ಬ್ರೇಕಿಂಗ್ ನ್ಯೂಸ್
10-04-23 06:53 pm HK News Desk ದೇಶ - ವಿದೇಶ
ನವದೆಹಲಿ, ಎ.10 : ಬಾಲಕನ ತುಟಿಗೆ ಮುತ್ತು ಕೊಡುತ್ತಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಬೌದ್ಧ ಧರ್ಮಗುರು ದಲೈಲಾಮಾ, ಬಾಲಕ ಮತ್ತು ಆತನ ಕುಟುಂಬಕ್ಕೆ ಕ್ಷಮೆ ಯಾಚಿಸಿದ್ದಾರೆ. ಅಲ್ಲದೇ, ದಲೈಲಾಮಾ ಅವರು ತಮ್ಮನ್ನು ಭೇಟಿಯಾಗುವ ಜನರನ್ನು ಮುಗ್ಧ ಹಾಗೂ ತಮಾಷೆ ರೀತಿಯಲ್ಲಿ ಕೀಟಲೆ ಮಾಡುತ್ತಾರೆ ಎಂದು ದಲೈಲಾಮಾ ಅವರ ತಂಡ ಹೇಳಿಕೆ ನೀಡಿದೆ.
ಕ್ಷಮೆ ಯಾಚನೆಯ ಟಿಪ್ಪಣಿಯನ್ನು ದಲೈಲಾಮಾ ತನ್ನ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. ಕ್ಷಮಾಪಣೆ ಟಿಪ್ಪಣಿಯನ್ನು ದಲೈಲಾಮಾ ಪರವಾದ ತಂಡ ಬರೆದುಕೊಂಡಿದ್ದು, ದಲೈಲಾಮಾ ವರ್ತನೆಯಿಂದ ನೋವಾಗಿದ್ದರೆ ಆ ಬಾಲಕ ಹಾಗೂ ಅವರ ಕುಟುಂಬ ಮತ್ತು ವಿಶ್ವಾದ್ಯಂತ ಇರುವ ಸ್ನೇಹಿತರಲ್ಲಿ ಅವರು ಕ್ಷಮೆ ಯಾಚಿಸುತ್ತಾರೆ. ದಲೈಲಾಮಾ ಅವರು ತಮ್ಮನ್ನು ಭೇಟಿಯಾಗುವ ಜನರನ್ನು ಮುಗ್ಧ ಮತ್ತು ತಮಾಷೆಯ ರೀತಿಯಲ್ಲಿ ನೋಡುತ್ತಾರೆ. ಈ ಘಟನೆಯ ಬಗ್ಗೆ ಅವರು ವಿಷಾದ ವ್ಯಕ್ತಪಡಿಸುತ್ತಾರೆ ಎಂದು ಹೇಳಿದ್ದಾರೆ.

ವೈರಲ್ ಆದ ವಿಡಿಯೋದಲ್ಲಿ ದಲೈಲಾಮಾ ಬಾಲಕನ ತುಟಿಗಳಿಗೆ ಮುತ್ತಿಡುತ್ತಾ ಹಣೆ ಸ್ಪರ್ಶಿಸುತ್ತಿರುವ ದೃಶ್ಯ ಇತ್ತು. ಅಲ್ಲದೆ, ತಮ್ಮ ನಾಲಿಗೆಯನ್ನು ಹೊರಹಾಕಿ ನಾಲಿಗೆಯನ್ನು ನೆಕ್ಕುವಂತೆ ಹೇಳಿರುವ ದೃಶ್ಯಗಳು ಅದೇ ವಿಡಿಯೋದಲ್ಲಿವೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ದಲೈಲಾಮಾ ವಿರುದ್ಧ ಕಿಡಿಕಾರಿದ್ದರು.

ನೊಬೆಲ್ ಶಾಂತಿ ಪ್ರಶಸ್ತಿ ವಿಜೇತರಾಗಿರುವ ದಲೈಲಾಮಾ ಈ ಹಿಂದೆ 2019ರಲ್ಲಿ ಇದೇ ರೀತಿಯ ವಿವಾದ ಸೃಷ್ಟಿಸಿಕೊಂಡಿದ್ದರು. ತಮ್ಮ ಉತ್ತರಾಧಿಕಾರಿ ಮಹಿಳೆಯಾಗಬೇಕಾದರೆ ಅವರು ನೋಡಲು ಆಕರ್ಷಕವಾಗಿರಬೇಕು ಎಂದು ಹೇಳಿದ್ದರು. ಅದು ವಿವಾದವಾದ ಬಳಿಕ ಕ್ಷಮೆ ಯಾಚಿಸಿದ್ದರು. ಬಿಬಿಸಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ದಲೈಲಾಮಾ, ಮಹಿಳಾ ದಲೈಲಾಮಾ ಬರಬೇಕೆಂದರೆ ಅವಳು ಹೆಚ್ಚು ಆಕರ್ಷಕವಾಗಿರಬೇಕು ಎಂದು ಹೇಳಿದ್ದು ವಿವಾದಕ್ಕೆ ಒಳಗಾಗಿತ್ತು.
The Dalai Lama has apologised to a young boy after a video emerged online of the spiritual Tibetan Buddhist leader kissing him on the lips and asking him to suck his tongue. The disturbing video of the most senior spiritual figure in Tibetan Buddhism was recorded during an event in northern India's hillside city of Dharamshala back in February.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm