ಬ್ರೇಕಿಂಗ್ ನ್ಯೂಸ್
14-02-23 12:15 pm HK News Desk ದೇಶ - ವಿದೇಶ
ಹೊಸದಿಲ್ಲಿ, ಫೆ.14: ಇಲ್ಲಿಗೆ ಸರಿಯಾಗಿ ನಾಲ್ಕು ವರ್ಷಗಳ ಹಿಂದೆ, ಇಡೀ ಜಗತ್ತು ಪ್ರೇಮಿಗಳ ದಿನವನ್ನು ಆಚರಿಸುವ ಸಂದರ್ಭದಲ್ಲೇ ಜಮ್ಮು ಕಾಶ್ಮೀರದ ಫುಲ್ವಾಮಾದಲ್ಲಿ ರಕ್ತದ ಕೋಡಿ ಹರಿದಿತ್ತು. ಆ ದಿನ, ಜಮ್ಮು- ಶ್ರೀನಗರ ನಡುವಿನ 44ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಕೇಂದ್ರೀಯ ಮೀಸಲು ಪಡೆಯ ಯೋಧರು ತೆರಳುತ್ತಿದ್ದ ಬಸ್ ಗಳ ಮೇಲೆ ಉಗ್ರರು ಆತ್ಮಹತ್ಯಾ ಬಾಂಬಾ ದಾಳಿ ನಡೆಸಿದ್ದರು. ಪುಲ್ವಾಮಾ ಜಿಲ್ಲೆಯ ಲೇತಾಪೊರಾ ಎಂಬಲ್ಲಿ ನಡೆದಿದ್ದ ಈ ದಾಳಿಯಲ್ಲಿ ಸುಮಾರು 40 ಸಿಆರ್ ಪಿಎಫ್ ಯೋಧರು ಮೃತಪಟ್ಟಿದ್ದರು. ಇದು 1989ರ ನಂತರ ಜಮ್ಮು ಕಾಶ್ಮೀರದಲ್ಲಿ ನಡೆದ ಅತಿ ಭೀಕರ ದಾಳಿ ಎಂದು ಪರಿಗಣಿಸಲ್ಪಟ್ಟಿದೆ.
ಪಾಕಿಸ್ತಾನ ಮೂಲದ ಜೈಶ್ ಎ ಮೊಹಮ್ಮದ್ ಎಂಬ ಸಂಘಟನೆ ಈ ದಾಳಿಯ ಹೊಣೆ ಹೊತ್ತಿತ್ತು. ವರ್ಷದ ಹಿಂದೆ ತನ್ನಲ್ಲಿ ಸೇರ್ಪಡೆಗೊಂಡಿದ್ದ ಕಾಶ್ಮೀರ ಕಣಿವೆಯ ಕಾಕಪೋರಾ ಎಂಬಲ್ಲಿ ನಡೆಯುತ್ತಿದ್ದ ಆದಿಲ್ ಅಹಮದ್ ಎಂಬಾತ (22) ಆತ್ಮಹತ್ಯಾ ದಾಳಿಯನ್ನು ನಡೆಸಿದ್ದಾನೆ ಎಂದು ಆ ಸಂಘಟನೆ ಆತನದ್ದೊಂದು ಹಳೆಯ ವಿಡಿಯೋವನ್ನು ರಿಲೀಸ್ ಮಾಡಿತ್ತು. ಆದರೆ, ಪಾಕಿಸ್ತಾನ ಮಾತ್ರ ತನ್ನ ಹಳೆಯ ಚಾಳಿಯನ್ನು ಮುಂದುವರಿಸಿ ಈ ಕೃತ್ಯಕ್ಕೂ ತನಗೂ ಯಾವುದೇ ಸಂಬಂಧವಿಲ್ಲ ಎಂದಿತು.
ಇದು ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಉಗ್ರ ನಿಗ್ರಹ ಪಣಕ್ಕೆ ಸವಾಲೊಡ್ಡುವಂಥ ಘಟನೆಯಾಗಿತ್ತು. ಇದನ್ನು ಮೋದಿ ಸರ್ಕಾರ ಗಂಭೀರವಾಗಿ ಪರಿಗಣಿಸಿತು. ಗುಪ್ತಚರ ಮಾಹಿತಿಯನ್ನು ಬಳಸಿಕೊಂಡು ಕಾಶ್ಮೀರದಲ್ಲೇ ಅಡಗಿದ್ದ ಪುಲ್ವಾಮಾ ವಿಧ್ವಂಸಕೋರರ ಬೇಟೆಗೆ ಸಿದ್ಧವಾಯಿತು. ಉಗ್ರರ ಅಡಗುದಾಣಗಳನ್ನು ನಿಖರವಾಗಿ ಗುರುತಿಸಿ, ಸಿಆರ್ ಪಿಎಫ್ ಹಾಗೂ 55 ರಾಷ್ಟ್ರೀಯ ರೈಫಲ್ಸ್ ನ ಜಂಟಿ ಪಡೆಯೊಂದನ್ನು ರಚಿಸಿ, ಫೆ. 18ರಂದು ಪುಲ್ವಾಮಾ ವಿಧ್ವಂಸಕೋರರ ಬೇಟೆಗೆ ಕಳುಹಿಸಿತು. ಫುಲ್ವಾಮಾದಲ್ಲಿ ಇಬ್ಬರು ಯೋಧರು ಮೃತಪಟ್ಟರು.
ಫೆ. 26ರಂದು, ಭಾರತೀಯ ವಾಯುಪಡೆಗೆ ಸೇರಿದ 12 ಮಿರಾಜ್ 2000 ಮಾದರಿಯ ಯುದ್ಧ ವಿಮಾನಗಳು, ಭಾರತ - ಪಾಕಿಸ್ತಾನ ನಡುವಿನ ಗಡಿ ರೇಖೆಯನ್ನು ದಾಟಿ (ಎಲ್ಒಸಿ), ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಬಾಲಾಕೋಟ್ ನಲ್ಲಿದ್ದ ಜೈಶ್-ಎ- ಮೊಹಮ್ಮದ್ ಸಂಘಟನೆಯ ಉಗ್ರ ತರಬೇತಿ ಕೇಂದ್ರದ ಮೇಲೆ ವೈಮಾನಿಕ ದಾಳಿ ನಡೆಸಿತು. ಇದರಲ್ಲಿ 300ರಿಂದ 350 ಉಗ್ರರು ಹತರಾದರು.
ಇದಕ್ಕೆ ಪ್ರತೀಕಾರ ಎಂಬಂತೆ, ಫೆ. 27ರಂದು ಪಾಕಿಸ್ತಾನದ ವಾಯುಪಡೆಯ ವಿಮಾನಗಳು ಭಾರತದ ಮೇಲೆ ದಾಳಿ ನಡೆಸಲು ಎಲ್ಒಸಿ ದಾಟಿ ಬಂದವು. ಅವುಗಳನ್ನು ಹಿಮ್ಮೆಟ್ಟಿಸಲು ಭಾರತದ ಮಿಗ್ - 21 ವಿಮಾನಗಳಲ್ಲಿ ಭಾರತೀಯ ಯೋಧರು ಆಗಸಕ್ಕೆ ನೆಗೆದಿದ್ದರು. ಅವುಗಳಲ್ಲೊಂದನ್ನು ಪಾಕಿಸ್ತಾನ ಸೇನೆಯು ಹೊಡೆದುರುಳಿಸಿತು. ಅದರಲ್ಲಿದ್ದ ವಿಂಗ್ ಕಮಾಂಡರ್ ನನ್ನು ಸೆರೆ ಹಿಡಿಯಿತು. ಆದರೆ, ಮೋದಿ ಸರ್ಕಾರದ ಪ್ರಯತ್ನದಿಂದಾಗಿ ಪಾಕಿಸ್ತಾನದ ಮೇಲೆ ಅಂತಾರಾಷ್ಟ್ರೀಯ ಒತ್ತಡ ಹೆಚ್ಚಾಯಿತು. ಇದರಿಂದಾಗಿ, ಪಾಕಿಸ್ತಾನ ಸರ್ಕಾರ ಆತನನ್ನು ಬಿಡುಗಡೆ ಮಾಡಿತು.
ಫುಲ್ವಾಮಾ ದಾಳಿಯ ಷಡ್ಯಂತ್ರ ರೂಪಿಸಿದವರನ್ನು ಹಾಗೂ ಅದಕ್ಕೆ ಸಹಕಾರ ನೀಡಿದವರನ್ನು ಭಾರತ ಹೆಡೆಮುರಿ ಕಟ್ಟುವಲ್ಲಿ ಸಫಲವಾಯಿತು. ಬಾಲಾಕೋಟ್ ನಲ್ಲಿ ದಾಳಿ ನಡೆಸಿತು. ಆದರೆ, ಸ್ಫೋಟಕದ ಮೂಲ ಮಾತ್ರ ಪತ್ತೆಯಾಗಲಿಲ್ಲ. 2020ರ ಆಗಸ್ಟ್ ನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತನ್ನ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತು. 2021ರ ಆಗಸ್ಟ್ ನಲ್ಲಿ ಫುಲ್ವಾಮಾ ದಾಳಿಗೆ ಸಂಬಂಧಿಸಿದ ಇನ್ನೂ ಏಳು ಉಗ್ರರನ್ನು ಭದ್ರತಾ ಪಡೆಗಳು ಕಾಶ್ಮೀರದಲ್ಲಿ ಹೊಸಕಿಹಾಕಿದವು. ಇನ್ನೂ ಏಳು ಮಂದಿಯನ್ನು ಬಂಧಿಸಲಾಯಿತು.
Leaving the video message of ‘Don’t fall in love', a brainwashed youth rammed up an explosive laden vehicle into a CRPF convoy killing 40 CRPF personnel in Jammu and Kashmir on Valentine's Day on February 14, 2019.
10-10-25 07:06 pm
HK News Desk
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
10-10-25 10:37 pm
HK News Desk
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
10-10-25 06:52 pm
Mangalore Correspondent
ನಿಷೇಧಿತ ಪಿಎಫ್ಐ ಸಂಘಟನೆ ಪರವಾಗಿ ಪೋಸ್ಟ್ ; ಮುಸ್ಲಿಂ...
10-10-25 04:18 pm
Bharath Kumdel Arrest, Abdul Rahiman Murder:...
10-10-25 02:02 pm
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಗಿಯಾದ ದಕ್ಷಿಣ ಕನ್ನಡ...
09-10-25 08:22 pm
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm