ಬ್ರೇಕಿಂಗ್ ನ್ಯೂಸ್
10-04-23 03:38 pm HK News Desk ದೇಶ - ವಿದೇಶ
ನವೆದಹಲಿ, ಎ.10: ಪ್ರಯಾಣಿಕರೊಬ್ಬರು ಕ್ಯಾಬಿನ್ ಸಿಬ್ಬಂದಿಗೆ ಹೊಡೆದ ಹಿನ್ನೆಲೆಯಲ್ಲಿ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಸೋಮವಾರ ವಾಪಸ್ ದೆಹಲಿಗೆ ಮರಳಿದೆ. ಬಳಿಕ ಸಿಬ್ಬಂದಿ ಜತೆಗೆ ಜಗಳವಾಡಿದ ಪ್ರಯಾಣಿಕನನ್ನು ಪೊಲೀಸರಿಗೆ ಒಪ್ಪಿಸಿ, ಆತನ ವಿರುದ್ಧ ದೂರು ಕೂಡ ದಾಖಲಿಸಿದೆ.
ಸೋಮವಾರ ಬೆಳಗ್ಗೆ 6.35ಕ್ಕೆ ಏರ್ ಇಂಡಿಯಾ ವಿಮಾನವು ದಿಲ್ಲಿಯಿಂದ ಲಂಡನ್ ನಗರದತ್ತ ಪ್ರಯಾಣ ಬೆಳೆಸಿತು. ಆದರೆ, ಸ್ವಲ್ಪ ಹೊತ್ತಿನಲ್ಲೇ ಮತ್ತೆ ವಿಮಾನ ವಾಪಸ್ ದಿಲ್ಲಿಗೆ ಮರಳಿತು.
ಸೋವಾರ ಬೆಳಗ್ಗೆ 6.35ಕ್ಕೆ ದಿಲ್ಲಿ ವಿಮಾನ ನಿಲ್ದಾಣದಿಂದ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆ ಪ್ರಯಾಣಿಕರೊಬ್ಬರು ಸಿಬ್ಬಂದಿ ಜತೆಗೆ ಜಗಳವಾಡಲು ಆರಂಭಿಸಿದರು. ಆಗ ವಿಮಾನವು ಮತ್ತೆ ದಿಲ್ಲಿ ವಿಮಾನ ನಿಲ್ದಾಣಕ್ಕೆ ವಾಪಸ್ ಬಂದು, ಜಗಳವಾಡುತ್ತಿದ್ದ ಪ್ರಯಾಣಿಕನನ್ನು ಪೊಲೀಸರಿಗೆ ಒಪ್ಪಿಸಿ ಮತ್ತೆ ಲಂಡನ್ನತ್ತ ತನ್ನ ಪ್ರಯಾಣವನ್ನು ಬೆಳೆಸಿತು.
ಮೌಖಿಕ ಮತ್ತು ಲಿಖಿತ ಎಚ್ಚರಿಕೆಗಳಿಗೆ ಕಿವಿಗೊಡದೆ, ಪ್ರಯಾಣಿಕರು ಇಬ್ಬರು ಕ್ಯಾಬಿನ್ ಸಿಬ್ಬಂದಿಗೆ ದೈಹಿಕ ಹಲ್ಲೆ ಮಾಡುವುದು ಸೇರಿದಂತೆ ಅಶಿಸ್ತಿನ ವರ್ತನೆಯನ್ನು ಮುಂದುವರೆಸಿದರು.
ವಿಮಾನದಲ್ಲಿ ಸಿಬ್ಬಂದಿ ಜತೆ ಪ್ರಯಾಣಿಕರು ಅನುಚಿತವಾಗಿ ವರ್ತಿಸುವ, ಜಗಳವಾಡುತ್ತಿರುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿವೆ. ಕಳೆದ ತಿಂಗಳು ಲಂಡನ್ನಿಂದ ಮುಂಬೈ ಏರ್ ಇಂಡಿಯಾ ವಿಮಾನದ ಪ್ರಯಾಣಿಕರೊಬ್ಬರು ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡುತ್ತಿದ್ದರು. ಅವರ ಈ ಅಶಿಸ್ತಿನ ವರ್ತನೆಗಾಗಿ ಪ್ರಕರಣ ದಾಖಲಾಗಿತ್ತು. ಈ ವರ್ಷದ ಆರಂಭದಲ್ಲಿ, ನವೆಂಬರ್ ಮೂತ್ರ ವಿಸರ್ಜನೆ ಪ್ರಕರಣದಲ್ಲಿ ನಿಯಮಗಳನ್ನು ಅನುಸರಿಸಲು ವಿಫಲವಾದ ಕಾರಣ ಏರ್ ಇಂಡಿಯಾಗೆ ಸಂಸ್ಥೆಗೆ 30 ಲಕ್ಷ ರೂ. ದಂಡ ವಿಧಿಸಲಾಯಿತು. ನವೆಂಬರ್ 26 ರಂದು ನ್ಯೂಯಾರ್ಕ್-ದಿಲ್ಲಿ ವಿಮಾನದಲ್ಲಿ ಶಂಕರ್ ಮಿಶ್ರಾ ಎಂಬ ಪ್ರಯಾಣಿಕರು ಕುಡಿದ ಅಮಲಿನಲ್ಲಿ ವಯಸ್ಸಾದ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದರು. ಈ ಪ್ರಕರಣ ಭಾರೀ ಸುದ್ದಿ ಮಾಡಿತ್ತು.
An Air India London bound flight was forced to return to Delhi after an unruly passenger had a brawl with crew members mid-air. The flight returned to Delhi shortly after the take-off due to an unruly passenger. The flight has been rescheduled the flight to depart for London this afternoon, Air India said in a statement.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm