ಬ್ರೇಕಿಂಗ್ ನ್ಯೂಸ್
28-02-23 03:46 pm HK News Desk ದೇಶ - ವಿದೇಶ
ಮುಂಬೈ, ಫೆ.28 : ಪಾಕಿಸ್ತಾನ, ಚೀನಾ ಮತ್ತು ಹಾಂಕಾಂಗ್ನಲ್ಲಿ ತರಬೇತಿ ಪಡೆದ `ಡೇಂಜರಸ್’ ವ್ಯಕ್ತಿಯೊಬ್ಬ ಮುಂಬೈ ಪ್ರವೇಶಿಸಿದ್ದಾನೆ ಎನ್ನಲಾಗುತ್ತಿದೆ. ಈ ಬಗ್ಗೆ ನಿಗಾ ವಹಿಸುವಂತೆ ರಾಷ್ಟ್ರೀಯ ತನಿಖಾ ದಳ ಮುಂಬೈ ಪೊಲೀಸರಿಗೆ ಇ-ಮೇಲ್ ಸಂದೇಶ ರವಾನಿಸಿದೆ.
ಡೇಂಜರಸ್ ವ್ಯಕ್ತಿಯನ್ನು ಮಧ್ಯಪ್ರದೇಶದ ಇಂದೋರ್ ಮೂಲದ ಸರ್ಫರಾಜ್ ಮೆಮನ್ ಎಂದು ಎನ್ಐಎ ಗುರುತಿಸಿದೆ. ಈತ ಈಗಾಗಲೇ ಮುಂಬೈ ಪ್ರವೇಶ ಮಾಡಿದ್ದಾನೆ. ಉಗ್ರ ಕೃತ್ಯಗಳನ್ನು ಎಸಗುವ ಸಾಧ್ಯತೆಯಿದೆ ಎಂದು ಇ-ಮೇಲ್ನಲ್ಲಿ ಎಚ್ಚರಿಕೆ ನೀಡಿದೆ. ಜೊತೆಗೆ ಆತನ ಆಧಾರ್ ಮಾಹಿತಿ, ವಾಹನ ಚಾಲನಾ ಪರವಾನಗಿ, ಪಾಸ್ಪೋರ್ಟ್ ಮತ್ತಿತರ ಮಾಹಿತಿಗಳನ್ನ ಎನ್ಐಎ ಮುಂಬೈ ಪೊಲೀಸರಿಗೆ ರವಾನಿಸಿದೆ.
ಮುಂಬೈ ನಗರದಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದ್ದು, ಮಧ್ಯಪ್ರದೇಶದ ಇಂದೋರ್ ಪೊಲೀಸರಿಗೂ ಈ ಬಗೆಗಿನ ಮಾಹಿತಿ ರವಾನಿಸಿದೆ. ಕಳೆದ ಶನಿವಾರವಷ್ಟೇ ಮಹಾರಾಷ್ಟ್ರ ಮೂಲದ ಖಾಲಿದ್ ಮುಬಾರಕ್ (21) ಮತ್ತು ತಮಿಳುನಾಡು ಮೂಲದ ಅಬ್ದುಲ್ಲಾ (26) ಎಂಬಿಬ್ಬರು ಶಸ್ತ್ರಾಸ್ತ್ರ ತರಬೇತಿ ಪಡೆಯಲು ಪಾಕಿಸ್ತಾನಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ದೆಹಲಿ ಪೊಲೀಸರ ವಿಶೇಷ ಪಡೆ ಬಂಧಿಸಿತ್ತು. ಇದರ ಬೆನ್ನಲ್ಲೇ ಡೇಂಜರಸ್ ವ್ಯಕ್ತಿಯ ಸುಳಿವು ಆತಂಕ ಮೂಡಿಸಿದೆ.
ಶನಿವಾರ ದೆಹಲಿಯಲ್ಲಿ ಸಿಕ್ಕಿಬಿದ್ದ ಇಬ್ಬರೂ ವ್ಯಕ್ತಿಗಳು ಅಕ್ರಮವಾಗಿ ಗಡಿದಾಟುವ ಮೂಲಕ ಪಾಕಿಸ್ತಾನಕ್ಕೆ ತೆರಳಿ ಅಲ್ಲಿ ಶಸ್ತ್ರಾಸ್ತ್ರ ಬಳಕೆ ತರಬೇತಿ ಪಡೆಯಲು ನಿರ್ಧರಿಸಿದ್ದರು. ಫೆಬ್ರವರಿ 14ರಂದೇ ಪಾಕ್ ಮೂಲದ ಹ್ಯಾಂಡ್ಲರ್ ಸಹಾಯದಿಂದ ಭಯೋತ್ಪಾದನಾ ಘಟಕದ ಬಗ್ಗೆ ನಿಷ್ಠೆ ಹೊಂದಿರುವ ಕೆಲ ಉಗ್ರಗಾಮಿಗಳು ಪಾಕ್ಗೆ ತೆರಳಲು ಸಂಚು ರೂಪಿಸಿದ್ದ ವೇಳೆ ಇಬ್ಬರೂ ಸಿಕ್ಕಿಬಿದ್ದಿದ್ದರು. ಈ ವೇಳೆ ಅವರಿಂದ 2 ಪಿಸ್ತೂಲ್, 10 ಸಜೀವ ಗುಂಡು, ಚಾಕು, ವೈರ್ ಕಟರ್ ವಶಪಡಿಸಿಕೊಳ್ಳಲಾಗಿತ್ತು.
The National Investigation Agency (NIA) has informed Mumbai Police to be alert via email, saying that a dangerous man has entered the financial capital of the country. The investigating agency has been on alert since it received this input.The NIA mentions the word "dangerous" in its email asking Mumbai Police to be alert. In its email, the NIA mentioned the name of the suspect as Sarfaraz Memon and said that he has reached Mumbai, sources told
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm