ಬ್ರೇಕಿಂಗ್ ನ್ಯೂಸ್
12-02-23 02:43 pm HK News Desk ದೇಶ - ವಿದೇಶ
ನವದೆಹಲಿ, ಫೆ.12: ಮಹತ್ವದ ಬೆಳವಣಿಗೆಯಲ್ಲಿ ಕಳೆದ ತಿಂಗಳು ನಿವೃತ್ತರಾಗಿದ್ದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರಾಗಿ ಕೇಂದ್ರ ಸರಕಾರ ನೇಮಕಗೊಳಿಸಿದೆ.
ಎಸ್.ಅಬ್ದುಲ್ ನಜೀರ್ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದ್ರೆ ಬಳಿಯ ಬೆಳುವಾಯಿ ನಿವಾಸಿ. ಐತಿಹಾಸಿಕ ಅಯೋಧ್ಯೆ ರಾಮಜನ್ಮ ಭೂಮಿ ವಿವಾದ ಕುರಿತು ತೀರ್ಪು ನೀಡಿದ ಸುಪ್ರೀಂ ಕೋರ್ಟ್ ಪೀಠದ ಸದಸ್ಯರಾಗಿದ್ದ ಅಬ್ದುಲ್ ನಜೀರ್ ಜನವರಿ 14ರಂದು ತಮ್ಮ ಹುದ್ದೆಯಿಂದ ನಿವೃತ್ತರಾಗಿದ್ದರು.
ಅಬ್ದುಲ್ ನಜೀರ್ ಅವರು 1958ರ ಜನವರಿ 5ರಂದು ಜನಿಸಿದ್ದು ಮಂಗಳೂರಿನಲ್ಲಿ ಕಾನೂನು ಪದವಿ ಗಳಿಸಿ ಫೆಬ್ರವರಿ 18, 1983 ರಂದು ವಕೀಲರಾಗಿ ವೃತ್ತಿ ಆರಂಭಿಸಿದ್ದರು. ಬಳಿಕ ಕರ್ನಾಟಕ ಹೈಕೋರ್ಟ್ನಲ್ಲಿ ಪ್ರಾಕ್ಟೀಸ್ ಮಾಡಿದ್ದ ಅವರು 2003ರ ಮೇ 12 ರಂದು ಹೈಕೋರ್ಟ್ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು.
ಇತ್ತೀಚೆಗೆ ಅವರನ್ನು ಬೀಳ್ಕೊಡುವ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್, ನಜೀರ್ ಅವರ ಸರಳತೆಯ ಬಗ್ಗೆ ಪ್ರಸ್ತಾಪಿಸಿ ಕೊಂಡಾಡಿದ್ದರು. ಜಸ್ಟಿಸ್ ನಜೀರ್ 2019ರ ವರೆಗೆ ಪಾಸ್ಪೋರ್ಟ್ ಸಹ ಹೊಂದಿರಲಿಲ್ಲ ಮತ್ತು ಕೆಲವು ವಾರಗಳ ಹಿಂದೆಯಷ್ಟೇ ಮೊದಲ ಬಾರಿಗೆ ವಿದೇಶ ಪ್ರಯಾಣ ಮಾಡಿದ್ದರು. ಇದು ಅವರ ಸರಳ ಜೀವನಕ್ಕೆ ಸಾಕ್ಷಿ ಎಂದು ಹೇಳಿದ್ದರು.
ಆಂಧ್ರಪ್ರದೇಶ ರಾಜ್ಯಪಾಲ ಬಿಸ್ವ ಭೂಷಣ ಹರಿಚಂದನ್ ಸೇರಿದಂತೆ 14 ಮಂದಿ ರಾಜ್ಯಪಾಲರನ್ನು ವರ್ಗಾವಣೆ ಮಾಡಲಾಗಿದೆ. ಬಿಸ್ವ ಭೂಷಣ್ ಅವರನ್ನು ಛತ್ತೀಸ್ಗಢದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಛತ್ತೀಸ್ಗಢದ ರಾಜ್ಯಪಾಲರಾಗಿದ್ದ ಅನುಸೂಯ ಅವರನ್ನು ಮಣಿಪುರ ರಾಜ್ಯಪಾಲರನ್ನಾಗಿ ಮಾಡಲಾಗಿದೆ.
President Droupadi Murmu today notified the appointment of the Supreme Court's retired judge Justice S Abdul Nazeer as the third Governor of Andhra Pradesh. Syed Abdul Nazeer is a former judge of the Supreme Court native of Mangalore and retired on January 4 this year.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm