ಬ್ರೇಕಿಂಗ್ ನ್ಯೂಸ್
10-04-23 03:38 pm HK News Desk ದೇಶ - ವಿದೇಶ
ನವೆದಹಲಿ, ಎ.10: ಪ್ರಯಾಣಿಕರೊಬ್ಬರು ಕ್ಯಾಬಿನ್ ಸಿಬ್ಬಂದಿಗೆ ಹೊಡೆದ ಹಿನ್ನೆಲೆಯಲ್ಲಿ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಸೋಮವಾರ ವಾಪಸ್ ದೆಹಲಿಗೆ ಮರಳಿದೆ. ಬಳಿಕ ಸಿಬ್ಬಂದಿ ಜತೆಗೆ ಜಗಳವಾಡಿದ ಪ್ರಯಾಣಿಕನನ್ನು ಪೊಲೀಸರಿಗೆ ಒಪ್ಪಿಸಿ, ಆತನ ವಿರುದ್ಧ ದೂರು ಕೂಡ ದಾಖಲಿಸಿದೆ.
ಸೋಮವಾರ ಬೆಳಗ್ಗೆ 6.35ಕ್ಕೆ ಏರ್ ಇಂಡಿಯಾ ವಿಮಾನವು ದಿಲ್ಲಿಯಿಂದ ಲಂಡನ್ ನಗರದತ್ತ ಪ್ರಯಾಣ ಬೆಳೆಸಿತು. ಆದರೆ, ಸ್ವಲ್ಪ ಹೊತ್ತಿನಲ್ಲೇ ಮತ್ತೆ ವಿಮಾನ ವಾಪಸ್ ದಿಲ್ಲಿಗೆ ಮರಳಿತು.
ಸೋವಾರ ಬೆಳಗ್ಗೆ 6.35ಕ್ಕೆ ದಿಲ್ಲಿ ವಿಮಾನ ನಿಲ್ದಾಣದಿಂದ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆ ಪ್ರಯಾಣಿಕರೊಬ್ಬರು ಸಿಬ್ಬಂದಿ ಜತೆಗೆ ಜಗಳವಾಡಲು ಆರಂಭಿಸಿದರು. ಆಗ ವಿಮಾನವು ಮತ್ತೆ ದಿಲ್ಲಿ ವಿಮಾನ ನಿಲ್ದಾಣಕ್ಕೆ ವಾಪಸ್ ಬಂದು, ಜಗಳವಾಡುತ್ತಿದ್ದ ಪ್ರಯಾಣಿಕನನ್ನು ಪೊಲೀಸರಿಗೆ ಒಪ್ಪಿಸಿ ಮತ್ತೆ ಲಂಡನ್ನತ್ತ ತನ್ನ ಪ್ರಯಾಣವನ್ನು ಬೆಳೆಸಿತು.
ಮೌಖಿಕ ಮತ್ತು ಲಿಖಿತ ಎಚ್ಚರಿಕೆಗಳಿಗೆ ಕಿವಿಗೊಡದೆ, ಪ್ರಯಾಣಿಕರು ಇಬ್ಬರು ಕ್ಯಾಬಿನ್ ಸಿಬ್ಬಂದಿಗೆ ದೈಹಿಕ ಹಲ್ಲೆ ಮಾಡುವುದು ಸೇರಿದಂತೆ ಅಶಿಸ್ತಿನ ವರ್ತನೆಯನ್ನು ಮುಂದುವರೆಸಿದರು.
ವಿಮಾನದಲ್ಲಿ ಸಿಬ್ಬಂದಿ ಜತೆ ಪ್ರಯಾಣಿಕರು ಅನುಚಿತವಾಗಿ ವರ್ತಿಸುವ, ಜಗಳವಾಡುತ್ತಿರುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿವೆ. ಕಳೆದ ತಿಂಗಳು ಲಂಡನ್ನಿಂದ ಮುಂಬೈ ಏರ್ ಇಂಡಿಯಾ ವಿಮಾನದ ಪ್ರಯಾಣಿಕರೊಬ್ಬರು ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡುತ್ತಿದ್ದರು. ಅವರ ಈ ಅಶಿಸ್ತಿನ ವರ್ತನೆಗಾಗಿ ಪ್ರಕರಣ ದಾಖಲಾಗಿತ್ತು. ಈ ವರ್ಷದ ಆರಂಭದಲ್ಲಿ, ನವೆಂಬರ್ ಮೂತ್ರ ವಿಸರ್ಜನೆ ಪ್ರಕರಣದಲ್ಲಿ ನಿಯಮಗಳನ್ನು ಅನುಸರಿಸಲು ವಿಫಲವಾದ ಕಾರಣ ಏರ್ ಇಂಡಿಯಾಗೆ ಸಂಸ್ಥೆಗೆ 30 ಲಕ್ಷ ರೂ. ದಂಡ ವಿಧಿಸಲಾಯಿತು. ನವೆಂಬರ್ 26 ರಂದು ನ್ಯೂಯಾರ್ಕ್-ದಿಲ್ಲಿ ವಿಮಾನದಲ್ಲಿ ಶಂಕರ್ ಮಿಶ್ರಾ ಎಂಬ ಪ್ರಯಾಣಿಕರು ಕುಡಿದ ಅಮಲಿನಲ್ಲಿ ವಯಸ್ಸಾದ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದರು. ಈ ಪ್ರಕರಣ ಭಾರೀ ಸುದ್ದಿ ಮಾಡಿತ್ತು.
An Air India London bound flight was forced to return to Delhi after an unruly passenger had a brawl with crew members mid-air. The flight returned to Delhi shortly after the take-off due to an unruly passenger. The flight has been rescheduled the flight to depart for London this afternoon, Air India said in a statement.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm