ಬ್ರೇಕಿಂಗ್ ನ್ಯೂಸ್
05-08-20 05:37 am Headline Karnataka News Network ದೇಶ - ವಿದೇಶ
ಬೈರುತ್, ಆಗಸ್ಟ್ 5: ಲೆಬನಾನ್ ರಾಜಧಾನಿ ಬೈರುತ್ ನಲ್ಲಿ ನಿನ್ನೆ ಸಂಭವಿಸಿದ ಭೀಕರ ಸ್ಫೋಟದಲ್ಲಿ 78 ಮಂದಿಯಷ್ಟು ಮೃತಪಟ್ಟಿದ್ದು, 4000ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಭೀಕರ ಸ್ಫೋಟದ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲೂ ವೈರಲ್ ಆಗುತ್ತಿದೆ.
ಕಳೆದ ಮೂರು ದಶಕಗಳಿಂದ ಲೆಬನಾನ್ ಯುದ್ಧಭೂಮಿಯಂತಾಗಿದ್ದು ಸ್ಪೋಟದ ಸದ್ದು , ಗುಂಡಿನ ಮೊರೆತ ಕಳೆದ ಕೆಲ ದಿನಗಳಿಂದ ತಗ್ಗಿದ್ದವು. ಆದರೆ ಈ ನಡುವೆ ಭೀಕರ ಸ್ಪೋಟ ಸಂಭವಿಸಿದೆ. ಬೈರುತ್ ನಗರದ ಬಂದರು ಪ್ರದೇಶದಲ್ಲಿ ಈ ಸ್ಪೋಟ ಸಂಭವಿಸಿದೆ. ಸ್ಪೋಟದ ಸದ್ದು 200 ಕಿಮೀ ದೂರದ ವರೆಗೆ ಅಪ್ಪಳಿಸಿದ್ದು ಸ್ಫೋಟದಿಂದಾಗಿ ಲೆಬನಾನ್ ನಗರದಲ್ಲಿ 3.7 ತೀವ್ರತೆಯ ಭೂಕಂಪ ಸಂಭವಿಸಿದೆ. ಸುಮಾರು 2 ಕಿ ಮೀ ನ ಸುತ್ತಳತೆಯಲ್ಲಿ ಕಟ್ಟಡಗಳಿಗೆ ಹಾನಿಯಾಗಿದೆ ಎನ್ನಲಾಗುತ್ತಿದೆ. ನ್ಯೂಕ್ಲಿಯರ್ ಬಾಂಬ್ ಸ್ಪೋಟದಂತೆ ಅಗಸದಲ್ಲಿ ಅಣಬೇ ಆಕೃತಿಯ ಹೊಗೆ ಸೃಷ್ಠಿಯಾಗಿತ್ತು ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ, ಬಂದರು ಪ್ರದೇಶದ ರಾಸಾಯನಿಕ ಗೋದಾಮಿನಲ್ಲಿ ಸ್ಪೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಅಲ್ಲಿ 2750 ಟನ್ ಅಮೋನಿಯಂ ನೈಟ್ರೇಟ್ ಶೇಖರಣೆ ಮಾಡಲಾಗಿತ್ತು. ಅದಕ್ಕೆ ಬೆಂಕಿ ಹತ್ತಿಕೊಂಡು ಸ್ಫೋಟ ಆಗಿರುವ ಬಗ್ಗೆ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಆದರೆ ಲೆಬನಾನ್ ಸರಕಾರ ಇದನ್ನು ಖಚಿತ ಪಡಿಸಿಲ್ಲ. ಲೆಬನಾನ್ ಸರ್ಕಾರದ ಅಧಿಕಾರಿಗಳು ಅಂತಾರಾಷ್ಟ್ರೀಯ ಮಾಧ್ಯಮಗಳಿಗೆ ಸ್ಪೋಟದ ಬಗ್ಗೆ ಮಾಹಿತಿ ನೀಡಿದ್ದರೂ ಸ್ಪೋಟಕ್ಕೆ ಕಾರಣ ತಿಳಿಸಿಲ್ಲ.
ಸ್ಪೋಟದ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದೃಶ್ಯದಲ್ಲಿ ಸ್ಪೋಟ ಸಂಭವಿಸಿದ ತಕ್ಷಣ ಕಿತ್ತಳೆ ಬಣ್ಣದಲ್ಲಿ ಗೋಪುರ ಆಕಾರದಲ್ಲಿ ಹೊಗೆ ಆಕಾಶದ ಎತ್ತರಕ್ಕೆ ಹಾರಿದೆ. ಅಲ್ಲದೆ, ಶಬ್ಧದ ತೀವ್ರತೆ ದೊಡ್ಡ ತರಂಗಗಳನ್ನು ಸೃಷ್ಟಿಸಿದೆ. ಪರಿಣಾಮ ಬಂದರು ಪ್ರದೇಶದಲ್ಲಿದ್ದ ಗೋದಾಮುಗಳು ಕಿಟಕಿ ಗಾಜುಗಳು ಮತ್ತು ಬಾಗಿಲುಗಳು ಹಾನಿಗೊಳಗಾಗಿವೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm