ಬ್ರೇಕಿಂಗ್ ನ್ಯೂಸ್
21-03-23 04:52 pm HK News Desk ದೇಶ - ವಿದೇಶ
ತಿರುವನಂತಪುರಂ, ಮಾ.21: ಕೇಂದ್ರ ಸರಕಾರ ರಬ್ಬರ್ ಬೆಳೆಗಾರರ ನೆರವಿಗೆ ಬಂದರೆ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡುತ್ತೇವೆ ಎಂದು ಉತ್ತರ ಕೇರಳದ ಸೀರೋ ಮಲಬಾರ್ ಕೆಥೋಲಿಕ್ ಚರ್ಚ್ ಬಿಷಪ್ ಜೋಸೆಫ್ ಪಂಪ್ಲಾನಿ ಹೇಳಿಕೆ ನೀಡಿದ್ದು, ಕೇರಳ ರಾಜಕೀಯದಲ್ಲಿ ಹೊಸ ಬಿರುಗಾಳಿ ಎಬ್ಬಿಸಿದೆ.
ಆರೆಸ್ಸೆಸ್ ಮುಖ್ಯಸ್ಥ ಮೋಹನ ಭಾಗವತ್ ಇತ್ತೀಚೆಗೆ ಕೇರಳದಲ್ಲಿ ನಾವು ಕ್ರಿಸ್ತಿಯನ್ ಸಮುದಾಯದ ಜೊತೆಗೆ ಮಾತುಕತೆಗೆ ಸಿದ್ಧರಿದ್ದೇವೆ ಎಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಕೇರಳದಲ್ಲಿ ಪ್ರಬಲವಾಗಿರುವ ಕ್ರಿಸ್ತಿಯನ್ ಸಮುದಾಯದ ಕೆಥೋಲಿಕ್ ಪ್ರಮುಖರು ಪ್ರತಿಕ್ರಿಯೆ ರೂಪದಲ್ಲಿ ಹೇಳಿಕೆ ನೀಡಿದ್ದಾರೆ. ಕಣ್ಣೂರಿನಲ್ಲಿ ಕೆಥೋಲಿಕ್ ಅಸೋಸಿಯೇಶನ್ ಕರೆದಿದ್ದ ರಬ್ಬರ್ ಬೆಳಗಾರರ ಸಮಾವೇಶದಲ್ಲಿ ಬಿಷಪ್ ಜೋಸೆಫ್ ಪಂಪ್ಲಾನಿ ಈ ಹೇಳಿಕೆ ನೀಡಿದ್ದಾರೆ.
ರಬ್ಬರ್ ಬೆಲೆ ವಿಪರೀತ ಕುಸಿತ ಆಗಿದೆ. ಇದಕ್ಕೆ ಯಾರು ಹೊಣೆ. ಯಾರನ್ನು ನಾವು ದೂರಬೇಕು. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷವು ರಬ್ಬರ್ ಬೆಳೆಗಾರರ ಪರವಾಗಿ ನಿಂತರೆ, ರಬ್ಬರ್ ಬೆಲೆ ಕೇಜಿಗೆ 250 ರೂ.ಗೆ ಏರಿಕೆಯಾಗುತ್ತದೆ. ನಾವು ಪ್ರಜಾಪ್ರಭುತ್ವದಲ್ಲಿ ಯಾವುದೇ ಪ್ರತಿಭಟನೆ ಮತಗಳಾಗಿ ಪರಿವರ್ತನೆಯಾದರೆ ಮಾತ್ರ ಅದರ ಲಾಭ ದೊರಕುವುದು ಎನ್ನುವುದನ್ನು ಅರ್ಥ ಮಾಡಬೇಕು. ನಾವು ಕೇಂದ್ರ ಸರಕಾರಕ್ಕೆ ಹೇಳಬೇಕಾಗಿದೆ, ನೀವು ನಮ್ಮ ರಬ್ಬರನ್ನು ಕಿಲೋಗೆ 300 ರೂ.ನಂತೆ ಖರೀದಿ ಮಾಡಿದರೆ ನಮ್ಮ ಮತವನ್ನು ನಿಮಗೆ ಕೊಡಲು ಸಿದ್ಧವೆಂದು. ಇದರಿಂದ ಕೇರಳದಲ್ಲಿ ಒಬ್ಬ ಸಂಸದನನ್ನೂ ಹೊಂದಿಲ್ಲದ ಬಿಜೆಪಿಗೆ ಒಳಿತಾಗಬಹುದು ಎಂದು ಬಿಷಪ್ ರಾಜಕೀಯದ ಮಾತುಗಳನ್ನು ಹೇಳಿದ್ದಾರೆ.
ಕಣ್ಣೂರು ಜಿಲ್ಲೆಯಲ್ಲಿ ರೈತರೇ ಪ್ರಬಲವಾಗಿರುವ ಆಲಕ್ಕೋಡ್ ನಲ್ಲಿ ಈ ಸಮಾವೇಶ ನಡೆದಿದ್ದು, ರೈತರ ಬೆಳೆಗಳಿಗೆ ಬೆಲೆ ಕುಸಿಯುವುದನ್ನು ಖಂಡಿಸಿ ರೈತರು ಸಭೆ ಸೇರಿದ್ದರು. ಈ ಭಾಗದಲ್ಲಿ ಕಾಡು ಪ್ರಾಣಿಗಳ ಹಾವಳಿಯಿಂದಲೂ ರೈತರು ಕಷ್ಟ ಪಡುತ್ತಿದ್ದಾರೆ. ನಮ್ಮ ಬೇಡಿಕೆ ಈಡೇರುವ ವರೆಗೂ ಪ್ರತಿಭಟನೆ ನಿಲ್ಲಿಸಬಾರದು. ಹಾಗಂತ, ನಮ್ಮ ಪ್ರತಿಭಟನೆ ಯಾವುದೇ ಸರಕಾರದ ವಿರುದ್ಧ ಅಲ್ಲ. ನಮ್ಮ ಬೆಳೆಗಾರರ ಹಿತ ಕಾಯುವುದು ಸರಕಾರದ ಕರ್ತವ್ಯ ಆಗಬೇಕಷ್ಟೇ ಎಂದು ಬಿಷಪ್ ಹೇಳಿದ್ದಾರೆ.
ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯಲಿದ್ದು, ಈ ಬಾರಿ ಕೇರಳದಲ್ಲಿ ಸ್ಥಾನ ಪಡೆಯಲು ಬಿಜೆಪಿ ಪ್ರಯತ್ನ ಮಾಡುತ್ತಿದೆ. ಇದಕ್ಕಾಗಿ ಜಿಲ್ಲಾ ಮಟ್ಟದಲ್ಲಿ ಕ್ರಿಸ್ತಿಯನ್ ಮುಖಂಡರ ಜೊತೆಗೆ ಮಾತುಕತೆಗೆ ಸಿದ್ಧರಿದ್ದೇವೆ ಎಂದು ಆರೆಸ್ಸೆಸ್ ಮುಖ್ಯಸ್ಥ ಭಾಗವತ್ ಹೇಳಿದ್ದರು.
The Kerala BJP’s bid to make inroads into the state’s Christian community has received a big boost, with the Syro-Malabar Catholic Church saying that it will support the BJP if the Central government takes steps to improve the condition of rubber cultivators. The Syro-Malabar Catholic Church represents a dominant segment of Christians in the southern state.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm