ಬ್ರೇಕಿಂಗ್ ನ್ಯೂಸ್
24-02-23 08:03 pm HK News Desk ದೇಶ - ವಿದೇಶ
ತಿರುವನಂತಪುರಂ, ಫೆ.24 : ಕೋಜಿಕ್ಕೋಡ್ ನಿಂದ ಸೌದಿಯ ದಮ್ಮಾಮ್ ಹೊರಟಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ತಾಂತ್ರಿಕ ದೋಷದಿಂದಾಗಿ ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿ ತಾಂತ್ರಿಕ ತೊಂದರೆ ತಿಳಿಯುತ್ತಿದ್ದಂತೆ ಪೈಲಟ್ ಎಮೆರ್ಜೆನ್ಸಿ ಲ್ಯಾಂಡಿಂಗ್ ಮಾಡಲು ಮುಂದಾಗಿದ್ದು ಇದೇ ವೇಳೆ ವಿಮಾನದಲ್ಲಿದ್ದ ಹೆಚ್ಚುವರಿ ಇಂಧನವನ್ನು ಸಮುದ್ರಕ್ಕೆ ಸುರಿದು ಅಪಾಯ ದೂರ ಮಾಡಿದ್ದಾರೆ.
ಕೋಜಿಕ್ಕೋಡ್ ವಿಮಾನ ನಿಲ್ದಾಣದಿಂದ ಬೆಳಗ್ಗೆ 9.30ರ ವೇಳೆಗೆ ಟೇಕಾಫ್ ಆಗಿದ್ದ ವಿಮಾನದ ಹಿಂಭಾಗ ರನ್ ವೇಗೆ ಬಡಿದಿದೆ ಎನ್ನಲಾಗುತ್ತಿದ್ದು, ಇದರಿಂದ ಹೈಡ್ರಾಲಿಕ್ ಬ್ರೇಕ್ ನಲ್ಲಿ ಸಮಸ್ಯೆ ಉಂಟಾಗಿತ್ತು. ಕೂಡಲೇ ವಿಮಾನವನ್ನು ತುರ್ತು ಲ್ಯಾಂಡ್ ಮಾಡಬೇಕೆಂದು ಪೈಲಟ್ ಸೂಚನೆ ರವಾನಿಸಿದ್ದರು. ಕೊಚ್ಚಿ ಅಥವಾ ತಿರುವನಂತಪುರ ನಿಲ್ದಾಣಕ್ಕೆ ಒಯ್ಯಬೇಕಾಗಿತ್ತು. ವಿಮಾನದಲ್ಲಿ ಸುಮಾರು168 ಮಂದಿ ಪ್ರಯಾಣಿಕರಿದ್ದು ಸೌದಿ ಅರೇಬಿಯಾಗೆ ತೆರಳುತ್ತಿದ್ದರು. ವಿಮಾನದಲ್ಲಿ ಸಮಸ್ಯೆ ಆಗಿರುವುದು ತಿಳಿಯುತ್ತಿದ್ದಂತೆ ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದರು.

ಆಕಾಶದಿಂದಲೇ ಸಮುದ್ರಕ್ಕೆ ಇಂಧನ ಸುರಿದ ಪೈಲಟ್
ವಿಮಾನವನ್ನು ತುರ್ತು ಭೂಸ್ಪರ್ಶ ಮಾಡುವ ವೇಳೆ ರನ್ ವೇ ವಿಮಾನದ ಹಿಂಭಾಗಕ್ಕೆ ಘರ್ಷಿಸಿದರೂ ಬೆಂಕಿ ಹೊತ್ತಿಕೊಳ್ಳುವ ಸಾಧ್ಯತೆ ಇದ್ದುದರಿಂದ ಪೈಲಟ್ ಕಾಳಜಿ ಮೆರೆದಿದ್ದಾರೆ. ಹಾಗಾಗಿ ವಿಮಾನವನ್ನು ಸಮುದ್ರ ಮಾರ್ಗದಲ್ಲಿ ಹಾರಿಸಿ, ಆಕಾಶದಿಂದಲೇ ಸಮುದ್ರಕ್ಕೆ ಹೆಚ್ಚುವರಿ ಇಂಧನವನ್ನು ಸುರಿಯುವಂತೆ ಮಾಡಿದ್ದಾರೆ. ಆನಂತರ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.

ಲ್ಯಾಂಡಿಂಗ್ ವೇಳೆ ಎಮರ್ಜೆನ್ಸಿ ಘೋಷಣೆ
ವಿಮಾನ ತುರ್ತು ಭೂಸ್ಪರ್ಶ ಆಗುತ್ತಿದ್ದ ಹಿನ್ನೆಲೆಯಲ್ಲಿ ಯಾವುದೇ ಸ್ಥಿತಿಯನ್ನು ಎದುರಿಸುವುದಕ್ಕೂ ಸಜ್ಜಾಗಿರುವಂತೆ ತಿರುವನಂತಪುರ ಏರ್ಪೋರ್ಟ್ ನಲ್ಲಿ ಸಂಪೂರ್ಣ ತುರ್ತು ಸ್ಥಿತಿ ಘೋಷಣೆ ಮಾಡಲಾಗಿತ್ತು. ವಿಮಾನ ಅಪಘಾತಕ್ಕೀಡಾದರೆ ತೆಗೆದುಕೊಳ್ಳಬೇಕಾದ ರಕ್ಷಣಾ ಕ್ರಮಗಳಿಗೆ ಸಿದ್ಧತೆ ಕೈಗೊಳ್ಳಲಾಗಿತ್ತು. ಅಗ್ನಿಶಾಮಕ ವಾಹನಗಳು, ರಕ್ಷಣಾ ಸಿಬ್ಬಂದಿ ಸರ್ವ ಸನ್ನದ್ಧರಾಗಿದ್ದರು.
A Saudi Arabia-bound Air India Express flight, that took off from Kozhikode international airport on Friday morning, made an emergency landing here after it developed a technical snag. After it developed a snag in its hydraulic systems, the flight en route to Dammam, was given permission to land at the international airport here around 12.15 pm. All the 182 passengers and crew are safe.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am