ಬ್ರೇಕಿಂಗ್ ನ್ಯೂಸ್
05-08-20 05:37 am Headline Karnataka News Network ದೇಶ - ವಿದೇಶ
ಬೈರುತ್, ಆಗಸ್ಟ್ 5: ಲೆಬನಾನ್ ರಾಜಧಾನಿ ಬೈರುತ್ ನಲ್ಲಿ ನಿನ್ನೆ ಸಂಭವಿಸಿದ ಭೀಕರ ಸ್ಫೋಟದಲ್ಲಿ 78 ಮಂದಿಯಷ್ಟು ಮೃತಪಟ್ಟಿದ್ದು, 4000ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಭೀಕರ ಸ್ಫೋಟದ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲೂ ವೈರಲ್ ಆಗುತ್ತಿದೆ.
ಕಳೆದ ಮೂರು ದಶಕಗಳಿಂದ ಲೆಬನಾನ್ ಯುದ್ಧಭೂಮಿಯಂತಾಗಿದ್ದು ಸ್ಪೋಟದ ಸದ್ದು , ಗುಂಡಿನ ಮೊರೆತ ಕಳೆದ ಕೆಲ ದಿನಗಳಿಂದ ತಗ್ಗಿದ್ದವು. ಆದರೆ ಈ ನಡುವೆ ಭೀಕರ ಸ್ಪೋಟ ಸಂಭವಿಸಿದೆ. ಬೈರುತ್ ನಗರದ ಬಂದರು ಪ್ರದೇಶದಲ್ಲಿ ಈ ಸ್ಪೋಟ ಸಂಭವಿಸಿದೆ. ಸ್ಪೋಟದ ಸದ್ದು 200 ಕಿಮೀ ದೂರದ ವರೆಗೆ ಅಪ್ಪಳಿಸಿದ್ದು ಸ್ಫೋಟದಿಂದಾಗಿ ಲೆಬನಾನ್ ನಗರದಲ್ಲಿ 3.7 ತೀವ್ರತೆಯ ಭೂಕಂಪ ಸಂಭವಿಸಿದೆ. ಸುಮಾರು 2 ಕಿ ಮೀ ನ ಸುತ್ತಳತೆಯಲ್ಲಿ ಕಟ್ಟಡಗಳಿಗೆ ಹಾನಿಯಾಗಿದೆ ಎನ್ನಲಾಗುತ್ತಿದೆ. ನ್ಯೂಕ್ಲಿಯರ್ ಬಾಂಬ್ ಸ್ಪೋಟದಂತೆ ಅಗಸದಲ್ಲಿ ಅಣಬೇ ಆಕೃತಿಯ ಹೊಗೆ ಸೃಷ್ಠಿಯಾಗಿತ್ತು ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ, ಬಂದರು ಪ್ರದೇಶದ ರಾಸಾಯನಿಕ ಗೋದಾಮಿನಲ್ಲಿ ಸ್ಪೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಅಲ್ಲಿ 2750 ಟನ್ ಅಮೋನಿಯಂ ನೈಟ್ರೇಟ್ ಶೇಖರಣೆ ಮಾಡಲಾಗಿತ್ತು. ಅದಕ್ಕೆ ಬೆಂಕಿ ಹತ್ತಿಕೊಂಡು ಸ್ಫೋಟ ಆಗಿರುವ ಬಗ್ಗೆ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಆದರೆ ಲೆಬನಾನ್ ಸರಕಾರ ಇದನ್ನು ಖಚಿತ ಪಡಿಸಿಲ್ಲ. ಲೆಬನಾನ್ ಸರ್ಕಾರದ ಅಧಿಕಾರಿಗಳು ಅಂತಾರಾಷ್ಟ್ರೀಯ ಮಾಧ್ಯಮಗಳಿಗೆ ಸ್ಪೋಟದ ಬಗ್ಗೆ ಮಾಹಿತಿ ನೀಡಿದ್ದರೂ ಸ್ಪೋಟಕ್ಕೆ ಕಾರಣ ತಿಳಿಸಿಲ್ಲ.
ಸ್ಪೋಟದ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದೃಶ್ಯದಲ್ಲಿ ಸ್ಪೋಟ ಸಂಭವಿಸಿದ ತಕ್ಷಣ ಕಿತ್ತಳೆ ಬಣ್ಣದಲ್ಲಿ ಗೋಪುರ ಆಕಾರದಲ್ಲಿ ಹೊಗೆ ಆಕಾಶದ ಎತ್ತರಕ್ಕೆ ಹಾರಿದೆ. ಅಲ್ಲದೆ, ಶಬ್ಧದ ತೀವ್ರತೆ ದೊಡ್ಡ ತರಂಗಗಳನ್ನು ಸೃಷ್ಟಿಸಿದೆ. ಪರಿಣಾಮ ಬಂದರು ಪ್ರದೇಶದಲ್ಲಿದ್ದ ಗೋದಾಮುಗಳು ಕಿಟಕಿ ಗಾಜುಗಳು ಮತ್ತು ಬಾಗಿಲುಗಳು ಹಾನಿಗೊಳಗಾಗಿವೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm