ಬ್ರೇಕಿಂಗ್ ನ್ಯೂಸ್
29-03-23 04:06 pm HK News Desk ದೇಶ - ವಿದೇಶ
ಮುಂಬೈ, ಮಾ.29: ಭೂಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ ಎಂಬಾತನನ್ನು ನಾಗಪುರ ಪೊಲೀಸರು ಬಂಧಿಸಿದ್ದು, ವಿಮಾನದ ಮೂಲಕ ನಾಗಪುರಕ್ಕೆ ಕೊಂಡೊಯ್ದಿದ್ದಾರೆ.
ಮಾ.21ರಂದು ನಾಗಪುರದ ನಿತಿನ್ ಗಡ್ಕರಿಯವರ ಕಚೇರಿಗೆ ಫೋನಾಯಿಸಿ ಹತ್ತು ಕೋಟಿ ರೂಪಾಯಿ ಬೇಡಿಕೆ ಇರಿಸಿದ್ದ. ಫೋನ್ ಮಾಡಿದ್ದ ವ್ಯಕ್ತಿ ತನ್ನನ್ನು ಜಯೇಶ್ ಪೂಜಾರಿ ಎಂದು ಹೇಳಿಕೊಂಡಿದ್ದ. ಈ ಬಗ್ಗೆ ಕಚೇರಿ ಉದ್ಯೋಗಿಯ ದೂರಿನಂತೆ ಎಫ್ಐಆರ್ ದಾಖಲಾಗಿತ್ತು.
ಕಳೆದ ಜನವರಿ 14ರಂದು ಇದೇ ರೀತಿ ಜಯೇಶ್ ಪೂಜಾರಿ ಹೆಸರಲ್ಲಿ ನೂರು ಕೋಟಿ ಬೇಡಿಕೆ ಇರಿಸಿ ನಾಗಪುರದ ಸಚಿವರ ಕಚೇರಿಗೆ ಫೋನ್ ಮಾಡಿ ಬೆದರಿಕೆ ಒಡ್ಡಲಾಗಿತ್ತು. ಆ ಸಂದರ್ಭದಲ್ಲಿ ಬೆಳಗಾವಿ ಜೈಲಿನಿಂದಲೇ ಫೋನ್ ಬಂದಿರುವುದನ್ನು ಪತ್ತೆ ಮಾಡಿ ಪೊಲೀಸರು ಜಯೇಶ್ ಪೂಜಾರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ತಾನು ಕರೆ ಮಾಡಿದ್ದಲ್ಲ ಎಂದು ಹೇಳಿಕೆ ನೀಡಿದ್ದರಿಂದ ಪೊಲೀಸರು ಬಿಟ್ಟು ಕಳುಹಿಸಿದ್ದರು.
ಆದರೆ ಇದೀಗ ಮತ್ತೆ ಅದೇ ರೀತಿಯ ಫೋನ್ ಕರೆ ಬಂದಿದ್ದು, ಹತ್ತು ಕೋಟಿ ನೀಡದಿದ್ದರೆ ಸಚಿವರ ಜೀವಕ್ಕೆ ಅಪಾಯ ಇದೆಯೆಂದು ಹೇಳಿದ್ದ. ನಾಗಪುರ ಪೊಲೀಸರು ಅಲರ್ಟ್ ಆಗಿದ್ದು, ಈ ಬಾರಿ ನೇರವಾಗಿ ಆರೋಪಿ ಜಯೇಶ್ ಪೂಜಾರಿಯನ್ನ ಹೊತ್ತೊಯ್ದಿದ್ದಾರೆ. ಜಯೇಶ್ ಪೂಜಾರಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದವನಾಗಿದ್ದು ಪ್ರಕರಣ ಒಂದರಲ್ಲಿ ಶಿಕ್ಷೆ ವಿಧಿಸಲ್ಪಟ್ಟು ಜೈಲು ಪಾಲಾಗಿದ್ದ.
Threat calls to Nitin Gadkari on Jayesh Pujari taken into custody from the Hindalga jail by nagpur police. Nagpur Police on Tuesday took into custody a murder case convict from a jail in Belagavi in Karnataka in connection with the threat calls made to the office of Union minister Nitin Gadkari on two occasions, an official said.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm