ಬ್ರೇಕಿಂಗ್ ನ್ಯೂಸ್
29-03-23 04:06 pm HK News Desk ದೇಶ - ವಿದೇಶ
ಮುಂಬೈ, ಮಾ.29: ಭೂಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ ಎಂಬಾತನನ್ನು ನಾಗಪುರ ಪೊಲೀಸರು ಬಂಧಿಸಿದ್ದು, ವಿಮಾನದ ಮೂಲಕ ನಾಗಪುರಕ್ಕೆ ಕೊಂಡೊಯ್ದಿದ್ದಾರೆ.
ಮಾ.21ರಂದು ನಾಗಪುರದ ನಿತಿನ್ ಗಡ್ಕರಿಯವರ ಕಚೇರಿಗೆ ಫೋನಾಯಿಸಿ ಹತ್ತು ಕೋಟಿ ರೂಪಾಯಿ ಬೇಡಿಕೆ ಇರಿಸಿದ್ದ. ಫೋನ್ ಮಾಡಿದ್ದ ವ್ಯಕ್ತಿ ತನ್ನನ್ನು ಜಯೇಶ್ ಪೂಜಾರಿ ಎಂದು ಹೇಳಿಕೊಂಡಿದ್ದ. ಈ ಬಗ್ಗೆ ಕಚೇರಿ ಉದ್ಯೋಗಿಯ ದೂರಿನಂತೆ ಎಫ್ಐಆರ್ ದಾಖಲಾಗಿತ್ತು.
ಕಳೆದ ಜನವರಿ 14ರಂದು ಇದೇ ರೀತಿ ಜಯೇಶ್ ಪೂಜಾರಿ ಹೆಸರಲ್ಲಿ ನೂರು ಕೋಟಿ ಬೇಡಿಕೆ ಇರಿಸಿ ನಾಗಪುರದ ಸಚಿವರ ಕಚೇರಿಗೆ ಫೋನ್ ಮಾಡಿ ಬೆದರಿಕೆ ಒಡ್ಡಲಾಗಿತ್ತು. ಆ ಸಂದರ್ಭದಲ್ಲಿ ಬೆಳಗಾವಿ ಜೈಲಿನಿಂದಲೇ ಫೋನ್ ಬಂದಿರುವುದನ್ನು ಪತ್ತೆ ಮಾಡಿ ಪೊಲೀಸರು ಜಯೇಶ್ ಪೂಜಾರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ತಾನು ಕರೆ ಮಾಡಿದ್ದಲ್ಲ ಎಂದು ಹೇಳಿಕೆ ನೀಡಿದ್ದರಿಂದ ಪೊಲೀಸರು ಬಿಟ್ಟು ಕಳುಹಿಸಿದ್ದರು.
ಆದರೆ ಇದೀಗ ಮತ್ತೆ ಅದೇ ರೀತಿಯ ಫೋನ್ ಕರೆ ಬಂದಿದ್ದು, ಹತ್ತು ಕೋಟಿ ನೀಡದಿದ್ದರೆ ಸಚಿವರ ಜೀವಕ್ಕೆ ಅಪಾಯ ಇದೆಯೆಂದು ಹೇಳಿದ್ದ. ನಾಗಪುರ ಪೊಲೀಸರು ಅಲರ್ಟ್ ಆಗಿದ್ದು, ಈ ಬಾರಿ ನೇರವಾಗಿ ಆರೋಪಿ ಜಯೇಶ್ ಪೂಜಾರಿಯನ್ನ ಹೊತ್ತೊಯ್ದಿದ್ದಾರೆ. ಜಯೇಶ್ ಪೂಜಾರಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದವನಾಗಿದ್ದು ಪ್ರಕರಣ ಒಂದರಲ್ಲಿ ಶಿಕ್ಷೆ ವಿಧಿಸಲ್ಪಟ್ಟು ಜೈಲು ಪಾಲಾಗಿದ್ದ.
Threat calls to Nitin Gadkari on Jayesh Pujari taken into custody from the Hindalga jail by nagpur police. Nagpur Police on Tuesday took into custody a murder case convict from a jail in Belagavi in Karnataka in connection with the threat calls made to the office of Union minister Nitin Gadkari on two occasions, an official said.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm