ಬ್ರೇಕಿಂಗ್ ನ್ಯೂಸ್
29-03-23 04:06 pm HK News Desk ದೇಶ - ವಿದೇಶ
ಮುಂಬೈ, ಮಾ.29: ಭೂಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ ಎಂಬಾತನನ್ನು ನಾಗಪುರ ಪೊಲೀಸರು ಬಂಧಿಸಿದ್ದು, ವಿಮಾನದ ಮೂಲಕ ನಾಗಪುರಕ್ಕೆ ಕೊಂಡೊಯ್ದಿದ್ದಾರೆ.
ಮಾ.21ರಂದು ನಾಗಪುರದ ನಿತಿನ್ ಗಡ್ಕರಿಯವರ ಕಚೇರಿಗೆ ಫೋನಾಯಿಸಿ ಹತ್ತು ಕೋಟಿ ರೂಪಾಯಿ ಬೇಡಿಕೆ ಇರಿಸಿದ್ದ. ಫೋನ್ ಮಾಡಿದ್ದ ವ್ಯಕ್ತಿ ತನ್ನನ್ನು ಜಯೇಶ್ ಪೂಜಾರಿ ಎಂದು ಹೇಳಿಕೊಂಡಿದ್ದ. ಈ ಬಗ್ಗೆ ಕಚೇರಿ ಉದ್ಯೋಗಿಯ ದೂರಿನಂತೆ ಎಫ್ಐಆರ್ ದಾಖಲಾಗಿತ್ತು.
ಕಳೆದ ಜನವರಿ 14ರಂದು ಇದೇ ರೀತಿ ಜಯೇಶ್ ಪೂಜಾರಿ ಹೆಸರಲ್ಲಿ ನೂರು ಕೋಟಿ ಬೇಡಿಕೆ ಇರಿಸಿ ನಾಗಪುರದ ಸಚಿವರ ಕಚೇರಿಗೆ ಫೋನ್ ಮಾಡಿ ಬೆದರಿಕೆ ಒಡ್ಡಲಾಗಿತ್ತು. ಆ ಸಂದರ್ಭದಲ್ಲಿ ಬೆಳಗಾವಿ ಜೈಲಿನಿಂದಲೇ ಫೋನ್ ಬಂದಿರುವುದನ್ನು ಪತ್ತೆ ಮಾಡಿ ಪೊಲೀಸರು ಜಯೇಶ್ ಪೂಜಾರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ತಾನು ಕರೆ ಮಾಡಿದ್ದಲ್ಲ ಎಂದು ಹೇಳಿಕೆ ನೀಡಿದ್ದರಿಂದ ಪೊಲೀಸರು ಬಿಟ್ಟು ಕಳುಹಿಸಿದ್ದರು.
ಆದರೆ ಇದೀಗ ಮತ್ತೆ ಅದೇ ರೀತಿಯ ಫೋನ್ ಕರೆ ಬಂದಿದ್ದು, ಹತ್ತು ಕೋಟಿ ನೀಡದಿದ್ದರೆ ಸಚಿವರ ಜೀವಕ್ಕೆ ಅಪಾಯ ಇದೆಯೆಂದು ಹೇಳಿದ್ದ. ನಾಗಪುರ ಪೊಲೀಸರು ಅಲರ್ಟ್ ಆಗಿದ್ದು, ಈ ಬಾರಿ ನೇರವಾಗಿ ಆರೋಪಿ ಜಯೇಶ್ ಪೂಜಾರಿಯನ್ನ ಹೊತ್ತೊಯ್ದಿದ್ದಾರೆ. ಜಯೇಶ್ ಪೂಜಾರಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದವನಾಗಿದ್ದು ಪ್ರಕರಣ ಒಂದರಲ್ಲಿ ಶಿಕ್ಷೆ ವಿಧಿಸಲ್ಪಟ್ಟು ಜೈಲು ಪಾಲಾಗಿದ್ದ.
Threat calls to Nitin Gadkari on Jayesh Pujari taken into custody from the Hindalga jail by nagpur police. Nagpur Police on Tuesday took into custody a murder case convict from a jail in Belagavi in Karnataka in connection with the threat calls made to the office of Union minister Nitin Gadkari on two occasions, an official said.
10-10-25 12:06 pm
Bangalore Correspondent
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
09-10-25 10:31 pm
HK News Desk
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
10-10-25 04:18 pm
Mangalore Correspondent
Bharath Kumdel Arrest, Abdul Rahiman Murder:...
10-10-25 02:02 pm
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಗಿಯಾದ ದಕ್ಷಿಣ ಕನ್ನಡ...
09-10-25 08:22 pm
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
13 ವರ್ಷಗಳ ಬಳಿಕ ಮನೆ ಸೇರಿದ ಯುವಕ ; ಪಿಯುಸಿ ಪರೀಕ್ಷ...
09-10-25 01:59 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm