿವಾಣ ಹಾಕುವ ದೃಷ್ಟಿಯಿಂದ ಹಣಕಾಸು ನೀತಿ ಸಮಿತಿ ರೆಪೋ ದರವನ್ನು ಹೆಚ್ಚಿಸಲು ನಿರ್ಧರಿಸಿದೆ. ಇದು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಶಕ್ತಿಕಾಂತ ದಾಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಳೆದ ವರ್ಷದ ಮೇ ತಿಂಗಳಿನಿಂದ ಈವರೆಗೂ ಒಟ್ಟು 250 ಮೂಲ ಅಂಶವನ್ನು ಆರ್ಬಿಐ ಏರಿಕೆ ಮಾಡಿದೆ. ಪ್ರಸಕ್ತ ಹಣಕಾಸು ವರ್ಷ 2022-2023ಕ್ಕೆ ಹಣದುಬ್ಬರವನ್ನು ಶೇ. 6.5 ಎಂದು ಅಂದಾಜಿಸಿದ್ದು, 2023-24ನೇ ಹಣಕಾಸು ವರ್ಷಕ್ಕೆ ಶೇ. 5.3 ಎಂದು ನಿರೀಕ್ಷೆ ಮಾಡಿದ್ದು ಜೊತೆಗೆ ಹಣದುಬ್ಬರ ಇಳಿತದ ನಿರೀಕ್ಷೆಯನ್ನೂ ಹೊಂದಿದೆ.
The Reserve Bank of India hiked its key repo rate by 25 basis points (bps) on Wednesday as expected, saying core inflation remained high. The central bank said that its policy stance remains focused on the withdrawal of accommodation. In its December monetary policy review, the central bank had raised the key benchmark interest rate by 35 basis points (bps). Since May last year, the Reserve Bank has increased the short-term lending rate by 250 basis points, including today's, to contain inflation.
10-10-25 07:06 pm
HK News Desk
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
10-10-25 10:37 pm
HK News Desk
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
10-10-25 06:52 pm
Mangalore Correspondent
ನಿಷೇಧಿತ ಪಿಎಫ್ಐ ಸಂಘಟನೆ ಪರವಾಗಿ ಪೋಸ್ಟ್ ; ಮುಸ್ಲಿಂ...
10-10-25 04:18 pm
Bharath Kumdel Arrest, Abdul Rahiman Murder:...
10-10-25 02:02 pm
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಗಿಯಾದ ದಕ್ಷಿಣ ಕನ್ನಡ...
09-10-25 08:22 pm
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm