ಬ್ರೇಕಿಂಗ್ ನ್ಯೂಸ್
29-03-23 04:06 pm HK News Desk ದೇಶ - ವಿದೇಶ
ಮುಂಬೈ, ಮಾ.29: ಭೂಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ ಎಂಬಾತನನ್ನು ನಾಗಪುರ ಪೊಲೀಸರು ಬಂಧಿಸಿದ್ದು, ವಿಮಾನದ ಮೂಲಕ ನಾಗಪುರಕ್ಕೆ ಕೊಂಡೊಯ್ದಿದ್ದಾರೆ.
ಮಾ.21ರಂದು ನಾಗಪುರದ ನಿತಿನ್ ಗಡ್ಕರಿಯವರ ಕಚೇರಿಗೆ ಫೋನಾಯಿಸಿ ಹತ್ತು ಕೋಟಿ ರೂಪಾಯಿ ಬೇಡಿಕೆ ಇರಿಸಿದ್ದ. ಫೋನ್ ಮಾಡಿದ್ದ ವ್ಯಕ್ತಿ ತನ್ನನ್ನು ಜಯೇಶ್ ಪೂಜಾರಿ ಎಂದು ಹೇಳಿಕೊಂಡಿದ್ದ. ಈ ಬಗ್ಗೆ ಕಚೇರಿ ಉದ್ಯೋಗಿಯ ದೂರಿನಂತೆ ಎಫ್ಐಆರ್ ದಾಖಲಾಗಿತ್ತು.
ಕಳೆದ ಜನವರಿ 14ರಂದು ಇದೇ ರೀತಿ ಜಯೇಶ್ ಪೂಜಾರಿ ಹೆಸರಲ್ಲಿ ನೂರು ಕೋಟಿ ಬೇಡಿಕೆ ಇರಿಸಿ ನಾಗಪುರದ ಸಚಿವರ ಕಚೇರಿಗೆ ಫೋನ್ ಮಾಡಿ ಬೆದರಿಕೆ ಒಡ್ಡಲಾಗಿತ್ತು. ಆ ಸಂದರ್ಭದಲ್ಲಿ ಬೆಳಗಾವಿ ಜೈಲಿನಿಂದಲೇ ಫೋನ್ ಬಂದಿರುವುದನ್ನು ಪತ್ತೆ ಮಾಡಿ ಪೊಲೀಸರು ಜಯೇಶ್ ಪೂಜಾರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ತಾನು ಕರೆ ಮಾಡಿದ್ದಲ್ಲ ಎಂದು ಹೇಳಿಕೆ ನೀಡಿದ್ದರಿಂದ ಪೊಲೀಸರು ಬಿಟ್ಟು ಕಳುಹಿಸಿದ್ದರು.
ಆದರೆ ಇದೀಗ ಮತ್ತೆ ಅದೇ ರೀತಿಯ ಫೋನ್ ಕರೆ ಬಂದಿದ್ದು, ಹತ್ತು ಕೋಟಿ ನೀಡದಿದ್ದರೆ ಸಚಿವರ ಜೀವಕ್ಕೆ ಅಪಾಯ ಇದೆಯೆಂದು ಹೇಳಿದ್ದ. ನಾಗಪುರ ಪೊಲೀಸರು ಅಲರ್ಟ್ ಆಗಿದ್ದು, ಈ ಬಾರಿ ನೇರವಾಗಿ ಆರೋಪಿ ಜಯೇಶ್ ಪೂಜಾರಿಯನ್ನ ಹೊತ್ತೊಯ್ದಿದ್ದಾರೆ. ಜಯೇಶ್ ಪೂಜಾರಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದವನಾಗಿದ್ದು ಪ್ರಕರಣ ಒಂದರಲ್ಲಿ ಶಿಕ್ಷೆ ವಿಧಿಸಲ್ಪಟ್ಟು ಜೈಲು ಪಾಲಾಗಿದ್ದ.
Threat calls to Nitin Gadkari on Jayesh Pujari taken into custody from the Hindalga jail by nagpur police. Nagpur Police on Tuesday took into custody a murder case convict from a jail in Belagavi in Karnataka in connection with the threat calls made to the office of Union minister Nitin Gadkari on two occasions, an official said.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm