ಬ್ರೇಕಿಂಗ್ ನ್ಯೂಸ್
12-02-23 02:43 pm HK News Desk ದೇಶ - ವಿದೇಶ
ನವದೆಹಲಿ, ಫೆ.12: ಮಹತ್ವದ ಬೆಳವಣಿಗೆಯಲ್ಲಿ ಕಳೆದ ತಿಂಗಳು ನಿವೃತ್ತರಾಗಿದ್ದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರಾಗಿ ಕೇಂದ್ರ ಸರಕಾರ ನೇಮಕಗೊಳಿಸಿದೆ.
ಎಸ್.ಅಬ್ದುಲ್ ನಜೀರ್ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದ್ರೆ ಬಳಿಯ ಬೆಳುವಾಯಿ ನಿವಾಸಿ. ಐತಿಹಾಸಿಕ ಅಯೋಧ್ಯೆ ರಾಮಜನ್ಮ ಭೂಮಿ ವಿವಾದ ಕುರಿತು ತೀರ್ಪು ನೀಡಿದ ಸುಪ್ರೀಂ ಕೋರ್ಟ್ ಪೀಠದ ಸದಸ್ಯರಾಗಿದ್ದ ಅಬ್ದುಲ್ ನಜೀರ್ ಜನವರಿ 14ರಂದು ತಮ್ಮ ಹುದ್ದೆಯಿಂದ ನಿವೃತ್ತರಾಗಿದ್ದರು.
ಅಬ್ದುಲ್ ನಜೀರ್ ಅವರು 1958ರ ಜನವರಿ 5ರಂದು ಜನಿಸಿದ್ದು ಮಂಗಳೂರಿನಲ್ಲಿ ಕಾನೂನು ಪದವಿ ಗಳಿಸಿ ಫೆಬ್ರವರಿ 18, 1983 ರಂದು ವಕೀಲರಾಗಿ ವೃತ್ತಿ ಆರಂಭಿಸಿದ್ದರು. ಬಳಿಕ ಕರ್ನಾಟಕ ಹೈಕೋರ್ಟ್ನಲ್ಲಿ ಪ್ರಾಕ್ಟೀಸ್ ಮಾಡಿದ್ದ ಅವರು 2003ರ ಮೇ 12 ರಂದು ಹೈಕೋರ್ಟ್ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು.
ಇತ್ತೀಚೆಗೆ ಅವರನ್ನು ಬೀಳ್ಕೊಡುವ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್, ನಜೀರ್ ಅವರ ಸರಳತೆಯ ಬಗ್ಗೆ ಪ್ರಸ್ತಾಪಿಸಿ ಕೊಂಡಾಡಿದ್ದರು. ಜಸ್ಟಿಸ್ ನಜೀರ್ 2019ರ ವರೆಗೆ ಪಾಸ್ಪೋರ್ಟ್ ಸಹ ಹೊಂದಿರಲಿಲ್ಲ ಮತ್ತು ಕೆಲವು ವಾರಗಳ ಹಿಂದೆಯಷ್ಟೇ ಮೊದಲ ಬಾರಿಗೆ ವಿದೇಶ ಪ್ರಯಾಣ ಮಾಡಿದ್ದರು. ಇದು ಅವರ ಸರಳ ಜೀವನಕ್ಕೆ ಸಾಕ್ಷಿ ಎಂದು ಹೇಳಿದ್ದರು.
ಆಂಧ್ರಪ್ರದೇಶ ರಾಜ್ಯಪಾಲ ಬಿಸ್ವ ಭೂಷಣ ಹರಿಚಂದನ್ ಸೇರಿದಂತೆ 14 ಮಂದಿ ರಾಜ್ಯಪಾಲರನ್ನು ವರ್ಗಾವಣೆ ಮಾಡಲಾಗಿದೆ. ಬಿಸ್ವ ಭೂಷಣ್ ಅವರನ್ನು ಛತ್ತೀಸ್ಗಢದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಛತ್ತೀಸ್ಗಢದ ರಾಜ್ಯಪಾಲರಾಗಿದ್ದ ಅನುಸೂಯ ಅವರನ್ನು ಮಣಿಪುರ ರಾಜ್ಯಪಾಲರನ್ನಾಗಿ ಮಾಡಲಾಗಿದೆ.
President Droupadi Murmu today notified the appointment of the Supreme Court's retired judge Justice S Abdul Nazeer as the third Governor of Andhra Pradesh. Syed Abdul Nazeer is a former judge of the Supreme Court native of Mangalore and retired on January 4 this year.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm