ಬ್ರೇಕಿಂಗ್ ನ್ಯೂಸ್
09-02-23 07:01 pm HK News Desk ದೇಶ - ವಿದೇಶ
ನವದೆಹಲಿ, ಫೆ.9: ಪ್ರಧಾನಿ ನರೇಂದ್ರ ಮೋದಿ ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಭಾಷಣ ಮಾಡುತ್ತಿದ್ದಾಗ ಪ್ರತಿಪಕ್ಷ ಸದಸ್ಯರು ಮೋದಿ- ಅದಾನಿ ಭಾಯಿ ಭಾಯಿ ಎಂದು ಘೋಷಣೆ ಕೂಗಿದ್ದಾರೆ. ಪ್ರಧಾನಿ ಭಾಷಣದುದ್ದಕ್ಕೂ ಕಾಂಗ್ರೆಸ್, ಡಿಎಂಕೆ, ಟಿಎಂಸಿ ಸಂಸದರು ಸದನದ ಬಾವಿಗಿಳಿದು ಮೋದಿ – ಅದಾನಿ ಭಾಯಿ ಭಾಯಿ ಎಂದು ಘೋಷಣೆ ಕೂಗಿದ್ದಾರೆ.
ಇದೇ ವೇಳೆ, ಮೋದಿ ಪ್ರತಿಭಟನಾಕಾರರಿಗೆ ಪ್ರತಿಯಾಗಿ ಕವನವನ್ನು ಓದಿ ಟಾಂಗ್ ನೀಡಿದ್ದಾರೆ. ನಿಮ್ಮಲ್ಲಿ ಕೆಸರು ಇದೆ, ನನ್ನಲ್ಲಿ ಗುಲಾಬ್ ಇದೆ, ನೀವು ಎಷ್ಟೇ ಕೆಸರು ಎರಚಿದರೂ, ಅಲ್ಲೆಲ್ಲೆ ಕಮಲ ಅರಳುತ್ತದೆ ಎನ್ನುವ ಕವನವನ್ನು ಹೇಳಿದರು. ಆಮೂಲಕ ನಿಮ್ಮ ಕೆಸರೆರಚಾಟಕ್ಕೆ ಎದೆಗುಂದಲ್ಲ, ಇದರಿಂದ ಕಮಲ ಮತ್ತಷ್ಟು ಅರಳುತ್ತದೆ ಅನ್ನುವುದನ್ನು ಮೋದಿ ಸದನದಲ್ಲಿ ಹೇಳಿದ್ದಾರೆ.

ಇತ್ತೀಚೆಗೆ ಉದ್ಯಮಿ ಗೌತಮ್ ಅದಾನಿ ಬಗ್ಗೆ ಅಮೆರಿಕದ ಕಂಪನಿ ನೀಡಿರುವ ವರದಿ ಜಂಟಿ ಸದನ ಸಮತಿಯಿಂದ ತನಿಖೆಗೆ ಒತ್ತಾಯಿಸಿ ಪ್ರತಿಪಕ್ಷಗಳು ಕಳೆದ ಮೂರು ದಿನಗಳಿಂದಲೂ ಪ್ರತಿಭಟನೆ ನಡೆಸುತ್ತಿದ್ದವು. ಆದರೆ, ಜಂಟಿ ಸದನ ಸಮಿತಿಯ ತನಿಖೆಯಾಗಲೀ, ಸದನದಲ್ಲಿ ಆ ಕುರಿತು ಚರ್ಚೆ ನಡೆಸುವುದಕ್ಕಾಗಲೀ ಬಿಜೆಪಿ ಸರಕಾರ ಒಪ್ಪಿಗೆ ನೀಡಿರಲಿಲ್ಲ.

ಅದಾನಿ ಉದ್ಯಮದ ತನಿಖೆಗೆ ಸುಪ್ರೀಂಗೆ ಅರ್ಜಿ
ಇದೇ ವೇಳೆ, ಅದಾನಿ ಉದ್ಯಮದ ಕುರಿತು ಹಿಂಡನ್ ಬರ್ಗ್ ನೀಡಿರುವ ವರದಿ ಕುರಿತು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಬೇಕೆಂದು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಕೆಯಾಗಿದೆ. ವಕೀಲ ವಿಶಾಲ್ ತಿವಾರಿ ಸಲ್ಲಿಸಿರುವ ಅರ್ಜಿಯನ್ನು ತನಿಖೆ ಮಾಡಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದ್ದು, ಶುಕ್ರವಾರ ವಿಚಾರಣೆ ನಡೆಸಲಿದೆ. ನ್ಯಾ.ಡಿವೈ ಚಂದ್ರಚೂಡ್ ನೇತೃತ್ವದ ಪೀಠಕ್ಕೆ ಸಾರ್ವಜನಿಕ ಹಿತಾಸಕ್ತಿಯ ಈ ಅರ್ಜಿ ಸಲ್ಲಿಕೆಯಾಗಿತ್ತು. ಇದಲ್ಲದೆ, ಕಾರ್ಪೊರೇಟ್ ಸಂಸ್ಥೆಗಳಿಗೆ ನೀಡಲಾಗುವ 500 ಕೋಟಿಗೂ ಹೆಚ್ಚಿನ ಮೊತ್ತದ ಸಾಲದ ಮಂಜೂರಾತಿ ನೀತಿಯನ್ನು ಮೇಲ್ವಿಚಾರಣೆ ಮಾಡಲು ಪ್ರತ್ಯೇಕ ಸಮಿತಿಯನ್ನು ರಚಿಸಬೇಕೆಂದೂ ಅರ್ಜಿಯಲ್ಲಿ ವಿಶಾಲ್ ಕೋರಿದ್ದಾರೆ.
As Prime Minister Narendra Modi began addressing the Rajya Sabha, the Opposition began raising slogans of ‘Modi-Adani bhai bhai’. However, the PM remained undeterred and took a jibe at the protesting lawmakers with poetic lines.“Keechad uske paas tha, mere paas gulaal. Jo jiske paas tha, diya usne woh uchaal (They had mud, I had colours. Whosoever had whatever they flung in the air)," PM Modi said, adding “jitna keechad uchaaloge, kamal utna hi khilega" (the more mud-slinging, the more number of lotus will bloom).
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm