ಬ್ರೇಕಿಂಗ್ ನ್ಯೂಸ್
22-02-23 05:17 pm HK News Desk ದೇಶ - ವಿದೇಶ
ನವದೆಹಲಿ, ಫೆ.22 : ಕರ್ನಾಟಕದ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಬೇಕೆಂದು ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದು ಅರ್ಜಿ ವಿಚಾರಣೆಗೆ ಎತ್ತಿಕೊಳ್ಳಲು ಮುಖ್ಯ ನ್ಯಾಯಾಧೀಶ ಡಿವೈ ಚಂದ್ರಚೂಡ್ ತೀರ್ಮಾನಿಸಿದ್ದಾರೆ.
ಶಾಲೆ, ಕಾಲೇಜುಗಳಲ್ಲಿ ತರಗತಿ ಒಳಗೆ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ನಿಷೇಧಿಸುವ ಕರ್ನಾಟಕ ಸರ್ಕಾರದ ಆದೇಶದ ಕುರಿತು ಕಳೆದ ಅಕ್ಟೋಬರ್ ನಲ್ಲಿ ಸುಪ್ರೀಂ ಕೋರ್ಟ್ ಭಿನ್ನ ತೀರ್ಪು ನೀಡಿತ್ತು. ಅಲ್ಲದೆ, ಈ ಬಗ್ಗೆ ವಿಸ್ತೃತ ಪೀಠಕ್ಕೆ ವರ್ಗಾಯಿಸುವಂತೆ ದ್ವಿಸದಸ್ಯ ಪೀಠದ ನ್ಯಾಯಾಧೀಶರು ಕೇಳಿಕೊಂಡಿದ್ದರು. ಈ ನಡುವೆ, ಕರ್ನಾಟಕ ಸರ್ಕಾರದ ಹಿಜಾಬ್ ನಿಷೇಧ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸುಪ್ರೀಂ ಕೋರ್ಟಿನಲ್ಲಿ ಉಳಿದುಕೊಂಡಿದ್ದು ಒಂದಷ್ಟು ವಿದ್ಯಾರ್ಥಿನಿಯರು ಬೇರೆ ಖಾಸಗಿ ಶಾಲೆಗೆ ಸೇರಿದ್ದರೆ ಬಡ ಕುಟುಂಬದ ವಿದ್ಯಾರ್ಥಿಗಳು ಸರಕಾರಿ ಶಾಲೆಯಲ್ಲೇ ಮುಂದುವರಿದಿದ್ದರು.

ಈ ಬಾರಿ ಮಾರ್ಚ್ 9 ರಿಂದ ಶಾಲೆಗಳಲ್ಲಿ ಪರೀಕ್ಷೆ ಆರಂಭಗೊಳ್ಳುತ್ತಿದ್ದು ವಿದ್ಯಾರ್ಥಿನಿಯರು ಪರೀಕ್ಷೆಗೆ ಹಿಜಾಬ್ ಹಾಕಿಯೇ ಹಾಜರಾಗಬೇಕಿದೆ. ಹಿಜಾಬ್ ಹಾಕಲಾಗದು ಎಂದು ಪರೀಕ್ಷೆ ಬರೆಯದೇ ಉಳಿದರೆ ಒಂದು ವರ್ಷ ವೇಸ್ಟ್ ಆಗುತ್ತದೆ. ಹೀಗಾಗಿ ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠಕ್ಕೆ ವಕೀಲರ ಮೂಲಕ ವಿದ್ಯಾರ್ಥಿನಿಯರು ಮನವಿ ಮಾಡಿದ್ದಾರೆ.
ಕಳೆದ ವರ್ಷ ಅಕ್ಟೋಬರ್ 13 ರಂದು ವಿಭಜಿತ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ಹಿಜಾಬ್ ವಿವಾದಕ್ಕೆ ಶಾಶ್ವತ ಪರಿಹಾರ ನೀಡಿರಲಿಲ್ಲ. ಹಿಜಾಬ್ ವಿವಾದ ಕುರಿತು ತೀರ್ಪು ನೀಡಲು ತ್ರಿಸದಸ್ಯ ಪೀಠ ಸ್ಥಾಪಿಸುವುದಾಗಿ ಕಳೆದ ತಿಂಗಳು ಸುಪ್ರೀಂ ಕೋರ್ಟ್ ಹೇಳಿತ್ತು. ಇದರ ನಡುವೆ, ತುರ್ತಾಗಿ ಪರೀಕ್ಷೆ ಬರೆಯಲು ಅನುಮತಿ ನೀಡಬೇಕೆಂದು ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟಿನಲ್ಲಿ ಕೇಳಿಕೊಂಡಿದ್ದಾರೆ. ಆಮೂಲಕ ಹಿಜಾಬ್ ವಿಚಾರವನ್ನು ಮತ್ತೆ ಈ ಬಾರಿಯೂ ಪರೀಕ್ಷೆ ಸಂದರ್ಭದಲ್ಲಿ ಜೀವಂತ ಆಗಿಸಲು ಪ್ರಯತ್ನ ಸಾಗಿದೆ.
The hijab issue that came to the forefront last year in Mangaluru is back in focus with Supreme Court CJI DY Chandrachud saying that he will consider the Muslim girls’ plea seeking interim relief to allow them to attend exams in the government colleges, reported legal news website Live Law.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am