ಬ್ರೇಕಿಂಗ್ ನ್ಯೂಸ್
21-10-20 02:09 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೂಬರ್ 21: ಜಮ್ಮು ಕಾಶ್ಮೀರದಲ್ಲಿ ಶಾಂತಿ ಮರು ಸ್ಥಾಪನೆ ಮಾಡುತ್ತಿರುವ ಸೇನಾ ಪಡೆಗಳ ಮೇಲೆ ಪಾಕಿಸ್ಥಾನ, ಡ್ರೋಣ್ ಮೂಲಕ ಬಾಂಬ್ ದಾಳಿ ನಡೆಸಲು ಸಂಚು ರೂಪಿಸಿರುವ ಮಾಹಿತಿ ಹೊರಬಿದ್ದಿದೆ.
ಸಿರಿಯಾದಲ್ಲಿ ಭದ್ರತಾ ಪಡೆಗಳ ಮೇಲೆ ಐಸಿಸ್ ಭಯೋತ್ಪಾದಕರು ಡ್ರೋಣ್ ದಾಳಿ ನಡೆಸುತ್ತಿದ್ದಾರೆ. ಅದೇ ರೀತಿಯಲ್ಲಿ ಗಡಿಭಾಗದಲ್ಲಿ ಬೀಡು ಬಿಟ್ಟಿರುವ ಭಾರತದ ಭದ್ರತಾ ಪಡೆಗಳ ಮೇಲೆ ಡ್ರೋಣ್ ಮೂಲಕ ಬಾಂಬ್ ದಾಳಿ ನಡೆಸಲು ಪಾಕಿಸ್ಥಾನದ ಐಎಸ್ಐ ಮತ್ತು ಉಗ್ರರು ಯೋಜನೆ ಹಾಕಿದ್ದಾರೆ. ಕಡಿಮೆ ಬೆಲೆಯ ಡ್ರೋಣ್ ಗಳನ್ನು ಬಳಸಿ, ಈ ದಾಳಿ ನಡೆಸಲು ಪಾಕಿಸ್ಥಾನದ ಐಎಸ್ಐ ಸಂಚು ರೂಪಿಸಿದೆ. ಪಾಕಿಸ್ಥಾನದ ಪಂಜಾಬ್ ಪ್ರಾಂತ್ಯದಲ್ಲಿ ಕಳೆದ ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ಜೈಷ್ ಮತ್ತು ಲಷ್ಕರ್ ಉಗ್ರವಾದಿ ಗುಂಪುಗಳ ಪ್ರಮುಖರ ಜೊತೆ ಐಎಸ್ಐ ಈ ಬಗ್ಗೆ ಚರ್ಚೆ ನಡೆಸಿದೆ ಎನ್ನುವ ಮಾಹಿತಿಯನ್ನು ಗುಪ್ತಚರ ಸಂಸ್ಥೆಗಳು ವರದಿ ಮಾಡಿವೆ. ಸಭೆಯಲ್ಲಿ ಮೂರು ಕಿಮೀ ವ್ಯಾಪ್ತಿಯ ಮತ್ತು 5 ಕೆಜಿ ಸ್ಫೋಟಕಗಳನ್ನು ಹೊತ್ತೊಯ್ಯಬಲ್ಲ ಡ್ರೋಣ್ ಗಳನ್ನು ಬಳಸಲು ಯೋಜನೆ ಹಾಕಲಾಗಿದೆ ಎನ್ನುವ ವಿಚಾರ ಹೊರಬಿದ್ದಿದೆ.

ಪಾಕಿಸ್ಥಾನದ ಕುತಂತ್ರಕ್ಕೆ ಭಾರತದ ಸೇನಾ ಪಡೆಯೂ ತಂತ್ರ ಹೂಡಿದ್ದು, ಯಾವುದೇ ಡ್ರೋಣ್ ಕಂಡುಬಂದರೂ ಹೊಡೆದುರುಳಿಸಲು ಸನ್ನದ್ಧವಾಗಿದೆ. ಗಡಿಭಾಗದಲ್ಲಿ ರಾಡಾರ್ ವ್ಯವಸ್ಥೆಯನ್ನು ಬಲಪಡಿಸಿದ್ದು, ಡ್ರೋಣ್ ಪತ್ತೆಗೆ ಸ್ಥಳೀಯ ಭದ್ರತಾ ಪಡೆಗಳಿಗೆ ತರಬೇತಿಯನ್ನೂ ನೀಡಲಾಗುತ್ತಿದೆ. ಗಡಿಭಾಗದಲ್ಲಿ ಶಸ್ತ್ರಾಸ್ತ್ರ, ನಕಲಿ ಕರೆನ್ಸಿ, ಮಾದಕ ವಸ್ತು ಸಾಗಿಸಲು ಪಾಕ್ ಉಗ್ರರು ಡ್ರೋಣ್ ಬಳಕೆ ಮಾಡುತ್ತಿರುವುದನ್ನು ಈಗಾಗಲೇ ಸೇನಾಪಡೆ ಪತ್ತೆ ಮಾಡಿದ್ದು, ಹಲವು ಬಾರಿ ಡ್ರೋಣ್ ಗಳನ್ನು ಹೊಡೆದುರುಳಿಸಿತ್ತು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm