ಬ್ರೇಕಿಂಗ್ ನ್ಯೂಸ್
14-02-23 04:41 pm HK News Desk ದೇಶ - ವಿದೇಶ
ಲಿಸ್ಬೆನ್, ಫೆ.14: ಪೋರ್ಚುಗಲ್ನಲ್ಲಿ 1950 ರಿಂದ 2022ರ ವರೆಗೆ ಕ್ಯಾಥೋಲಿಕ್ ಚರ್ಚ್ ಪಾದ್ರಿಗಳು ಸುಮಾರು 5,000 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಅಥವಾ ಅತ್ಯಾಚಾರ ನಡೆಸಿದ್ದಾರೆ ಎನ್ನುವ ವರದಿಯನ್ನು ತನಿಖಾ ಆಯೋಗ ಮುಂದಿಟ್ಟಿದೆ.
ಪಾದ್ರಿಗಳ ಲೈಂಗಿಕ ಕಿರುಕುಳದ ಬಗ್ಗೆ ಪೋರ್ಚುಗೀಸ್ ಕ್ಯಾಥೋಲಿಕ್ ಚರ್ಚ್ ಒಕ್ಕೂಟ ನೇಮಿಸಿದ್ದ ಸ್ವತಂತ್ರ ತನಿಖಾ ಆಯೋಗ ಲಿಸ್ಬೆನ್ನಲ್ಲಿ ಪತ್ರಿಕಾಗೋಷ್ಟಿ ನಡೆಸಿ ಈ ಮಾಹಿತಿ ನೀಡಿದೆ. ಆಯೋಗವು ಕಳೆದ ಒಂದು ವರ್ಷದಲ್ಲಿ 500 ಸಂತ್ರಸ್ತೆಯರನ್ನು ಪತ್ತೆ ಹಚ್ಚಿ ಅವರ ಹೇಳಿಕೆಗಳನ್ನು ದಾಖಲಿಸಿದೆ. ಆಯೋಗದ ತನಿಖೆ ಪ್ರಕಾರ ಕ್ಯಾಥೋಲಿಕ್ ಚರ್ಚ್ ಪಾದ್ರಿಗಳು ಪೋರ್ಚುಗಲ್ನಲ್ಲಿ 1950 ರಿಂದ ಇಲ್ಲಿಯವರೆಗೆ ಸುಮಾರು 5000 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ಕಿರುಕುಳ ನಡೆಸಿರುವುದು ಬೆಳಕಿಗೆ ಬಂದಿದೆ. ಈ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಕ್ಯಾಥೋಲಿಕ್ ಚರ್ಚ್ಗಳ ಪ್ರಾಬಲ್ಯ ಹೊಂದಿರುವ ಪೋರ್ಚುಗಲ್ನಲ್ಲಿ ಸಂತ್ರಸ್ತರು ಆರಂಭದಲ್ಲಿ ಹೇಳಿಕೆ ದಾಖಲಿಸಲು ಮುಂದೆ ಬಂದರಲಿಲ್ಲ. ಬಹುತೇಕ ಪ್ರಕರಣಗಳು ಪೊಲೀಸ್ ಠಾಣೆಯ ಮೆಟ್ಟಿಲೇರಿಲ್ಲ. ಇದು ಭಯಾನಕ ಸಂಗತಿ ಎಂದು ಆಯೋಗ ಹೇಳಿದೆ.
ಮಕ್ಕಳ ಮಾನಸಿಕ ತಜ್ಞರೂ ಆಗಿರುವ ಸ್ವತಂತ್ರ ತನಿಖಾ ಆಯೋಗದ ಅಧ್ಯಕ್ಷ ಪೆಡ್ರೊ ಸ್ಟ್ರೆಚ್ಟ್ ಅವರು, ಕ್ಯಾಥೋಲಿಕ್ ಚರ್ಚ್ಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ಶೋಷಣೆ ಕೇವಲ ಪೋರ್ಚುಗಲ್ಗೆ ಸಿಮೀತವಾಗಿಲ್ಲ. ಇದು ಕ್ಯಾಥೋಲಿಕ್ ಚರ್ಚ್ಗಳ ಪ್ರಭಾವ ಜಾಸ್ತಿ ಇರುವ ಜಗತ್ತಿನ ಇನ್ನೂ ಅನೇಕ ರಾಷ್ಟ್ರಗಳಲ್ಲಿ ಹೆಚ್ಚಾಗಿದೆ ಎಂಬುದು ತನಿಖೆಯಲ್ಲಿ ಗೊತ್ತಾಗಿದೆ ಎಂದು ತಿಳಿಸಿದ್ದಾರೆ.
ಸ್ವತಂತ್ರ ತನಿಖಾ ಆಯೋಗ ನೀಡಿರುವ ಈ ವರದಿ ಜಗತ್ತಿನ ಎಲ್ಲ ಕ್ಯಾಥೋಲಿಕ್ ಚರ್ಚ್ಗಳ ಮುಖ್ಯಸ್ಥರಾಗಿರುವ ಪೋಪ್ ಫ್ರಾನ್ಸಿಸ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ ಎಂದು ಎಎಫ್ಪಿ ಸುದ್ದಿಸಂಸ್ಥೆ ವರದಿ ಮಾಡಿದೆ.
Catholic clergy in Portugal have abused nearly 5,000 children since 1950, an independent commission said on Monday after hearing hundreds of victims' accounts. Thousands of reports of paedophilia within the Catholic Church have surfaced around the world and Pope Francis is under pressure to tackle the scandal. The Portuguese inquiry, commissioned by the Church in the staunchly Catholic country, published its findings after hearing from more than 500 victims last year.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm